ಇಂಧನ ಬೆಲೆ ಏರಿಕೆಗೆ ಆಕ್ರೋಶ
Team Udayavani, Jun 26, 2020, 2:55 PM IST
ಜಗಳೂರು: ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಜಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ರೈತ ಸಂಘದ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ವತಿಯಿಂದ ಗುರುವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರವಾಸಿಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಅತ್ಯಂತ ಕಡಿಮೆ ಇದ್ದು ಭಾರತದಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಕೇಂದ್ರ ಸರ್ಕಾರ ಕೂಡಲೇ ಜಾರಿಗೆ ಬರುವಂತೆ ಇಂಧನ ಬೆಲೆಯನ್ನು ಕಡಿಮೆಗೊಳಿಸಬೇಕು. ಹಿಂದೆ ಇದ್ದ ಹಾಗೆ ಬೆಲೆ ನಿಯಂತ್ರಣವನ್ನು ತನ್ನ ಸುಪರ್ದಿಗೆ ತೆಗೆದುಕೊಂಡು ಯಾವುದೇ ಕಂಪನಿಗಳು ಕೈಗೊಳ್ಳುವ ಬೆಲೆ ಏರಿಕೆ ಮತ್ತು ಇಳಿಕೆ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ರೈತ ಸಂಘದ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ಗೌಡಗೊಂಡನಹಳ್ಳಿ ಸತೀಶ್, ಗಂಗಾಧರಪ್ಪ, ದೊಣೆಹಳ್ಳಿ ಲೋಕೇಶ್, ರಾಜು, ರಂಗಪ್ಪ, ಶಾಂತಪ್ಪ, ಹೊನ್ನೂರಾಲಿ, ನಾಗರಜ್, ಕೆಂಚಪ್ಪ, ಶರಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.