ಗೂಡ್ಸ್ ವಾಹನಗಳೊಂದಿಗೆ ಮೆರವಣಿಗೆ
Team Udayavani, Apr 8, 2017, 1:03 PM IST
ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ 3 ಚಕ್ರ ಮತ್ತು 4 ಚಕ್ರ ಗೂಡ್ಸ್ ವಾಹನಗಳ ಚಾಲಕರು ಮತ್ತು ಮಾಲೀಕರು ಶುಕ್ರವಾರ ವಾಹನಗಳೊಂದಿಗೆ ಮೆರವಣಿಗೆ ನಡೆಸಿದರು. ಹೊಸ ಬಸ್ ನಿಲ್ದಾಣದಿಂದ ಮೆರವಣಿಗೆ ನಡೆಸಿದ ಮಾಲೀಕರು, ಚಾಲಕರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಗೆ ತೆರಳಿ, ಮನವಿ ಸಲ್ಲಿಸಿದರು.
3 ಮತ್ತು 4 ಚಕ್ರ ಗೂಡ್ಸ್ ವಾಹನದಿಂದ ಸಿಗುವ ವರಮಾನ ಅತಿ ಕಡಿಮೆಯಾಗಿದೆ. ಬಂದಂತಹ ಆದಾಯದಲ್ಲಿ ವಾಹನದ ಕಂತು, ವಾಹನ ರಿಪೇರಿಗೆ ಸಾಕಾಗುವುದಿಲ್ಲ. ದುಡಿಮೆ ಕಡಿಮೆಯಾಗಿ ಪ್ರತಿನಿತ್ಯ ಜೀವನ ನಡೆಸುವುದು ಕಷ್ಟಕರವಾಗಿದೆ. ಇದೀಗ ಸರ್ಕಾರ ಕೆಲ ಶುಲ್ಕ ಹೆಚ್ಚಳ ಮಾಡಿ, ನಮ್ಮನ್ನು ದಿವಾಳಿ ಮಾಡಲು ಮುಂದಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ನಮ್ಮ ವಾಹನಗಳ ಮೇಲಿನ ರಸ್ತೆ ಶುಲ್ಕ ರದ್ದು ಪಡಿಸಬೇಕು, ಸಾಲಮನ್ನಾಕ್ಕೆ ಕ್ರಮ ವಹಿಸಬೇಕು. ವಿಮಾ ಕಂತು ಏಕಾಏಕಿ ಶೇ.50ರಷ್ಟು ಏರಿಕೆ ಮಾಡಿದ್ದು, ಇದನ್ನು ಹಿಂದಿನ ದರಕ್ಕೆ ಇಳಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನಮಗೆ ಸಾಲ ಕೊಡಿಸಲು ಕ್ರಮ ವಹಿಸಬೇಕು.
ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಧನ ಸಹಾಯ ಮಾಡಬೇಕು. ಪೊಲೀಸ್ರ ಕಿರುಕುಳದಿಂದ ಮುಕ್ತಿ ಕೊಡಿಸಬೇಕು ಎಂದು ಅವರು ಆಗ್ರಹಿಸಿದರು. ಸಂಘದ ಅಧ್ಯಕ್ಷ ಪಳನಿಸ್ವಾಮಿ, ಜಗದೀಶ್, ಹಾಲೇಶ್, ಮೆಹಬೂಬ್ ಸಾಬ್, ಹನುಮಂತಪ್ಪ, ರಘು ಮತ್ತಿತರರು ಮೆರವಣಿಗೆ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.