ಕಿಸಾನ್‌ ಸಮ್ಮಾನ್‌ ಸಮೇಳನ ವೀಕ್ಷಿಸಿದ ರೈತ ಬಾಂಧವರು

ದೇಶದಲ್ಲಿ ಸುರಕ್ಷಿತ ಮತ್ತು ಸ್ವಚ್ಛ ಆಹಾರ ಉತ್ಪಾದನೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಲು ಕರೆ ನೀಡಿದರು.

Team Udayavani, Oct 18, 2022, 5:46 PM IST

ಕಿಸಾನ್‌ ಸಮ್ಮಾನ್‌ ಸಮೇಳನ ವೀಕ್ಷಿಸಿದ ರೈತ ಬಾಂಧವರು

ದಾವಣಗೆರೆ: ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಆಯೋಜನೆಗೊಂಡಿದ್ದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಸಮೇಳನ ಉದ್ಘಾಟನೆಯನ್ನು ಐಸಿಎಆರ್‌-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ನೇರ ಪ್ರಸಾರದ ಮೂಲಕ ರೈತರಿಗೆ ತೋರಿಸಲಾಯಿತು.

ದಾವಣಗೆರೆಯ ವಿವಿಧ ಗ್ರಾಮಗಳಿಂದ 150ಕ್ಕೂ ಹೆಚ್ಚು ರೈತರ ಹಾಗೂ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ, ವೀಕ್ಷಣೆ ಮಾಡಿದರು. ಇಂದು ಪ್ರಧಾನಮಂತ್ರಿಗಳು ದೇಶದ ವಿವಿಧ ಭಾಗಗಳಿಂದ ಎರಡು ಲಕ್ಷಕ್ಕೂ ಹೆಚ್ಚು ಸಾಮಾನ್ಯ ಸೇವಾ ಕೇಂದ್ರಗಳಿಂದ ಒಂದು ಕೋಟಿಗೂ ಹೆಚ್ಚು ರೈತರಿಗೆ ವಿವಿಧ ರೈತ ಕಲ್ಯಾಣ ಯೋಜನೆಗಳನ್ನು ಅನಾವರಣಗೊಳಿಸಿದರು.

ಅವುಗಳಲ್ಲಿ ಮುಖ್ಯವಾಗಿ ರೈತರಿಗೆ 12ನೇ ಆವರ್ತದ 16,000ರೂ. ಕೋಟೆ ಕಿಸಾನ್‌ ಸಮ್ಮಾನ್‌ ನಿಧಿ ಬಿಡುಗಡೆ, ಕೃಷಿ ಸ್ಟಾರ್ಟ್‌ ಅಪ್‌ ಯೋಜನೆ ಉದ್ಘಾಟನೆ, 600ಪ್ರಧಾನಮಂತ್ರಿ ಕಿಸಾನ್‌ ಸಮೃದ್ಧಿ ಕೇಂದ್ರಗಳ ಉದ್ಘಾಟನೆ, ಒಂದು ದೇಶ ಒಂದು ಗೊಬ್ಬರ ಯೋಜನೆ ಹಾಗೂ ಅಂತಾರಾಷ್ಟ್ರೀಯ ರಸಗೊಬ್ಬರ ಈ ಪ್ರತಿಕೆ ಬಿಡುಗಡೆ ಅನಾವರಣಗೊಳಿಸಲಾಯಿತು. ತರಳಬಾಳು ಕೇಂದ್ರದಲ್ಲಿ ಈ ಕಾರ್ಯಕ್ರಮಕ್ಕೂ ಮುನ್ನ 2022ರ ವಿಶ್ವ ಆಹಾರ ದಿನ ಆಚರಿಸಲಾಯಿತು.

ಕೃಷಿ ಉಪನಿದೇರ್ಶಕ ತಿಪ್ಪೇಸ್ವಾಮಿ ಆರ್‌. ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ, ದೇಶದಲ್ಲಿ ಸುರಕ್ಷಿತ ಮತ್ತು ಸ್ವಚ್ಛ ಆಹಾರ ಉತ್ಪಾದನೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಲು ಕರೆ ನೀಡಿದರು.

ಸಭೆಯ ಅಧ್ಯಕ್ಷತೆವಹಿಸಿದ್ದ ಡಾ| ಜಯದೇವಪ್ಪ ಜಿ.ಕೆ., ವಿಶ್ವ ಆಹಾರ ದಿನಾಚರಣೆ ಹಾಗೂ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಸಮ್ಮೇಳನದ ಕುರಿತು ಮಾಹಿತಿ ನೀಡಿದರು. ಡಾ| ಅವಿನಾಶ್‌ ಟಿ.ಜಿ. ಜೈವಿಕ ಗೊಬ್ಬರಗಳು ಮತ್ತು ಪೀಡೆನಾಶಕಗಳ ಕುರಿತು ಮಾಹಿತಿ ನೀಡಿದರು. ಮಣ್ಣು ವಿಜ್ಞಾನಿ ಹೆಚ್‌.ಎಂ. ಸಣ್ಣಗೌಡರ ಮಣ್ಣು ಆರೋಗ್ಯ ಮತ್ತು ನಮ್ಮ ಆರೋಗ್ಯ ವಿಚಾರವಾಗಿ ರೈತರಿಗೆ ಉಪನ್ಯಾಸ ನೀಡಿದರು. ರೈತ ಮುಖಂಡರಾದ ಆವರಗೆರ ರುದ್ರಮುನಿ ಮತ್ತು ಕುಂದೂರು ಮಂಜಪ್ಪನವರು ಭಾಗವಹಿಸಿ ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.

ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿಯೂ ಪ್ರಧಾನ ಮಂತ್ರಿ ಕಿಸಾನ್‌ ಸಮೃದ್ಧಿ ಕೇಂದ್ರಉದ್ಘಾಟನೆ, ಒಂದು ರಾಷ್ಟ್ರ, ಒಂದು ರಸಗೊಬ್ಬರ ಪ್ರಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರು ಕಾರ್ಯಕ್ರಮ ಉದ್ಘಾಟಿಸುವುದನ್ನು ನೇರ ಪ್ರಸಾರದ ಮೂಲಕ ರೈತರಿಗೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಯಿತು. ಇಫೋR ಕ್ಷೇತ್ರ ಅಧಿಕಾರಿ ರಾಜೇಂದ್ರಪ್ರಸಾದ್‌ ಎಸ್‌., ಕೃಷಿ ಅಧಿಕಾರಿ ಚಂದ್ರಪ್ಪ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀದೇವಿ, ಪಾಲಾಕ್ಷಪ್ಪ, ಡಿ.ಎಂ. ಪ್ರಕಾಶ್‌ ಇನ್ನಿತರರು ಕಾರ್ಯಕ್ರಮದಲ್ಲಿದ್ದರು. ಕುಕ್ಕುವಾಡ ಮತ್ತು ಸುತ್ತ ಮುತ್ತಲಿನ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

rahul gandhi (2)

Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

rahul gandhi (2)

Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.