ವಿಘ್ನ ವಿನಾಶಕನ ಆಗಮನಕ್ಕೆ ಕ್ಷಣಗಣನೆ-ಭರ್ಜರಿ ವ್ಯಾಪಾರ


Team Udayavani, Aug 21, 2020, 7:22 PM IST

ವಿಘ್ನ ವಿನಾಶಕನ ಆಗಮನಕ್ಕೆ ಕ್ಷಣಗಣನೆ-ಭರ್ಜರಿ ವ್ಯಾಪಾರ

ಸಾಂದರ್ಭಿಕ ಚಿತ್ರ

ದಾವಣಗೆರೆ: ವಿಘ್ನ ವಿನಾಶಕನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಕೋವಿಡ್ ಆತಂಕ ನಡುವೆಯೂ ಜನರು ಮೋದಕಪ್ರಿಯನ ಸ್ವಾಗತಕ್ಕೆ ಸಡಗರದ ಸಿದ್ಧತೆ ನಡೆಸಿದ್ದಾರೆ.

ಭಾದ್ರಪದ ಮಾಸ ಶುಕ್ಲಪಕ್ಷದ ಚೌತಿಯ ದಿನ ಮನೆ ಬಾಗಿಲಿಗೆ ಬರುವ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಉತ್ಸುಕರಾಗಿರುವ ಜನರು, ಗುರುವಾರ ಹಬ್ಬಕ್ಕೆ ಬೇಕಾದ ವಸ್ತು  ಖರೀದಿಸುವಲ್ಲಿ ಮಗ್ನರಾಗಿರುವುದು ಕಂಡು ಬಂತು.

ಗುರುವಾರ ಬೆಳಗ್ಗೆಯಿಂದ ರಾತ್ರಿಯವರೆಗೂ ಮಾರುಕಟ್ಟೆಯಲ್ಲಿ ಹಬ್ಬದ ವ್ಯಾಪಾರ ಜೋರಾಗಿತ್ತು. ಕೆಲವು ಹೂವು, ಹಣ್ಣು, ಅಲಂಕಾರಿಕ ವಸ್ತುಗಳ ಅಂಗಡಿ, ದಿನಸಿ ಅಂಗಡಿಗಳಲ್ಲಿ ಜನದಟ್ಟಣೆಯೂ ನಿರ್ಮಾಣವಾಗಿತ್ತು. ಆಗಾಗ ಸುರಿಯುವ ಜಿಟಿಜಿಟಿ ಮಳೆ ನಡುವೆಯೂ ಜನರು ಮಾಸ್ಕ್ ಹಾಕಿಕೊಂಡು ವಸ್ತುಗಳ ಖರೀದಿಯಲ್ಲಿ ತೊಡಗಿಕೊಂಡರು. ಹಬ್ಬದ ಈ ಸಡಗರದಲ್ಲಿ ಜನರು ಸಾಮಾಜಿಕ ಅಂತರ ಮರೆತಿರುವುದು ಎಲ್ಲೆಡೆ ಗೋಚರಿಸಿತು.

ಪುಟ್ಟ ಗಣೇಶನ ಕಡೆ ಒಲವು: ವಿವಿಧ ಭಂಗಿಯ ಲಂಬೋದರನ ಮೂರ್ತಿಗಳು ಮಾರುಕಟ್ಟೆಗೆ ಬಂದಿದ್ದು ಶಿವರೂಪಿ ಗಣೇಶ, ಸಾಯಿರೂಪಿ ಗಜಾನನ, ನಂದಿರೂಢ ಏಕದಂತ, ವಿಷ್ಣುರೂಪಿ ವಕ್ರತುಂಡ, ವೆಂಕಟೇಶ ರೂಪಿ ವಿಘ್ನೇಶ್ವರ ಮೂರ್ತಿಗಳು ಗಮನ ಸೆಳೆಯುತ್ತಿವೆ. ಮಾರುಕಟ್ಟೆಗೆ ಬಂದ ಆಕರ್ಷಕ ಗಜಾನನ ಮೂರ್ತಿಗಳನ್ನು ಗುರುತಿಸಿ, ಅನೇಕರು ಮುಂಗಡ ಹಣ ಪಾವತಿ ಮಾಡಿದರು. ಕೋವಿಡ್ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿರುವ ಬಹುತೇಕರು ಚಿಕ್ಕ ಮೂರ್ತಿಗಳ ಪ್ರತಿಷ್ಠಾಪನೆಗೆ ಒಲವು ತೋರುತ್ತಿರುವುದು ಕಂಡು ಬಂತು.

ಕಳೆಗುಂದಿದ ಸಾರ್ವಜನಿಕ ಉತ್ಸವ: ಸಾರ್ವಜನಿಕರು ಗಣೇಶನ ಸ್ವಾಗತಕ್ಕಾಗಿ ಮನೆಗಳನ್ನು ಸುಣ್ಣ-ಬಣ್ಣಗಳಿಂದ ಹಾಗೂ ಹಸಿರು ತಳೀರು ತೋರಣಗಳಿಂದ ಶೃಂಗರಿಸುತ್ತಿದ್ದ ದೃಶ್ಯ ಹಲವೆಡೆ ಕಂಡು ಬಂತು. ಗಣೇಶೋತ್ಸವ ಆಚರಣೆಗೆ ಮನೆಯಲ್ಲಿನ ಸಂಭ್ರಮಕ್ಕೇನೂ ಕೊರತೆಯಾಗಿಲ್ಲ. ಆದರೆ, ಸಾರ್ವಜನಿಕ ಗಣೇಶೋತ್ಸವ ಮಾತ್ರ ಅಕ್ಷರಶಃ ಕಳೆಗುಂದಿರುವುದು ಕಂಡು ಬಂತು. ಪ್ರತಿ ವರ್ಷ ಜಿಲ್ಲೆಯಲ್ಲಿ ಮೂರು ಸಾವಿರದಷ್ಟು ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ನಡೆಯುತ್ತಿತ್ತು. ಈ ಬಾರಿ ಕೋವಿಡ್ ಸೋಂಕಿನ ಆತಂಕ,  ಸುರಕ್ಷತೆಗಾಗಿ ಸರಕಾರ ವಿಧಿಸಿದ ವಿವಿಧ ಷರತ್ತುಗಳ ಕಾರಣದಿಂದ ಗಣೇಶೋತ್ಸವ ಸಮಿತಿಗಳಲ್ಲಿ ಹಬ್ಬದಾಚರಣೆಯ ಉತ್ಸಾಹ ಕಾಣುತ್ತಿಲ್ಲ. ಕೆಲ ಸಮಿತಿಯವರು ಸಾಂಕೇತಿಕವಾಗಿ ಸಾರ್ವಜನಿಕ ಉತ್ಸವ ಆಚರಿಸಲು ಮುಂದಾಗಿದ್ದರೆ ಇನ್ನೂ ಹಲವು ಸಮಿತಿಯವರು ಕೊರೊನಾ ಕಾರಣದಿಂದ ಸಾರ್ವಜನಿಕ ಉತ್ಸವ ಆಚರಣೆಯಿಂದ ಹಿಂದೆ ಸರಿದಿದ್ದಾರೆ.

ಒಟ್ಟಾರೆ ಕೋವಿಡ್ ಸಂಕಷ್ಟ ಕಾಲದಲ್ಲಿಯೂ ಸಂಭ್ರಮದ ಗಣೇಶೋತ್ಸವಕ್ಕೆ ಜಿಲ್ಲೆಯಾದ್ಯಂತ ಭರದ ಸಿದ್ಧತೆ ನಡೆದಿದ್ದು ಜನರ ಹಬ್ಟಾಚರಣೆಯ ಉತ್ಸಾಹ, ಸಂಭ್ರಮ ಎಲ್ಲೆಡೆ ಪಸರಿಸಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.