ಪಡಿತರ ವಿತರಣೆಯಲ್ಲಿ ಅಕ್ರಮ-ಆರೋಪ


Team Udayavani, Jun 15, 2020, 5:02 PM IST

1-June-21

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹರಿಹರ: ನಗರದ ಹೊಸ ಭರಂಪುರದ ವಿಎಸ್‌ ಎಸ್‌ಎನ್‌ ನ್ಯಾಯಬೆಲೆ ಅಂಗಡಿಯಲ್ಲಿ ಲಾಕ್‌ಡೌನ್‌ ನಿಮಿತ್ತ ಸರ್ಕಾರ ನೀಡಿದ್ದ ಹೆಚ್ಚುವರಿ ಪಡಿತರ ಧಾನ್ಯ ಗುಳಂ ಮಾಡಿರುವುದು ಸೇರಿದಂತೆ ಹಲವು ಅಕ್ರಮ ಎಸಗಲಾಗುತ್ತಿದೆ ಎಂದು ಡಿಎಸ್‌ಎಸ್‌ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್‌ ಆರೋಪಿಸಿದರು.

ನಗರದ ರಚನಾ ಕ್ರೀಡಾ ಟ್ರಸ್ಟ್‌ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಡಿತರದಾರರಿಂದ ಹಣ ವಸೂಲಿ, ಖುರ್ಚು-ವೆಚ್ಚಕ್ಕೆಂದು 1 ಕೆ.ಜಿ. ಕಡಿಮೆ ತೂಕ ಮಾಡುವುದು, ಪಡಿತರ ಚೀಟಿದಾರರಿಗೆ ನಿಯಮಿತವಾಗಿ ಪಡಿತರ ವಿತರಣೆ ಮಾಡದಿರುವುದು ಮುಂತಾದ ಅಕ್ರಮ ನಡೆಸಲಾಗುತ್ತಿದ್ದು, ಇದನ್ನು ಪ್ರಶ್ನಿಸುವ ಗ್ರಾಹಕರಿಗೆ ಅಂಗಡಿ ನಿರ್ವಹಿಸುವ ವಿಎಸ್‌ಎಸ್‌ಎನ್‌ ಸಿಬ್ಬಂದಿ ಪರಶುರಾಮ ಬೆದರಿಕೆ ಹಾಕುತ್ತಿದ್ದಾರೆ ಎಂದರು.

ಕೇಂದ್ರದ ಪಾಲು ಗುಳುಂ: ಅಂತ್ಯೋದಯ ಪಡಿತರದಾರರಿಗೆ ರಾಜ್ಯ ಸರಕಾರದ ನಿಯಮಿತ 35 ಕೆ.ಜಿ. ಜೊತೆಗೆ ಲಾಕ್‌ಡೌನ್‌ ನಿಮಿತ್ತ ಕುಟುಂಬದ ಒಬ್ಬ ಸದಸ್ಯನಿಗೆ ಕೇಂದ್ರ ಸರಕಾರದಿಂದ ತಲಾ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡಲಾಗಿದೆ. ಆದರೆ ಈ ಅಂಗಡಿಯಲ್ಲಿ 35 ಕೆ.ಜಿ.ಮಾತ್ರ ವಿತರಿಸುತ್ತಿದ್ದು, ಹೆಚ್ಚುವರಿ ತಲಾ 5 ಕೆ.ಜಿ. ಬಹುತೇಕರಿಗೆ ವಿತರಿಸಿಲ್ಲ.

ಒಟಿಪಿ ಮೋಸ: ಪಡಿತರದಾರರ ಹೆಬ್ಬೆಟ್ಟು ಪಡೆದು ಅಥವಾ ಅವರ ಮೊಬೆ„ಲ್‌ಗೆ ಒಟಿಪಿ ಕಳಿಸುವ ಮೂಲಕ ಪಡಿತರ ವಿತರಿಸಲಾಗುತ್ತಿದೆ. ಆದರೆ ಯಾರಾದರೂ ಗ್ರಾಹಕರು ಪಡಿತರ ಒಯ್ಯುವುದು ವಿಳಂಬವಾದರೆ ಅಥವಾ ಒಯ್ಯದಿದ್ದರೆ ಕೂಡಲೆ ಈ ಅಂಗಡಿಯಲ್ಲಿ ಬೇರೊಂದು ಮೊಬೆ„ಲ್‌ಗೆ ಒಟಿಪಿ ಕಳಿಸಿಕೊಂಡು ತಾವೇ ಪಡಿತರ ಪಡೆದುಕೊಳ್ಳುತ್ತಾರೆ. ಇದೇ ರೀತಿ ಆನ್‌ಲೈನ್‌ ನಲ್ಲಿ ಬೇರೆ ನ್ಯಾಯಬೆಲೆ ಅಂಗಡಿಯ ಪಡಿತರದಾರರ ಮಾಹಿತಿ ಪಡೆದು ಅವರ ಪಾಲಿನ ಪಡಿತರವನ್ನು ಈ ವ್ಯಕ್ತಿ ಗುಳುಂ ಮಾಡುತ್ತಿದ್ದಾರೆ. ಇಂತಹ ಅಕ್ರಮವನ್ನು ತಾಲೂಕಿನ ಕೆಲವು ನ್ಯಾಯಬೆಲೆ ಅಂಗಡಿಯವರೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹೆಬ್ಬೆಟ್ಟಿಗೆ, ತೂಕಕ್ಕೆ 20 ರೂ.: ಪಡಿತರ ಪಡೆಯಲು ಲ್ಯಾಪ್‌ಟಾಪ್‌ನಲ್ಲಿ ಬಯೋಮೆಟ್ರಿಕ್‌ ಮಾಡಿಕೊಡಲು 10 ರೂ., ಪಡಿತರ ತೂಕ ಮಾಡಿಕೊಡಲು 10 ರೂ. ಸೇರಿ ಪ್ರತಿ ಗ್ರಾಹಕರಿಂದ ತಲಾ 20 ರೂ. ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಇದಲ್ಲದೆ ಪಡಿತರ ಚೀಟಿದಾರರೊಂದಿಗೆ ಅಸಭ್ಯ ವರ್ತನೆ, ದುಂಡಾವರ್ತನೆ ತೋರುವ ಈ ಅಂಗಡಿ ನಿರ್ವಾಹಕನ ವಿರುದ್ಧ ಸಾರ್ವಜನಿಕರು ದೂರು ಕೊಟ್ಟರೂ ಶಿಸ್ತು ಕ್ರಮ ಕೈಗೊಳ್ಳದ ಆಹಾರ ಇಲಾಖಾಧಿಕಾರಿಗಳ ನಡೆ ಅನುಮಾನ ಮೂಡಿಸಿದೆ. ಕೂಡಲೆ ಹಿರಿಯ ಅಧಿಕಾರಿಗಳು ಸ್ಥಳೀಯ ಅಧಿಕಾರಿಗಳನ್ನು ದೂರವಿಟ್ಟು ಈ ಕುರಿತು ತನಿಖೆ ನಡೆಸಬೇಕು. ತಪ್ಪಿದಲ್ಲಿ ಪ್ರತಿಭಟಿಸಲಾಗುವುದು ಎಂದು ಅವರು ಅಗ್ರಹಿಸಿದರು. ಗೋಷ್ಠಿಯಲ್ಲಿ ಡಿ.ಎಂ.ಮಂಜುನಾಥ್‌ ಭಾನುವಳ್ಳಿ, ಬನ್ನಿಕೋಡು ವಾಗೀಶ್‌, ಹೊಸಪಾಳ್ಯದ ಯುವರಾಜ್‌, ಮಂಜುನಾಥ್‌, ಹಾಲೇಶ್‌, ಮಾರುತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.