ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಗುತ್ತಿಗೆ ಪದ್ಧತಿಗೆ ವಿರೋಧ

Team Udayavani, May 17, 2022, 7:15 AM IST

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ದಾವಣಗೆರೆ: ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಹಸ್ತಾಂತರ ವಾಗುವ ಭೂಮಿಯನ್ನು ರೈತರಿಗೆ ಹಂಚುವ ಸರಕಾರದ ತೀರ್ಮಾನಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದು, ಆದರೆ ಇದಕ್ಕೆ ಗುತ್ತಿಗೆ ಪದ್ಧತಿ ಜಾರಿಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕಂದಾಯ ಇಲಾಖೆಗೆ ಹಸ್ತಾಂತರವಾಗುವ ಆರು ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಐದು ಲಕ್ಷ ಹೆಕ್ಟೇರ್‌ ಅನ್ನು 15 ವರ್ಷಕ್ಕೂ ಮೊದಲು ಸಾಗುವಳಿ ಮಾಡುತ್ತಿರುವವರಿಗೆ ವಾರ್ಷಿಕ ಶುಲ್ಕ ನಿಗದಿಪಡಿಸಿ 30 ವರ್ಷಗಳ ಗುತ್ತಿಗೆ ಆಧಾರದಲ್ಲಿ ನೀಡಲು ಸರಕಾರ ನಿರ್ಧರಿಸಿದೆ. ಇದರಿಂದ ರಾಜ್ಯದಲ್ಲಿರುವ ಬಗರ್‌ಹುಕುಂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂಬುದು ಸರಕಾರದ ನಿರೀಕ್ಷೆ. ಆದರೆ ಗುತ್ತಿಗೆ ಪದ್ಧತಿಯು ಬಗರ್‌ಹುಕುಂ ಸಮಸ್ಯೆಗೆ ಪರಿಹಾರವಲ್ಲ ಎಂಬುದು ರೈತರ ವಾದ.

ಬಗರ್‌ಹುಕುಂ ಸಾಗುವಳಿ ಭೂಮಿಯನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕೆಂದು ರೈತರು ರಾಜ್ಯಾದ್ಯಂತ ನಿರಂತರವಾಗಿ ಪ್ರತಿ ಭಟನೆ, ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇದಕ್ಕಾಗಿ ಲಕ್ಷಾಂತರ ಅರ್ಜಿಗಳು ಸಲ್ಲಿಕೆ ಯಾಗಿವೆ. ಸಾಗುವಳಿ ಭೂಮಿ ಸಕ್ರಮಗೊಳಿಸಿ ಒತ್ತುವರಿದಾರ ರೈತರ ಹೆಸರಿಗೆ ಹಕ್ಕುಪತ್ರ ನೀಡಬೇಕು ಎಂಬುದು ರೈತರ ಬೇಡಿಕೆ.

ಒತ್ತುವರಿ ಮಾಡಿಕೊಂಡವರಲ್ಲಿ ಸಣ್ಣ, ಅತೀ ಸಣ್ಣ ರೈತರೇ ಹೆಚ್ಚು. ಸರಕಾರದ ಅಂಕಿ ಅಂಶದ ಪ್ರಕಾರ ಹೇಳುವುದಾದರೆ ಐದು ಎಕರೆಗಿಂತ ಕಡಿಮೆ ಒತ್ತುವರಿ ಮಾಡಿಕೊಂಡವರ ಸಂಖ್ಯೆ ಶೇ. 90ರಷ್ಟಿದೆ. ಸರಕಾರಕ್ಕೆ ವಾರ್ಷಿಕ ಗುತ್ತಿಗೆ ಹಣ ತುಂಬಿ ಸಾಗುವಳಿ ಮಾಡುವುದು ಸಣ್ಣ ರೈತರಿಗೆ ಹೊರೆಯಾಗಲಿದ್ದು, ಆದ್ದರಿಂದ ಗುತ್ತಿಗೆ ಪದ್ಧತಿಯನ್ನು ರೈತರು ವಿರೋಧಿಸುತ್ತಿದ್ದಾರೆ.

ಕೃಷಿ ಸೌಲಭ್ಯ ಮರೀಚಿಕೆ
ಒತ್ತುವರಿ ಭೂಮಿಯನ್ನು ಗುತ್ತಿಗೆ ಪದ್ಧತಿಯಲ್ಲಿ ನೀಡಿದರೆ ಸರಕಾರವೇ ಭೂಮಿಯ ಅಧಿಕೃತ ಮಾಲಕತ್ವ ಪಡೆಯುತ್ತದೆ. ಬಿತ್ತನೆ ಬೀಜದಿಂದ ಹಿಡಿದು ಯಾವುದೇ ಸೌಲಭ್ಯ ಪಡೆಯಬೇಕಾದರೆ ರೈತನ ಹೆಸರಲ್ಲಿ ಪಹಣಿ ಇರಬೇಕು. ಆದ್ದರಿಂದ ಸರಕಾರ ಒತ್ತುವರಿ ದಾರರ ಹೆಸರಿಗೆ ಪಹಣಿ ಕೊಡುವ ವ್ಯವಸ್ಥೆ ಮಾಡಬೇಕು ಎಂಬುದು ರೈತರ ಆಗ್ರಹ.

ಷರತ್ತು ಹಾಕಿ ಮಾಲಕತ್ವ ಕೊಡಲಿ
ಭೂಮಿಯನ್ನು ಸಾಗುವಳಿದಾರರ ಹೆಸರಿಗೆ ನೀಡಲಿ. ಅಗತ್ಯಬಿದ್ದರೆ ದೀರ್ಘಾವಧಿಗೆ ಪರಭಾರೆ ಮಾಡದಂತೆ ನಿಯಮ ಮಾಡಲಿ. ಜತೆಗೆ ಒಂದಿಷ್ಟು ಭೂಮಿಯಲ್ಲಿ ಮರಗಳನ್ನು ಬೆಳೆಸುವುದನ್ನೂ ಕಡ್ಡಾಯಗೊಳಿಸಲಿ ಎನ್ನುತ್ತಾರೆ ಒತ್ತುವರಿ ಭೂಮಿ ಹೊಂದಿರುವ ರೈತರು.

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.