ಆರೋಗ್ಯದ ಅರಿವು ಅಗತ್ಯ
Team Udayavani, Oct 3, 2018, 3:05 PM IST
ಹೊನ್ನಾಳಿ: ತಾಲೂಕಿನ ಬಲಮುರಿ, ಗೋಪಗೊಂಡನಹಳ್ಳಿ, ಸೋಮನಮಲ್ಲಾಪುರ ತಾಂಡಾ, ಹೊಸಕಟ್ಟೆ ಗ್ರಾಮಗಳಲ್ಲಿ ಮಲೇರಿಯಾ, ಡಂಘೀ, ಚಿಕೂನ್ಗುನ್ಯಾ, ಕುಷ್ಟ ರೋಗಿಗಳಿದ್ದು, ಆರೋಗ್ಯದ ಅರಿವು ಮೂಡಿಸಲಾಗುತ್ತಿದೆ ಎಂದು ಸ್ವಚ್ಛಗ್ರಾಮ ಅಭಿಯಾನ ಮತ್ತು ನೈರ್ಮಲ್ಯ ಆರೋಗ್ಯ ಅರಿವು ಆಂದೋಲನ ಕಾರ್ಯಕ್ರಮದ ಪ್ರಮುಖ ಡಾ| ಕೆ.ಬಿ. ಶೇಖರ್ ಹೇಳಿದರು.
ಚಿಕ್ಕೇರಹಳ್ಳಿ ಗ್ರಾಮದಲ್ಲಿ ಮಂಗಳವಾರ ಸ್ವಚ್ಛ ಗ್ರಾಮ ಅಭಿಯಾನ ಮತ್ತು ನೈರ್ಮಲ್ಯ ಆರೋಗ್ಯ ಅರಿವು ಆಂದೋಲನ ಕಾರ್ಯಕ್ರಮ ನಿಮಿತ್ತ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು.
ಗಾಂಧಿ ಜಯಂತಿ ದಿನದಂದು ಗ್ರಾಮಗಳಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ತಾಲೂಕಿನ 22 ಗ್ರಾಮಗಳಲ್ಲಿ ನಂದಿಗುಡಿ ಬ್ರಹನ್ಮಠದ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಗ್ರಾಮಗಳಲ್ಲಿ ಪಾದಯಾತ್ರೆ ಬಗ್ಗೆ ವ್ಯಾಪಕ ಬೆಂಬಲ ಹಾಗೂ ಆದರದ ಸ್ವಾಗತ ದೊರೆಯುತ್ತಿದೆ ಎಂದರು.
ಹರಿಹರ ತಾಲೂಕು ನಂದಿಗುಡಿ ಮಹಾ ಸಂಸ್ಥಾನದ ಲಿಂ| ಹಿರಿಯ ಗುರುಗಳವರ ಸಂಸ್ಮರಣೆ ಪ್ರಯಕ್ತ ಈ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೆ 5 ಗ್ರಾಮಗಳಲ್ಲಿ ಪಾದಯಾತ್ರೆ ಮಾಡಿ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.
ಅ. 7ರಂದು ಮಾದೇನಹಳ್ಳಿ, ಕತ್ತಿಗೆ, ಜೀನಹಳ್ಳಿ, ಗುಡ್ಡೇಹಳ್ಳಿ, ಹೊಸಕೊಪ್ಪ,, ಬೆಳಗುತ್ತಿ, ಮಲ್ಲಗೇನಹಳ್ಳಿ, ರಾಮೇಶ್ವರ, ಯರಗನಾಳ್ ಗ್ರಾಮಗಳಲ್ಲಿ ಹಾಗೂ ಅ. 14ರಂದು ಆರುಂಡಿ, ಕೆಂಚಿಕೊಪ್ಪ, ಸೊರಟೂರು, ತುಗ್ಗಲಹಳ್ಳಿ, ಎಚ್. ಕಡದಕಟ್ಟೆ, ಹಿರೇಕಲ್ಮಠ ಗ್ರಾಮಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ನಂದಿಗುಡಿ ಬ್ರಹನ್ಮಠದ ಸಿದ್ಧರಾಮೇಶ್ವರ ಶಿವಾಚಾರ್ಯಸ್ವಾಮಿಜಿ ನೇತೃತ್ವವಹಿಸಿದ್ದರು. ಡಾ| ಗುರುಶಾಂತಯ್ಯ, ಡಾ| ವೇದಮೂರ್ತಿ, ಡಾ| ಸಿದ್ದನಗೌಡ, ಉಪನ್ಯಾಸಕ ಉಮೇಶ್, ಸಾಹಿತಿ ಕತ್ತಿಗೆ ಚನ್ನಪ್ಪ, ನಿವೃತ್ತ ಉಪನ್ಯಾಸಕ ಹುಡೇದ್, ನಿವೃತ್ತ ನೌಕರ ಸೋಮಸುಂದರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.