ಮಹಿಳೆಗೆ ಇನ್ನೂ ದೊರೆಯದ ಸಮಾನತೆ


Team Udayavani, Mar 10, 2017, 12:46 PM IST

dvg5.jpg

ದಾವಣಗೆರೆ: ನಮ್ಮ ಜಿಲ್ಲೆಯ ಬಹುತೇಕ  ಇಲಾಖೆಗಳಲ್ಲಿ ಮಹಿಳಾ ಅಧಿಕಾರಿಗಳೇ ಮುಖ್ಯಸ್ಥರಾಗಿದ್ದು, ಯುವತಿಯರು ಇದನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ. ಅಶ್ವತಿ ಹೇಳಿದ್ದಾರೆ.

ಗುರುವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಬಲೀಕರಣ ಸಮಾಜದ ಅಭಿವೃದ್ಧಿ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ,ಮಾತನಾಡಿದ ಅವರು, ಪ್ರಸ್ತುತ ಮಹಿಳೆಯರೇ  ಜಿಲ್ಲಾಮಟ್ಟದ ಇಲಾಖೆಗಳ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯರುಪ್ರೇರಣೆಯಾಗಿ ತೆಗೆದುಕೊಳ್ಳಬೇಕು. ಮುಂದೆ ತಾವೂ ಸಹ ಇದೇ ರೀತಿ ಅಧಿಕಾರಿಗಳು ಆಗುವ ಬಗ್ಗೆ ಚಿಂತಿಸಬೇಕು ಎಂದರು. ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ, ನ್ಯಾಯ-ಸಮಾನತೆಗಾಗಿ ಪ್ರತಿನಿತ್ಯವೂ ಹೋರಾಟ ನಡೆಸಬೇಕಾಗಿದೆ. 

ಸಮಾಜದಲ್ಲಿ ಶೇ.90ರಷ್ಟು ಮನೆಗಳಲ್ಲಿ ಮಹಿಳೆಯರಿಗೆ ಸಮಾನತೆ ದೊರೆಯುತ್ತಿಲ್ಲ. ಮನೆಗೆಲಸ, ಅಡುಗೆ, ಸ್ವತ್ಛಗೊಳಿಸುವುದು ಸೇರಿ ಹೊರಗಡೆ ದುಡಿಯುವುದಕ್ಕೆ ಹೋಗುತ್ತಿದ್ದಾರೆ. ಇವರಿಗೆ ಪುರುಷರು ಸಹಾಯ ಮಾಡಲು ಮುಂದಾಗುತ್ತಿಲ್ಲ ಎಂದು ಅವರು ಬೇಸರಿಸಿದರು. 

ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಮಾತನಾಡಿ, ಇಂದಿನ ಮಕ್ಕಳು, ಯುವ ಪೀಳಿಗೆ ಕೂಡ ತಮ್ಮತಂದೆ-ತಾಯಿ ಬಗ್ಗೆ ನಡೆದುಕೊಳ್ಳುವ ರೀತಿ ಬದಲಾಯಿಸಿಕೊಳ್ಳಬೇಕು. ತಂದೆಯ ಬಗ್ಗೆ ಮಕ್ಕಳಿಗೆ ಗೌರವವಿರುತ್ತದೆ. ಹಾಗೆಯೇ ತಾಯಿಯನ್ನೂ ಗೌರವಿಸುವ, ಇಬ್ಬರನ್ನೂ ಸಮಾನ ಘನತೆಯಿಂದ ಕಾಣುವುದನ್ನು ರೂಢಿಸಿಕೊಳ್ಳಬೇಕು ಎಂದರು. 

ದೇಶದ ಜನಸಂಖ್ಯೆಯಲ್ಲಿ ಅರ್ಥದಷ್ಟು ಮಹಿಳೆಯರಿದ್ದಾರೆ. ಸಮಾಜದ ಅಭಿವೃದ್ಧಿಯಾಗಬೇಕಾದರೆ ಅವರನ್ನೂ ಸಹ ಪರಿಗಣಿಸಬೇಕು. ಆದರೆ, ಸಮಾಜ ಇಂದು ಪುರುಷರನ್ನೇ ಆಧಾರವಾಗಿರಿಸಿಕೊಂಡು ಅಭಿವೃದ್ಧಿ ರೂಪುರೇಷೆ ಸಿದ್ಧಪಡಿಸುತ್ತದೆ. ಉದ್ಯಮ ಸಾಕಷ್ಟು ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಮಹಿಳೆಯರು ಸಣ್ಣಪುಟ್ಟ ಉದ್ಯೋಗದಲ್ಲಿ ತೊಡಗಿಕೊಂಡು ಸಬಲೀಕರಣರಾಗಬೇಕು ಎಂದು ತಿಳಿಸಿದರು. 

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಧಿಕಾರಿ ಯಶೋಧ ವಂಟಿಗೋಡಿ ಮಾತನಾಡಿ, ಮಹಿಳೆಯರ ಸಮಸ್ಯೆಗಳು ಪುರುಷರಿಗೆ ತಿಳಿಯಬೇಕು. ಹಾಗೆಯೇ ಮಹಿಳೆ ಯಾವ ಕ್ಷೇತ್ರದಲ್ಲಿ ಹಿಂದುಳಿದ್ದಾಳೆ ಎಂಬುದನ್ನು ತಿಳಿದುಕೊಂಡು ಸಮಾಜದಲ್ಲಿ ಮುನ್ನಡೆಯಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ| ಕೆ.ಎಂ. ಮಲ್ಲಿಕಾರ್ಜುನ ಕಲಮರಹಳ್ಳಿ, ಜಾನಪದ ತಜ್ಞೆ ಕುಮುದಾ ಸುಶೀಲಪ್ಪ, ಎಚ್‌.ಎನ್‌. ಹನುಮಂತಪ್ಪ, ಡಾ| ಆರ್‌.ತಿಪ್ಪಾರೆಡ್ಡಿ, ಎಸ್‌. ಆರ್‌. ಭಜಂತ್ರಿ, ಟಿ.ಬಿ. ಜ್ಯೋತಿ, ಗಂಗಾಧರ್‌ , ಭೀಮಣ್ಣ ಸುಣಗಾರ್‌, ಡಾ|ಮಂಜಣ್ಣ, ಎ.ಸಿ. ಪೂಜಾ, ಎಸ್‌.ಎಂ. ಲತಾ ಇತರರು ವೇದಿಕೆಯಲ್ಲಿದ್ದರು. 

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.