ಹೊನ್ನಾಳಿ ಗಲಭೆ: ನಾಲ್ವರ ಬಂಧನ


Team Udayavani, Feb 17, 2017, 1:23 PM IST

dvg7.jpg

ದಾವಣಗೆರೆ: ಹೊನ್ನಾಳಿಯಲ್ಲಿ ಬುಧವಾರ ನಡೆದ ಪೊಲೀಸ್‌ ಠಾಣೆಗೆ ಮುತ್ತಿಗೆ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌ ತಿಳಿಸಿದ್ದಾರೆ. ಪೊಲೀಸರು ಸಂತ ಸೇವಾಲಾಲ್‌ ಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿಲ್ಲ. 

ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದವನು ಟ್ರ್ಯಾಕ್ಟರ್‌ ಚಾಲಕ ಮತ್ತು ಇತರೆ ಕೆಲವರೆ ಹೊರತು ಮಾಲಾಧಾರಿಗಳಲ್ಲ. ಪೊಲೀಸರು ಬೂಟುಗಾಲಿನಿಂದ ಹೊಡೆದಿಲ್ಲ. ಅದು ಬರೀ ವದಂತಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ಸೂರಗೊಂಡನಕೊಪ್ಪ ಗ್ರಾಮದಲ್ಲಿ ಭೋಗ್‌ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಊರಿಗೆ ವಾಪಾಸ್ಸಾಗುತ್ತಿದ್ದ ಕೆಲವರು ಹೊನ್ನಾಳಿಯ ಖಾಸಗಿ ಬಸ್‌ ನಿಲ್ದಾಣದ ಬಳಿ ರಸ್ತೆ ಮಧ್ಯದಲ್ಲಿ ತಾವಿದ್ದ ಟ್ರ್ಯಾಕ್ಟರ್‌ ನಿಲ್ಲಿಸಿದ್ದರು.

ಸಂಚಾರಕ್ಕೆ ಅಡ್ಡಿಯಾಗುತ್ತಿದ್ದರಿಂದ ಅಲ್ಲಿಂದ ಟ್ರ್ಯಾಕ್ಟರ್‌ ತೆರವುಗೊಳಿಸುವಂತೆ ನಮ್ಮ ಸಿಬ್ಬಂದಿ ಹೇಳಿದರು. ಅಷ್ಟಕ್ಕೆ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆದು, ಸಿಬ್ಬಂದಿಯನ್ನು ಥಳಿಸಿದ್ದಾರೆ. ಆಗ ಟ್ರ್ಯಾಕ್ಟರ್‌ನ್ನು ಠಾಣೆಗೆ ತಂದು, ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದರು. ಈ ಮಧ್ಯೆ ಮಾಲಾಧಾರಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ವದಂತಿ ಹರಡಿ, 7-8 ಸಾವಿರ ಮಂದಿ ಠಾಣೆ ಮುಂದೆ ಜಮಾಯಿಸಿ, ಕಲ್ಲು ತೂರಾಟದಲ್ಲಿ ತೊಡಗಿದ್ದರು.

ಪರಿಸ್ಥಿತಿ ನಿಯಂತ್ರಣಕ್ಕೆ 3 ಸುತ್ತಿನ ಅಶ್ರುವಾಯು ಸಿಡಿಸಲಾಯಿತು. ಅಲ್ಲಿಗೂ ಗಲಾಟೆ ಕಡಿಮೆಯಾಗದಿದ್ದರಿಂದ ಫೈರಿಂಗ್‌ ಅನಿವಾರ್ಯವಾಗಲಿದೆ ಎಂಬುದಾಗಿ ಎಚ್ಚರಿಸಿದ್ದರಿಂದ ಜನರು ಚದುರಿದರು ಎಂದು ತಿಳಿಸಿದರು. ಘಟನೆಗೆ ಸಂಬಂಧಿಸಿದಂತೆ ದೊಂಬಿ, ಕರ್ತವ್ಯಕ್ಕೆ ಅಡ್ಡಿ, ಗುಂಪು ಕಟ್ಟಿಕೊಂಡು ಕಾನೂನು ಬಾಹಿರ ಕ್ರಮಕ್ಕೆ ಮುಂದಾಗಿದ್ದರ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ.

ಇಡೀ ಘಟನೆಯ ವೀಡಿಯೋ ಚಿತೀಕರಣ ಮಾಡಲಾಗಿದೆ. ಅದರ ಆಧಾರದಲ್ಲಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಅಮಾಯಕರನ್ನು ಬಂಧನಕ್ಕೆ ಒಳಪಡಿಸಿದ್ದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಜೋರಾಗಿ ಟೇಪ್‌ ರೆಕಾರ್ಡ್‌ ಹಾಕಿಕೊಂಡು, ರಸ್ತೆ ಮಧ್ಯೆ ಟ್ರ್ಯಾಕ್ಟರ್‌ ನಿಲ್ಲಿಸಿ, ಹೋಟೆಲ್‌ ಗೆ ಹೋಗಿದ್ದರಿಂದ ಜನರಿಗೆ ಅಡಚಣೆಯಾಗುತ್ತಿತ್ತು. ಹಾಗಾಗಿ ಟ್ರ್ಯಾಕ್ಟರನ್ನು ಮುಂದಕ್ಕೆ ಬಿಡುವಂತೆ ಅಲ್ಲಿದ್ದ ಪೇದೆ ಹೇಳಿದ್ದರು ಅಷ್ಟೇ.

ಆ ಪೇದೆ ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ. ಘಟನೆಗೆ ಸಂಬಧಿಸಿದಂತೆ ಹೊನ್ನಾಳಿ ತಹಶೀಲ್ದಾರ್‌ ಅವರು ಸ್ಥಳ ತನಿಖೆ ನಡೆಸಿ, ವರದಿ ಸಹ ಸಲ್ಲಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಯಶೋಧಾ ಎಸ್‌. ವಂಟಿಗೋಡಿ, ನಗರ ಪೊಲೀಸ್‌ ಉಪಾಧೀಕ್ಷಕ ಕೆ. ಅಶೋಕ್‌ ಕುಮಾರ್‌, ವೃತ್ತ ನಿರೀಕ್ಷಕ ಸಂಗನಾಥ್‌, ಪಿಎಸ್‌ಐಗಳಾದ ಡಿ.ಎಂ. ಭವ್ಯ, ವೈ.ಎಸ್‌. ಶಿಲ್ಪ ಸುದ್ದಿಗೋಷ್ಠಿಯಲ್ಲಿದ್ದರು.   

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.