ಹೇಳಿಕೆ ಹಿಂಪಡೆಯದಿದ್ದರೆ ಉಗ್ರಪ್ಪ ಮನೆಗೆ ಮುತ್ತಿಗೆ
Team Udayavani, Apr 21, 2017, 12:59 PM IST
ದಾವಣಗೆರೆ: ಹಕ್ಕ-ಬುಕ್ಕ, ಕನಕದಾಸ, ಸಂಗೊಳ್ಳಿ ರಾಯಣ್ಣನವರ ಮೂಲ ಕುರಿತು ವಿಧಾನ ಪರಿಷತ್ ಸದಸ್ಯ ವಿ. ಎಸ್. ಉಗ್ರಪ್ಪನವರು ನೀಡಿದ ಹೇಳಿಕೆ ವಾರದಲ್ಲಿ ಹಿಂಪಡೆಯದಿದ್ದರೆ, ಅವರ ಮನೆ ಮುತ್ತಿಗೆ ಹಾಕಿ ಪ್ರತಭಟಿಸಲಾಗುವುದು ಎಂದು ಪ್ರದೇಶಕುರುಬರ ಸಂಘ ಎಚ್ಚರಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ರಾಮಚಂದ್ರಪ್ಪ, ಉಗ್ರಪ್ಪ ಹೇಳಿಕೆಕುಚೋದ್ಯದಿಂದ ಕೂಡಿದೆ. ಇತಿಹಾಸ ತಿರುಚಿ ಅಗ್ಗದ ಪ್ರಚಾರ ಪಡೆಯುವ ತಂತ್ರ ಹೇಳಿಕೆಯ ಹಿಂದಿದೆ. ವಿಧಾನ ಪರಿಷತ್ ಸದಸ್ಯರಾಗಿರುವ ಉಗ್ರಪ್ಪ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿರುವುದನ್ನು ನಮ್ಮ ಸಮಾಜ ಖಂಡಿಸುತ್ತದೆ ಎಂದರು.
ಕುರುಬ, ನಾಯಕ ಜನಾಂಗದವರು ಭಾತೃತ್ವ ಭಾವದಲ್ಲಿ ಜೀವನ ನಡೆಸುತ್ತಿದ್ದಾರೆ. ಎರಡೂ ಸಮುದಾಯದ ಮಧ್ಯೆ ವಿಷ ಬೀಜ ಬಿತ್ತುವಂತಹ ಕೆಲಸ ಉಗ್ರಪ್ಪ ಮಾಡಿದ್ದಾರೆ. ಇದುವರೆಗೆ ಉಗ್ರಪ್ಪ ಜಾತ್ಯತೀತ ನಿಲುವು ಹೊಂದಿ ರಾಜಕೀಯ ಮಾಡಿಕೊಂಡು ಬಂದಿದ್ದರು. ವಾಲೀ¾ಕಿ ಸಮಾಜದ ಯಾವುದೇ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ.
ಇದೀಗ ನಾಯಕ ಸಮಾಜದ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡು, ಏಕಾಏಕಿ ಇಂತಹ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ ಎಂದು ಅವರು ಹೇಳಿದರು. ದಾಸಶ್ರೇಷ್ಠ ಕನಕದಾಸರು ತಮ್ಮ ಕೀರ್ತನೆಗಳಲ್ಲಿಯೇ ತಾವು ಕುರುಬ ಜಾತಿಗೆ ಸೇರಿದವರೆಂದು ಹೇಳಿಕೊಂಡಿದ್ದಾರೆ. ಐತಿಹಾಸಿಕ ದಾಖಲೆಗಳ ಪ್ರಕಾರ ಸಂಗೊಳ್ಳಿ ರಾಯಣ್ಣ ಕುರುಬ ಸಮಾಜಕ್ಕೆ ಸೇರಿದವರು.
ಇದಕ್ಕೆ ಉಗ್ರಪ್ಪನವರು ಈಗ ಸರ್ಟಿμಕೇಟ್ನೀಡಬೇಕಾದ ಅಗತ್ಯ ಇಲ್ಲ. ಅವರು ತಮ್ಮ ಬಾಯಿ ಚಪಲಕ್ಕೆ ನೀಡಿದ ಹೇಳಿಕೆಯನ್ನು ವಾರದಲ್ಲಿ ಹಿಂಪಡೆಯಬೇಕು. ಕುರುಬ ಸಮಾಜದ ಕ್ಷಮೆ ಕೇಳಬೇಕು. ಇಲ್ಲದೇ ಹೋದರೆ ನಾವು ಅವರ ಮನೆಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದೇವೆ ಎಂದು ಅವರು ಎಚ್ಚರಿಸಿದರು.
ಸಂಘದ ಸಂಘಟನಾ ಕಾರ್ಯದರ್ಶಿಪಿ. ರಾಜಕುಮಾರ್ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಯಲ್ಲಿ ನಾನು ಕುರುಬ, ನನ್ನ ತಂದೆ ಬೀರಪ್ಪ, ತಾಯಿ ಬಚ್ಚಮ್ಮ ಎಂಬುದಾಗಿ ಹೇಳಿಕೊಂಡಿದ್ದಾರೆ. ಸಂಗೊಳ್ಳಿ ರಾಯಣ್ಣನ ವಂಶಸ್ಥರು ಇಂದಿಗೂ ಬದುಕಿದ್ದಾರೆ. ಹೀಗಿರುವಾಗಿ ಉಗ್ರಪ್ಪನವರಿಂದ ಇಂತಹ ಹೇಳಿಕೆ ನಿರೀಕ್ಷಿತವಲ್ಲ.
ಸಂವಿಧಾನ ತಿದ್ದುಪಡಿ ಮಾಡುವಂತಹ ಶಾಸಕಾಂಗವನ್ನು ಪ್ರತಿನಿಧಿಸುವ, ವಕೀಲ, ಚಿಂತಕರೆನ್ನಿಸಿಕೊಂಡಿರುವ ಉಗ್ರಪ್ಪ ನೀಡಿದ ಹೇಳಿಕೆಯಿಂದ ಸಹೋದರ ಸಮಾಜಗಳ ನಡುವಿನ ಸಂಬಂಧಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಬೇಸರಿಸಿದರು. ಸಮಾಜದ ಮುಖಂಡ ಎಸ್.ಎಸ್. ಗಿರೀಶ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.