ಪಂಚಾಯ್ತಿ ಹಂತದಲ್ಲೇ ಜೀವ ವೈವಿಧ್ಯ ತಾಣ ಗುರುತಿಸಿ


Team Udayavani, Jan 6, 2021, 4:49 PM IST

ಪಂಚಾಯ್ತಿ ಹಂತದಲ್ಲೇ ಜೀವ ವೈವಿಧ್ಯ ತಾಣ ಗುರುತಿಸಿ

ದಾವಣಗೆರೆ: ಜೀವ ವೈವಿಧ್ಯ ತಾಣಗಳನ್ನು ಪಂಚಾಯಿತಿ ಹಂತದಲ್ಲಿಯೇ ಗುರುತಿಸುವಕೆಲಸವಾಗಬೇಕು. ಸ್ಥಳೀಯ ಬೆಟ್ಟ, ಗುಡ್ಡ, ಕೆರೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಜೀವ ವೈವಿಧ್ಯ ತಾಣಗಳನ್ನಾಗಿ ಮಾಡಬಹುದಾಗಿದೆ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅಭಿಪ್ರಾಯಿಸಿದರು.

ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿನಡೆದ ಅರಣ್ಯ ಪರಿಸರ ಮತ್ತು ಜೀವ ವೈವಿಧ್ಯ ಸಂರಕ್ಷಣೆ ಕುರಿತ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮೇ 22ರ ದಿನವನ್ನು ಜೀವ ವೈವಿಧ್ಯ ದಿನವಾಗಿ ಎಲ್ಲೆಡೆ ಆಚರಿಸುವ ಮೂಲಕಆ ವರ್ಷದಲ್ಲಿ ಏನೇನು ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಬೇಕೆಂಬ ನೀಲನಕ್ಷೆಯನ್ನುತಯಾರಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು.ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ಹಾಗೂ ನೈಸರ್ಗಿಕಸಂಪನ್ಮೂಲ ರಕ್ಷಣೆಗೆ ಜಿಲ್ಲಾ, ತಾಲೂಕು ಹಾಗೂಗ್ರಾಪಂ ಮಟ್ಟಗಳಲ್ಲಿ ಈಗಾಗಲೇ ರಚನೆಯಾಗಿರುವಸಮಿತಿಗಳು ಕಾರ್ಯ ಚಟುವಟಿಕೆ ನಡೆಸುತ್ತಿದ್ದುವರದಿ ಕೂಡ ನೀಡಿವೆ. ಈ ಕೆಲಸಗಳು ಮತ್ತಷ್ಟು ಪರಿಣಾಮಕಾರಿಯಾಗಿ ಆಗಬೇಕು ಎಂದರು.

ಜೀವ ವೈವಿಧ್ಯತೆಗೆ ಪೂರಕವಾಗಿ ಬಯೋಗ್ಯಾಸ್‌ತಯಾರಿಸುವ ಘಟಕಗಳನ್ನು ನಿರ್ಮಿಸಲು ಈಗಾಗಲೇತರಬೇತಿ ನೀಡಲಾಗಿದೆ. ಇದರಿಂದ ತ್ಯಾಜ್ಯ ವಿಲೇವಾರಿಸುಲಭವಾಗಲಿದ್ದು, ಸಾಕಷ್ಟು ಇಂಧನ ಕೂಡದೊರೆಯಲಿದೆ. ಹೋಟೆಲ್‌ಗ‌ಳು, ಹಾಸ್ಟೆಲ್‌ಗ‌ಳು ಕಲ್ಯಾಣ ಮಂಟಪಗಳಲ್ಲಿ ಉಳಿಯುವ ತ್ಯಾಜ್ಯಗಳಿಂದಬಯೋಗ್ಯಾಸ್‌ ಉತ್ಪಾದಿಸುವುದರಿಂದ ಪರಿಸ ರಕ್ಷಣೆಗೂ ಅನುಕೂಲವಾಗಲಿದೆ ಎಂದು ಹೇಳಿದರು.

ಕೃಷಿ ಚಟುವಟಿಕೆಗೆ ಹೆಚ್ಚಾಗಿ ಕೀಟನಾಶಕ ಬಳಸುವುದರಿಂದ ಪರಿಸರದ ಮೇಲೆ ದುಷ್ಪರಿಣಾಮವಾಗುತ್ತಿದ್ದು, ಕೃಷಿ ಅಧಿಕಾರಿಗಳು ಈಕುರಿತು ಗಮನಹರಿಸಬೇಕು. ಪ್ರಾಣಿ- ಪಕ್ಷಿ ಸಂಕುಲಸತ್ತಾಗ ಅದಕ್ಕೆ ಕಾರಣ ಹುಡುಕಿದಾಗ ಈ ಕೀಟನಾಶಕ ಗೋಚರವಾಗುತ್ತದೆ. ಈಗಾಗಲೇ ನಿಷೇಧಿಸಿರುವ ಕೀಟನಾಶಕಗಳು ಅಂಗಡಿಗಳಲ್ಲಿ ಮಾರಾಟವಾಗದಂತೆಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್‌ ಚಿಂತಾಲ್‌,ನಮ್ಮ ಜಿಲ್ಲೆಯಲ್ಲಿ ನಿಷೇಧಿತ ಕೀಟ ನಾಶಕಗಳು ಮಾರಾಟವಾಗುತ್ತಿಲ್ಲ ಎಂದು ತಿಳಿಸಿದರು.

ಅರಣ್ಯ ಇಲಾಖೆಯವರು ಅರಣ್ಯ ಕೃಷಿಗೆ ಪ್ರೋತ್ಸಾಹನೀಡಬೇಕು. ಜಿಪಂನವರು ನರೇಗಾ ಮೂಲಕ ಹೆಚ್ಚುಗಿಡಗಳನ್ನು ನೆಡಲು ಮುಂದಾಗಬೇಕು. ತೋಟಗಾರಿಕೆಇಲಾಖೆಯವರು ಜೇನು ಸಾಕಾಣಿಕೆಗೆ ಹೆಚ್ಚು ಒತ್ತುನೀಡಿದಲ್ಲಿ ರೈತರಿಗೆ ಆದಾಯ, ಪರಿಸರ ರಕ್ಷಣೆ,ರೈತ ಬೆಳೆಯುವ ಬೆಳೆಗೆ ಪರಾಗ ಸ್ಪರ್ಶ ಕ್ರಿಯೆಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿದ್ದು ಜೀವ ವೈವಿಧ್ಯ ದಾಖಲಾತಿ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಸಾಕಷ್ಟು ಜೀವವೈವಿಧ್ಯದ ಹಾಟ್‌ಸ್ಪಾಟ್‌ಗಳಿದ್ದು, ಕೊಮಾರನಹಳ್ಳಿಗುಡ್ಡ ಅತ್ಯಂತ ಮೌಲ್ಯಯುತ ಜೀವ ವೈವಿಧ್ಹೊಂದಿದೆ. ಕುಂದುವಾಡ ಕೆರೆ ಪ್ರಮುಖ ಜೀವ ವೈವಿಧ್ಯ ತಾಣವಾಗಿದ್ದು, ಹಲವು ಬಗೆಯ ಪಕ್ಷಿಸಂಕುಲಗಳು ಕಂಡು ಬರುತ್ತವೆ. ಈ ಕೆರೆಯನ್ನು ರೂ.18 ಕೋಟಿ ವೆಚ್ಚದಲ್ಲಿಅಭಿವೃದ್ಧಿಪಡಿಸಲಾಗುತ್ತಿದೆ  ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ದಾವಣಗೆರೆ ಸಮೀಪವಿರುವ ಬಾತಿ ಗುಡ್ಡವನ್ನು

ಅಭಿವೃದ್ಧಿಪಡಿಸಿದರೆ ತುಮಕೂರಿನ ಸಿದ್ದರ ಬೆಟ್ಟದಂತೆ ಅಭಿವೃದ್ಧಿಪಡಿಸಬಹುದಾಗಿದೆ ಎಂದರು. ಜಿಪಂ ಸಿಇಒ ಪದ್ಮಾ ಬಸವಂತಪ್ಪ ಮಾತನಾಡಿ,ಚನ್ನಗಿರಿಯ ದಾಗಿನಕಟ್ಟೆ, ದಿದ್ದಿಗಿ, ಹರಿಹರದ ಸಾರಥಿ ಈ ಪ್ರದೇಶಗಳಲ್ಲಿ ಹಸಿರನ್ನು ಕಾಪಾಡಿ,ನರೇಗಾ ಯೋಜನೆಯಡಿ ಹೆಚ್ಚೆಚ್ಚು ಗಿಡಗಳನ್ನು ಬೆಳೆಸಲಾಗುತ್ತಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿನಜ್ಮಾ, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.