ಪ್ರಥಮ ಸೆಮಿಸ್ಟರ್‌ ಪರೀಕ್ಷೆ ತೊಳಲಾಟ!

ಪರೀಕ್ಷಾ ದಿನಾಂಕ ನಿಗದಿಯಾಗದೆ ಅಯೋಮಯ ಸ್ಥಿತಿ

Team Udayavani, Apr 28, 2022, 2:19 PM IST

exam

ದಾವಣಗೆರೆ: ರಾಜ್ಯ ಸರ್ಕಾರ, ವಿಶ್ವವಿದ್ಯಾಲಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವಲ್ಲಿ ತೋರಿದ ಉತ್ಸುಕತೆ ಪಠ್ಯಕ್ರಮ, ಪುಸ್ತಕಗಳ ಲಭ್ಯತೆ, ಯೋಜನಾಬದ್ಧ ವಾಗಿ ನೀತಿ ಅನುಷ್ಠಾನ, ಸಕಾಲದಲ್ಲಿ ಪರೀಕ್ಷೆ ನಡೆಸುವಲ್ಲಿ ತೋರದ ಕಾಳಜಿಯ ಪರಿಣಾಮ ಪದವಿಯ ಪ್ರಥಮ ಸೆಮಿಸ್ಟರ್‌ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಚಾತಕ ಪಕ್ಷಿಯಂತೆ ಕಾಯುವಂತಾಗಿದೆ!

ದಾವಣಗೆರೆ ವಿಶ್ವವಿದ್ಯಾಲಯದ ಪದವಿಯ ಬಹುತೇಕ ಎಲ್ಲ ಪರೀಕ್ಷೆಗಳು ಮುಗಿದಿವೆ. ಆದರೆ ಪ್ರಥಮ ಸೆಮಿಸ್ಟರ್‌ನ ಪರೀಕ್ಷಾ ವೇಳಾಪಟ್ಟಿ ಈ ಕ್ಷಣದವರೆಗೂ ನಿಗದಿಯಾಗಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎಂಬುದು ಅಕ್ಷರಶಃ ಗೊಂದಲದ ಗೂಡಾಗಿದೆ.

‘ಮೂಗಿಗಿಂತಲೂ ಮೂಗುತಿ ಭಾರ’ ಎನ್ನುವಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಜ್ಜಾಗುವುದಕ್ಕಿಂತಲೂ ಪರೀಕ್ಷೆ ನಿರ್ದಿಷ್ಟವಾಗಿ ನಡೆಯುವುದು ಯಾವಾಗ ಎಂಬುದೇ ಗೊತ್ತಾಗದೆ ಅಯೋಮಯ ಸ್ಥಿತಿಯಲ್ಲಿದ್ದಾರೆ. ಪರೀಕ್ಷಾ ದಿನಾಂಕ ನಿಗದಿಯಾಗದೆ ಓದುವತ್ತ ಗಮನ ಹರಿಸದಂತಾಗಿದೆ.

ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ ಕೀರ್ತಿ ನಮ್ಮದು ಎಂದು ಬೆನ್ನು ಚಪ್ಪರಿಸಿಕೊಳ್ಳುವ ರಾಜ್ಯ ಸರ್ಕಾರ ಅನುಸರಿಸುತ್ತಿರುವ ನೀತಿಯ ಪರಿಣಾಮವಾಗಿಯೇ ಈವರೆಗೆ ಪ್ರಥಮ ಸೆಮಿಸ್ಟರ್‌ ಪರೀಕ್ಷೆ ನಡೆಯುವುದಿರಲಿ, ಯಾವಾಗಿನಿಂದ ಖಚಿತವಾಗಿ ಪ್ರಾರಂಭ ಆಗಲಿವೆ ಎಂಬುದಕ್ಕೆ ಯಾರಲ್ಲೂ ಉತ್ತರವೇ ಇಲ್ಲ.

ಜಾಲತಾಣ ನಂಬಿ ಬೇಸ್ತು ಬಿದ್ದರು

ಕೆಲ ದಿನಗಳ ಹಿಂದಷ್ಟೇ ಪ್ರಥಮ ಸೆಮಿಸ್ಟರ್‌ ಪರೀಕ್ಷೆ ಏ. 27ರಿಂದ ಆರಂಭವಾಗಲಿದೆ ಎಂಬ ವೇಳಾಪಟ್ಟಿ ಜಾಲತಾಣಗಳಲ್ಲಿ ಹರಿದಾಡಿದ್ದನ್ನು ನಂಬಿದ ವಿದ್ಯಾರ್ಥಿಗಳು ಅದೇ ನಿಜವಾದ ವೇಳಾಪಟ್ಟಿ ಎಂದು ಭಾವಿಸಿ ಪರೀಕ್ಷೆಗೆ ಸಿದ್ಧರಾದರು. ಮದುವೆ, ನಿಶ್ಚಿತಾರ್ಥ, ಪ್ರವಾಸ ಮುಂತಾದವುಗಳನ್ನೆಲ್ಲ ರದ್ದುಪಡಿಸಿ ಇಲ್ಲವೇ ಮುಂದೂಡಿ ಪರೀಕ್ಷೆಗೆ ಸಜ್ಜಾದರು. ನಂತರ ಅದು ಅ ಧಿಕೃತ ವೇಳಾಪಟ್ಟಿಯೇ ಅಲ್ಲ ಎಂಬುದು ತಿಳಿದು ಬಂತು.

ಮತ್ತೆ ಕೆಲವೇ ದಿನಗಳಲ್ಲಿ ಮತ್ತೂಂದು ವೇಳಾಪಟ್ಟಿಯೂ ಜಾಲತಾಣಗಳಲ್ಲಿ ಹರಿದಾಡ ತೊಡಗಿತು. ವಿದ್ಯಾರ್ಥಿಗಳು ಆಗಲೂ ಪರೀಕ್ಷಾ ತಯಾರಿ ಮಾಡಿಕೊಂಡರು. ಅಂತಿಮವಾಗಿ ಅದು ಸಹ ನಿಜವಾದ ವೇಳಾಪಟ್ಟಿಯೇ ಅಲ್ಲ ಎಂಬುದು ಗೊತ್ತಾಯಿತು. ಪದವಿ ಹಂತದ ವೇಳಾಪಟ್ಟಿಯೇ ಜಾಲತಾಣದಲ್ಲಿ ಹಲವಾರು ಹರಿದಾಡಿದರೂ ಸಂಬಂಧಿತರು ಈವರೆಗೆ ಅದರ ಬಗ್ಗೆ ಗಮನ ಹರಿಸಿಲ್ಲ ಎನ್ನುವುದು ಪರಮಾಶ್ಚರ್ಯ.

ವಾಸ್ತವವಾಗಿ ಪ್ರಥಮ ಸೆಮಿಸ್ಟರ್‌ ಪರೀಕ್ಷೆ ಮುಗಿದು ಎರಡನೇ ಸೆಮಿಸ್ಟರ್‌ ಪ್ರಾರಂಭ ಅಗಬೇಕಿತ್ತು. ಎರಡೂವರೆ ತಿಂಗಳಷ್ಟು ವಿಳಂಬವಾದರೂ ಸರ್ಕಾರವಾಗಲೀ, ಉನ್ನತ ಶಿಕ್ಷಣ ಇಲಾಖೆಯಾಗಲೀ ಪರೀಕ್ಷೆ ನಡೆಸುವತ್ತ ಗಮನ ಹರಿಸದಿರುವುದು ಸೋಜಿಗ ಮೂಡಿಸಿದೆ. ಸರ್ಕಾರದ ವಿಳಂಬ ನೀತಿಯಿಂದ ಪ್ರಥಮ ಸೆಮಿಸ್ಟರ್‌ ವಿದ್ಯಾರ್ಥಿಗಳು ಪರೀಕ್ಷಾ ತೊಳಲಾಟದಲ್ಲಿದ್ದಾರೆ.

ಸರ್ಕಾರಕ್ಕೆ ಸರಿಯಾದ ಪಾಲಿಸಿಯೇ ಇಲ್ಲ. ಫಸ್ಟ್‌ ಸೆಮಿಸ್ಟರ್‌ ಎಕ್ಸಾಂ ಯಾವಾಗ ಎನ್ನುವುದೇ ಗೊತ್ತಿಲ್ಲ. ಮಕ್ಕಳು ಓದುವುದಕ್ಕೆ ಬಹಳ ತೊಂದರೆ ಆಗುತ್ತಿದೆ. ಈಗಲಾದರೂ ಎಕ್ಸಾಂ ಡೇಟ್‌ ಫಿಕ್ಸ್‌ ಮಾಡಲಿ. -ನೊಂದ ಪೋಷಕಿ

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.