ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ ಏಕಕಾಲಕ್ಕೆ ವೇತನ

ಅಪಸ್ವರದ ಹಿನ್ನೆಲೆಯಲ್ಲಿ ವರ್ಗವಾರು ವೇತನ ವ್ಯವಸ್ಥೆ ಸ್ಥಗಿತ

Team Udayavani, May 16, 2022, 1:45 PM IST

udyoga-khatri

ದಾವಣಗೆರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರಿಗೆ ವೇತನ ಪಾವತಿಸುವಾಗ ಅನುಸರಿಸುತ್ತಿದ್ದ ಜಾತಿ ಆಧಾರಿತ ವರ್ಗ ತಾರತಮ್ಯ ನೀತಿಗೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಈಗ ಒಂದೇ ಖಾತೆಯಿಂದ ಏಕಕಾಲಕ್ಕೆ ಎಲ್ಲ ಕಾರ್ಮಿಕರಿಗೆ ಕೂಲಿ ಹಣ ಪಾವತಿಸಲು ಮುಂದಾಗಿದೆ.

ನರೇಗಾ ಯೋಜನೆ ಆರಂಭವಾದಾಗಿನಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಎಲ್ಲ ಕಾರ್ಮಿಕರಿಗೆ ಒಂದೇ ಖಾತೆಯಿಂದ ಕೂಲಿ ಹಣ ಹಾಕಲಾಗುತ್ತಿತ್ತು. ಯಾವುದೇ ವರ್ಗ-ಭೇದ ಇಲ್ಲದೇ ಕೆಲಸ ಮಾಡಿದ ಎಲ್ಲ ಕಾರ್ಮಿಕರ ಖಾತೆಗೂ ಏಕಕಾಲಕ್ಕೆ ಹಣ ಜಮೆಯಾಗುತ್ತಿತ್ತು. ಆದರೆ, ಕಳೆದ ವರ್ಷ (2021-22ನೇ ಸಾಲಿನಲ್ಲಿ) ಕೇಂದ್ರ ಸರ್ಕಾರ ವರ್ಗವಾರು ಆದ್ಯತೆ ಮೇರೆಗೆ ಕೂಲಿ ಹಣ ನೀಡುವ ಉದ್ದೇಶದಿಂದ ಈ ವ್ಯವಸ್ಥೆಯಲ್ಲಿ ಬದಲಾವಣೆ ತಂದು ಕೂಲಿ ಕಾರ್ಮಿಕರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಂಬ ಮೂರು ವರ್ಗಗಳನ್ನು ಮಾಡಿತ್ತು. ಈ ವರ್ಗಗಳಿಗೆ ಪ್ರತ್ಯೇಕ ಮೂರು ಖಾತೆ ತೆರೆದು ಅನುದಾನ ಹಾಕುವ ಮೂಲಕ ಕೂಲಿ ವೇತನ ನೀಡುವ ವ್ಯವಸ್ಥೆ ಜಾರಿಗೆ ತಂದಿತ್ತು.

ಹೀಗಾಗಿ ಒಂದೇ ಗುಂಪಿನಲ್ಲಿದ್ದು ಒಂದೇ ಕಾಮಗಾರಿ ನಿರ್ವಹಿಸಿದರೂ ಅವರಲ್ಲಿ ಒಂದು ವರ್ಗದವರಿಗೆ ಬೇಗ ಕೂಲಿ ಹಣ ದೊರೆತರೆ ಇನ್ನೊಂದು ವರ್ಗದವರಿಗೆ ತಡವಾಗಿ ಕೂಲಿ ಹಣ ದೊರಕುತ್ತಿತ್ತು. ಇದು ಕಾರ್ಮಿಕ- ಕಾರ್ಮಿಕರ ನಡುವೆ ಅಸಮಾಧಾನಕ್ಕೂ ಕಾರಣವಾಗಿತ್ತು. ಕೆಲವೊಮ್ಮೆ ಒಂದು ವರ್ಗಕ್ಕೆ ವೇತನ ನೀಡಿ 15-20 ದಿನಗಳಾದರೂ ಇನ್ನೊಂದು ವರ್ಗದ ಕೂಲಿಕಾರ್ಮಿಕರಿಗೆ ವೇತನ ಜಮೆ ಆಗುತ್ತಿರಲಿಲ್ಲ. ಸರ್ಕಾರದ ಈ ಕ್ರಮಕ್ಕೆ ಭಾರಿ ವಿರೋಧವೂ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಕೂಲಿ ಹಣ ನೀಡಲು ವರ್ಗವಾರು ತೆರೆದಿದ್ದ ಮೂರು ಪ್ರತ್ಯೇಕ ಖಾತೆಗಳನ್ನು ನಿಷ್ಕ್ರಿಯಗೊಳಿಸಿ, ಒಂದೇ ಖಾತೆಯಿಂದ ಎಲ್ಲ ಕೂಲಿಕಾರ್ಮಿಕರಿಗೂ ಕೂಲಿ ಹಣ ಜಮೆ ಮಾಡಲು ಸೂಚಿಸಿದೆ.

ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯ (ನರೇಗಾ) ಅಕುಶಲ ಕೂಲಿ ಕಾರ್ಮಿಕರ ಕೂಲಿ ದರವನ್ನು 309ರೂ.ಗಳಿಗೆ ಹೆಚ್ಚಿಸಿದ ಬೆನ್ನಲ್ಲೇ ವೇತನ ಪಾವತಿಯಲ್ಲಾಗುತ್ತಿದ್ದ ವರ್ಗ ತಾರತಮ್ಯ ಸರಿಪಡಿಸಲು ಮುಂದಾಗಿರುವುದು ಕೂಲಿಕಾರ್ಮಿಕರಲ್ಲಿ ಮಂದಹಾಸ ಮೂಡಿಸಿದೆ.

ನಾವು ಎಲ್ಲರೂ ಒಂದೇ ಗುಂಪಿನಲ್ಲಿದ್ದು ಒಂದೇ ಕಾಮಗಾರಿ ಮಾಡಿದರೂ ವೇತನ ಹಾಕುವಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಂಬ ವರ್ಗ ಮಾಡಲಾಗುತ್ತಿತ್ತು. ಇದರಿಂದ ಕಾರ್ಮಿಕರ ಒಂದೇ ಗುಂಪಿನಲ್ಲಿ ಒಬ್ಬರಿಗೆ ಕೂಲಿ ಹಣ ಬಂದರೆ ಇನ್ನೊಬ್ಬರಿಗೆ ಬರುತ್ತಿರಲಿಲ್ಲ. ಈಗ ಎಲ್ಲರಿಗೂ ಒಂದೇ ಖಾತೆಯಿಂದ ಕೂಲಿ ಹಣ ನೀಡುವಂತೆ ಮಾಡಿರುವುದು ಸ್ವಾಗತಾರ್ಹ. – ಸಿದ್ದೇಶ್‌, ಹುಲಿಕಟ್ಟೆ

ಕ‌ಳೆದ ವರ್ಷ ವರ್ಗವಾರು ಪ್ರತ್ಯೇಕವಾಗಿ ಕಾರ್ಮಿಕರಿಗೆ ಕೂಲಿ ಹಣ ನೀಡುವ ವ್ಯವಸ್ಥೆ ತರಲಾಗಿತ್ತು. ಈಗ ಸರ್ಕಾರ ಈ ವ್ಯವಸ್ಥೆ ಯನ್ನು ತೆಗೆದು ಒಂದೇ ಖಾತೆಯಿಂದ ಕೂಲಿ ಹಣ ಜಮೆ ಮಾಡಲು ಕ್ರಮವಹಿಸಿದೆ. –ಡಾ|ಎ.ಚನ್ನಪ್ಪ, ಸಿಇಒ, ಜಿಪಂ-ದಾವಣಗೆರೆ

ಎಚ್. ಕೆ. ನಟರಾಜ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.