![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 21, 2020, 11:27 AM IST
ಹರಿಹರ: ಕೋವಿಡ್ ಕಡೆಗಣಿಸಿದರೆ ಅಪಾಯ ಕಡೆಗಣಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಸಿದರು.
10ನೇ ವಾರ್ಡ್ನ ಗಾಂಧಿನಗರದಲ್ಲಿ ಬುಧವಾರ ನಗರಸಭಾ ಸದಸ್ಯ ಎಂ. ಮುಜಮ್ಮಿಲ್ ಬಿಲ್ಲು ಯೋಜಿಸಿದ್ದ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಚೀನಾದ ವುಹಾನ್ನಿಂದ ದಾವಣಗೆರೆವರೆಗೆ ಬಂದಿರುವ ಈ ಕಾಯಿಲೆ ಇತರೆಡೆಗೂ ಹರಡುವುದು ತಡವಾಗುವುದಿಲ್ಲ ಎಂದರು. ಜಾಲಿನಗರದಲ್ಲಿ ಓರ್ವ ವ್ಯಕ್ತಿಯಲ್ಲಿ ಕಂಡು ಬಂದ ಕೋವಿಡ್, ಆತನಿಂದ ನೆರೆಹೊರೆಯ 30 ಜನರಿಗೆ ಅಂಟಿದೆ ಎಂದರೆ ಇದರ ಅಪಾಯವನ್ನು ಅಂದಾಜಿಸಬಹುದು. ದಾವಣಗೆರೆಯಲ್ಲಿ ಹೆಚ್ಚು ಪ್ರಕರಣಗಳಿದ್ದರೂ ಹರಿಹರದಲ್ಲಿ ಒಂದೂ ಪ್ರಕರಣ ಇಲ್ಲದಿರುವುದಕ್ಕೆ ಇಲ್ಲಿನ ಜನರ ಮುಂಜಾಗ್ರತೆಯೇ ಕಾರಣ ಎಂದರು.
ನಗರಸಭಾ ಸದಸ್ಯ ಮುಜಮ್ಮಿಲ್ ಬಿಲ್ಲು ಮಾತನಾಡಿ, ಇದುವರೆಗೆ 500 ಜನ ಬಡ ಫಲಾನುಭವಿಗಳ ಪಟ್ಟಿ ಮಾಡಿದ್ದು ಅವರೆಲ್ಲರಿಗೂ ಕಿಟ್ ವಿತರಣೆ ಮಾಡಲಾಗುವುದೆಂದರು. ಎಸ್ಪಿ ಹನುಮಂತರಾಯ ಹಾಗೂ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮಾತನಾಡಿದರು. ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಪೌರಾಯುಕ್ತೆ ಎಸ್. ಲಕ್ಷ್ಮೀ, ಎಇಇ ಎಸ್.ಎಸ್. ಬಿರಾದಾರ್, ನಗರಸಭಾ ಸದಸ್ಯ ಪಿ.ಎನ್. ವಿರುಪಾಕ್ಷಿ, ಇತರರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.