ಉದ್ಯೋಗ ಖಾತ್ರಿ ಹಣ ಕನ್ನಡಿಯೊಳಗಿನ ಗಂಟು


Team Udayavani, Apr 10, 2017, 1:06 PM IST

dvg7.jpg

ಹೊನ್ನಾಳಿ: ಉದ್ಯೋಗ ಖಾತ್ರಿ ಹಣ ಕನ್ನಡಿಯೊಳಗಿನ ಗಂಟು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ತಾಲೂಕಿನ ಬೆಳಗುತ್ತಿ ಗ್ರಾಮದ ಇಸ್ರಾಪುರ ಬಾಳೆಕಟ್ಟೆ ಕೆರೆ ಹೂಳೆತ್ತುವುದು ಸೇರಿದಂತೆ ರಸ್ತೆ ಅಭಿವೃದ್ಧಿ ಮತ್ತಿತರ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಉದ್ಯೋಗ ಖಾತ್ರಿ ಯೋಜನೆಯಡಿ ಸಾಕಷ್ಟು ಅನುದಾನವಿದೆ. ಆದರೆ ಕೂಲಿ ಕಾರ್ಮಿಕರು ಸಾಕಷ್ಟು  ಸಂಖ್ಯೆಯಲ್ಲಿ ಸಿಗುತ್ತಿಲ್ಲ. ಮತ್ತೆ ಕೆಲವೆಡೆ ಗುತ್ತಿಗೆದಾರರೇ ಮುಂಗಡವಾಗಿ ಕಾರ್ಮಿಕರಿಗೆ ಹಣ ನೀಡಿ ಕೆಲಸ ಮಾಡಿಸುತ್ತಾರೆ. ಆದರೆ ನಂತರದ ದಿನಗಳಲ್ಲಿ ಜಾಬ್‌  ಕಾರ್ಡ್‌ ಹೊಂದಿರುವ ಕಾರ್ಮಿಕರು ತಮ್ಮ ಖಾತೆಗಳಿಗೆ ಸಂದಾಯವಾದ ಹಣವನ್ನು ಬಿಡಿಸಿಕೊಡುವಲ್ಲಿ ಅನಗತ್ಯ ವಿಳಂಬ ಮಾಡುತ್ತಾರೆ.

ಇದರಿಂದ ಗುತ್ತಿಗೆದಾರರು ನಷ್ಟ ಅನುಭವಿಸುವಂತಾಗುತ್ತದೆ. ಕಾಮಗಾರಿಗಳನ್ನು ನಿರ್ವಹಿಸಲು ಯಾರೂ ಮುಂದೆ ಬರುತ್ತಿಲ್ಲ. ಈ ಕಾರಣಕ್ಕಾಗಿ ಉದ್ಯೋಗ ಖಾತ್ರಿ ಹಣ ಕನ್ನಡಿಯೊಳಗಿನ ಗಂಟಿನಂತಾಗಿದೆ ಎಂದು ಅಭಿಪ್ರಾಯಪಟ್ಟರು. ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಕಾಮಗಾರಿಗಳನ್ನು ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಅನುಷ್ಠಾನಗೊಳಿಸಿ ಎಂದು ಸೂಚಿಸುತ್ತವೆ. 

ಖಾತ್ರಿ ಯೋಜನೆಯಡಿ ಸಾಕಷ್ಟು ಅನುದಾನವೂ ಲಭ್ಯವಿದೆ. ಆದರೆ ಕೂಲಿ ಕಾರ್ಮಿಕರ ಕೊರತೆಯ ಕಾರಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ನಡೆಸಲು ಆಗುತ್ತಿಲ್ಲ. ವಿವಿಧೆಡೆ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹರಟೆ ಕಟ್ಟೆಗಳಲ್ಲಿ ಕುಳಿತು ಕಾಲಹರಣ ಮಾಡುತ್ತಾರೆಯೋ ಹೊರತು ಖಾತ್ರಿ ಯೋಜನೆಯಡಿ ಕೆಲಸಕ್ಕೆ ಬರುವುದಿಲ್ಲ. 

ಈ ಬೇಸಿಗೆಯಲ್ಲಿ ಅತಿ ಹೆಚ್ಚಿನ ಬಿಸಿಲು ಇರುವ ಕಾರಣಕ್ಕೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ಕೆಲಸ ನಿರ್ವಹಿಸಿ ಎಂದು ರಿಯಾಯಿತಿ ತೋರಿಸಿದರೂ ಯಾರೂ ಕೆಲಸಕ್ಕೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ಬೆಳಗುತ್ತಿ ಗ್ರಾಮದ 13 ಹೆಕ್ಟೇರ್‌ ವಿಸ್ತೀರ್ಣದ ಇಸ್ರಾಪುರ ಬಾಳೆಕಟ್ಟೆ ಕೆರೆ ಹೂಳೆತ್ತುವುದು, ರಸ್ತೆ ಅಭಿವೃದ್ಧಿ, ಕೆರೆ ಏರಿ ದುರಸ್ತಿ, ಕೋಡಿ ದುರಸ್ತಿ, ತೂಬು ದುರಸ್ತಿ, ಕಾಲುವೆಗಳ ಲೆ„ನಿಂಗ್‌, ಕೆರೆ ಸುತ್ತ ಟ್ರೆಂಚ್‌ ಹೊಡೆಸಿ ಗಿಡಗಳನ್ನು ನೆಡುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸಲು ನಬಾಡ್‌ ìನಿಂದ 39 ಲಕ್ಷ ರೂ. ಬಿಡುಗಡೆಯಾಗಿದೆ. ಮಳೆಗಾಲ ಪಾರಂಭವಾಗುವುದರೊಳಗೆ ಹೂಳೆತ್ತುವ ಕೆಲಸ ಶೀಘ್ರ ಮುಗಿಸಬೇಕು ಎಂದು ಸೂಚಿಸಿದರು. 

ಬೆಳಗುತ್ತಿ-ಹೊಸಕೊಪ್ಪ ಮಾರ್ಗದ 3ಕಿ.ಮೀ. ರಸ್ತೆ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಯಾಗಿದೆ. ಶೀಘ್ರದಲ್ಲೇ ಈ ಕಾಮಗಾರಿ ಪ್ರಾರಂಭವಾಗಲಿದೆ. ತಾಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ 72 ಕೋಟಿ ರೂ.ಗಳಷ್ಟು ಹಣ ಮೀಸಲಿಡಲಾಗಿದೆ. ಈ ವರ್ಷದ ಡಿಸೆಂಬರ್‌ ಕೊನೆಯ ಒಳಗೆ ಎಲ್ಲಾ ರಸ್ತೆಗಳನ್ನೂ ಅಭಿವೃದ್ಧಿಪಡಿಸಲಾಗುವುದು.

ತಾಲೂಕಿನ ಕುಂದೂರು ಕೆರೆ ಅಭಿವೃದ್ಧಿಗೂ ಹಣ ಬಿಡುಗಡೆಯಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು. ಬೆಳಗುತ್ತಿ ಗ್ರಾಪಂ ಅಧ್ಯಕ್ಷೆ ರೇಖಾ ಪ್ರಕಾಶ್‌, ಉಪಾಧ್ಯಕ್ಷ ಮಲ್ಲಿಗೇನಹಳ್ಳಿ ಪರಮೇಶ್ವರಪ್ಪ ಗ್ರಾಪಂ ಸದಸ್ಯ ಬಿ.ಟಿ. ಕುಬೇರಪ್ಪ, ಟಿಎಪಿಸಿಎಂಎಸ್‌ ಮಾಜಿ ಅಧ್ಯಕ್ಷ ಎಂ.ಜಿ. ಬಸವರಾಜಪ್ಪ ಮಾತನಾಡಿದರು. ಗ್ರಾಪಂ ಸದಸ್ಯರಾದ ಎಸ್‌.ಟಿ. ಅಶೋಕ್‌,

ಎಸ್‌.ಕೆ. ತೀರ್ಥಲಿಂಗಪ್ಪ, ಎ.ಕೆ. ಕರಿಬಸಪ್ಪ, ಎಲ್‌. ನಾಗರಾಜ್‌, ನಾಗರತ್ನಮ್ಮ, ರಶ್ಮಿ, ಸಿದ್ಧಾರ್ಥಿನಿ ಅರಸ್‌, ಮಾಜಿ ಉಪಾಧ್ಯಕ್ಷ ಎ.ಕೆ. ಕಳ್ಳಿಹಾಲಪ್ಪ, ಮುಖಂಡರಾದ ಕೆ. ಮಹೇಶ್ವರಪ್ಪ, ಕೆ. ಶೇಖರಪ್ಪ, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಮಂಜುನಾಥ್‌ ಕಪಾಲಿ, ಎಇಇ ಗಿರೀಶ್‌, ಗುತ್ತಿಗೆದಾರ ಎಂ.ಜಿ. ಸಿದ್ದೇಶ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.