ನಾನು ರೆಡ್ಡಿ ಸಮಾಜದವನೆಂದು ಹೇಳಲು ಹೆಮ್ಮೆ: ಗಾಲಿ


Team Udayavani, Jul 24, 2017, 12:31 PM IST

24-DV-1.jpg

ದಾವಣಗೆರೆ: ರಾಜ್ಯದ 60 ವಿಧಾನ ಸಭಾ ಕ್ಷೇತ್ರದಲ್ಲಿ ತಲಾ 30 ಸಾವಿರ ಮತದಾರರನ್ನು ಹೊಂದಿರುವ ರೆಡ್ಡಿ ಸಮುದಾಯ ನನ್ನದು ಎಂದು ಹೇಳಿಕೊಳ್ಳಲು ನಾನು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಭಾನುವಾರ ಕಮ್ಮವಾರಿ ಭವನದಲ್ಲಿ ಶ್ರೀ ವೆಂಕಟೇಶ್ವರ ಸೇವಾ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಮೊದಲು ನಾನು ರೆಡ್ಡಿ ಸಮುದಾಯದವನೆಂದು ಗುರುತಿಸಿಕೊಳ್ಳಲು ಹಿಂಜರಿಯುತ್ತಿದ್ದೆ. ಆದರೆ, ಬೆಂಗಳೂರಿನಲ್ಲಿ ಇತೀಚಿಗೆ ವೇಮ, ಹೇಮರೆಡ್ಡಿ ಸಮಾಜದ ಸಮಾವೇಶದಲ್ಲಿ ಸೇರಿದ ಜನಸಂಖ್ಯೆ ನೋಡಿದ ಮೇಲೆ ನನಗೆ ನಾನು ಸಮುದಾಯದವನೆಂದು ಹೇಳಿಕೊಳ್ಳಲು ಹೆಮ್ಮೆ ಅನ್ನಿಸುತ್ತದೆ ಎಂದರು.

ಬೆಂಗಳೂರಿನ ಸಮಾವೇಶಕ್ಕೆ ಸುಮಾರು 4 ಲಕ್ಷ ಜನರು ಸೇರಿದ್ದರು. ಇತ್ತೀಚೆಗೆ ಸರ್ಕಾರ ಕೈಗೊಂಡಿರುವ ಜನಗಣತಿ ವೇಳೆ ನಮ್ಮ ಸಮುದಾಯ 60 ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತಲಾ 30 ಸಾವಿರ ಮತದಾರರನ್ನು ಹೊಂದಿದೆ. ನಾನು ಈವರೆಗೆ ಒಂದಿಷ್ಟು ತಾಲೂಕುಗಳಲ್ಲಿ ಮಾತ್ರ ನಾವಿದ್ದೇವೆ ಅಂದುಕೊಂಡಿದ್ದೆ. ಆದರೆ, ಕರ್ನಾಟಕದ ಮೂಲೆ ಮೂಲೆಯಲ್ಲೂ ನಾವು ಇದ್ದೇವೆ ಎಂದು ಹೇಳಿದರು.

ದಾವಣಗೆರೆ ಮಧ್ಯ ಕರ್ನಾಟಕ ನಗರಿಯಾಗಿದೆ. ಇಲ್ಲಿ ನಮ್ಮ ಸಮುದಾಯ ಉತ್ತಮ ಸಂಖ್ಯೆಯಲ್ಲಿದೆ. ಇಲ್ಲಿಯೇ ಸಮಾಜ ಬೆಳೆಯಬೇಕಿದೆ. ಇಲ್ಲಿಯೇ ಇರುವ ವೇಮನ ಮಠವನ್ನು ಅಭಿವೃದ್ದಿ ಪಡಿಸೋಣ. ಇನ್ನೊಂದು ಸಿದ್ಧಗಂಗಾ ಮಠ ಇಲ್ಲಿದೆ ಎಂಬಂತೆ ಸೇವೆ ಮಾಡೋಣ. ನಾನು ಮಠದ ಏಳಿಗೆಗೆ
ಶ್ರಮಿಸಲು ಸದಾ ಸಿದ್ಧ. ಇಂದು ಕಾರ್ಯಕ್ರಮಕ್ಕೆ ಬರುತ್ತಿದ್ದೇನೆ ಎಂಬುದು ಗೊತ್ತಾಗುತ್ತಲೇ ಅನೇಕ ಮಠಾಧೀಶರು ನನ್ನನ್ನು ಮಠಕ್ಕೆ ಆಹ್ವಾನಿಸಿದ್ದರು. ಎಲ್ಲಾ ಮಠಗಳಿಗೆ ಇಂದು ನಾನು ಭೇಟಿನೀಡಿ ಬಂದೆ ಎಂದು ತಿಳಿಸಿದರು.

ನೀವು ಯಾವುದೇ ಕಾರ್ಯಕ್ರಮಕ್ಕೆ, ರಾಜ್ಯದ ಯಾವುದೇ ಮೂಲೆಗೆ ಆಹ್ವಾನಿಸಿದರೂ ನಾನು ಬರಲು ಸಿದ್ಧ. ಅಲ್ಲಿ 50 ಮನೆ ಇವೆಯಾ, 5000 ಮನೆ ಇವೆಯಾ ಮುಖ್ಯವಲ್ಲ. ನಮ್ಮ ಸಮುದಾಯದ ಜನರಿರುವುದು ಮುಖ್ಯ. ನಿಮ್ಮೆಲ್ಲಾ ಕಷ್ಟ ಸುಖದಲ್ಲಿ ನಾನು ಭಾಗಿಯಾಗುತ್ತೇನೆ. ಕಳೆದ 6 ತಿಂಗಳಲ್ಲಿ ನಾನು ರಾಜ್ಯದ ವಿವಿಧ ಬಾಗಗಳಲ್ಲಿ ನಡೆದ 43 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆ ಎಂದು ತಿಳಿಸಿದರು.

ಹೇಮರೆಡ್ಡಿ ಮಲ್ಲಮ್ಮ ಪವಾಡ ಸೃಷ್ಟಿಸಿದ ಮಹಾನ್‌ ಸಾಧಕಿ. ಜೀವನದುದ್ದಕ್ಕೂ ಶಿವನನ್ನು ಒಲಿಸಿಕೊಳ್ಳುವಲ್ಲಿ ಯಶ ಕಂಡವರು. ಸಣ್ಣ ವಯಸ್ಸಿನಲ್ಲಿ ತಾಯಿ ಕಳೆದುಕೊಂಡು, ಶಿವನನ್ನೇ ತಾಯಿ ರೂಪದಲ್ಲಿ ಪಡೆದು ಮಮತೆ ಪಡೆದುಕೊಂಡಾಕೆ. ಮದುವೆಯಾದ ನಂತರ ತನ್ನ ಮೈದುನನ್ನು ಪರಿವರ್ತಿಸಿ, ಶರಣನನ್ನಾಗಿಸಿದಳು. ಕೊನೆ ಗಳಿಗೆಯಲ್ಲಿ ಶಿವನನ್ನು ಒಲಿಸಿಕೊಂಡು ರೆಡ್ಡಿ ಸಮಾಜ ಸದಾ ದಾನಮಾಡುವಷ್ಟು ಸಿರಿ ಕೊಡುವಂತೆ ಬೇಡಿಕೊಂಡವರು. ಅಂತಹವರ ಆಶೀರ್ವಾದ ನನ್ನ ಮೇಲೂ ಸಹ ಇದೆ. ಸುಮಾರು 5 ವರ್ಷ ಜನರ ಒಡನಾಟದಿಂದ ದೂರ ಇದ್ದ ನಾನು ಇದೇ ಮಲ್ಲಮ್ಮ ವೇಮನರ ಆಶೀರ್ವಾದದಿಂದ ಮತ್ತೆ ಜನರ ಮಧ್ಯೆಕ್ಕೆ ಬಂದಿದ್ದೇನೆ. ಇದು ನನಗೆ ಸಂತಸ ತರುವ ವಿಷಯವಾಗಿದೆ ಎಂದು ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ್‌, ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌, ವಿಪ ಮಾಜಿ ಸದಸ್ಯ ಡಾ| ಎ.ಎಚ್‌. ಶಿವಯೋಗಿ ಸ್ವಾಮಿ, ಮಾಜಿ ಶಾಸಕ ಎಸ್‌.ವಿ. ರಾಮಚಂದ್ರ, ಜಿಪಂ ಮಾಜಿ ಅಧ್ಯಕ್ಷ ವೀರೇಶ್‌ ಎಂ. ಹನಗವಾಡಿ, ಮಾಜಿ ಮೇಯರ್‌ ಅಶ್ವಿ‌ನಿ ಪ್ರಶಾಂತ್‌, ಆರ್‌ಎಸ್‌ ಎಸ್‌ ಮುಖಂಡ ಕೃ. ನರಹರಿ, ಬಸಪ್ಪ ರೆಡ್ಡಿ, ವಿನಯ್‌ ಪಾಟೀಲ್‌, ಕವಿತ ವಸಂತ ಇತರರು ವೇದಿಕೆಯಲ್ಲಿದ್ದರು.

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳು, ಶಾಲೆಗೆ ಶೇ.100ರಷ್ಟು ಫಲಿತಾಂಶ ತಂದುಕೊಡಲು ಕಾರಣರಾದ ಶಿಕ್ಷಕರು, ಸ್ತ್ರೀ ಶಕ್ತಿ ಸಂಘಗಳ ಪದಾಧಿಕಾರಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.