ಕೂಲಿ ಕಾರ್ಮಿಕರಿಂದ ಮೆರವಣಿಗೆ


Team Udayavani, Feb 28, 2017, 1:25 PM IST

dvg4.jpg

ದಾವಣಗೆರೆ: ಉದ್ಯೋಗ ಖಾತ್ರಿ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಮೆರವಣಿಗೆ, ಧರಣಿ ನಡೆಯಿತು. ಹೈಸ್ಕೂಲ್‌ ಮೈದಾನದಿಂದ ಮೆರವಣಿಗೆ ಆರಂಭಿಸಿದ ಕೂಲಿ ಕಾರ್ಮಿಕರು, ಅಂಬೇಡ್ಕರ್‌ ವೃತ್ತ, ಹದಡಿ ರಸ್ತೆ ಮೂಲಕ ಜಿಲ್ಲಾ ಪಂಚಾಯತ್‌ ಕಚೇರಿ ಆವರಣ ತಲುಪಿ, ಅಲ್ಲಿ ಕೆಲ ಹೊತ್ತು ಸಾಂಕೇತಿಕ ಧರಣಿ ನಡೆಸಿದರು. 

ರ್ಯಾಲಿಗೆ ಚಾಲನೆ ನೀಡಿ, ಮಾತನಾಡಿದ ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ, ಕೂಲಿ ಕಾರ್ಮಿಕರ ಇಂದಿನ ಸ್ಥಿತಿ ತೀರ ಶೋಚನೀಯವಾಗಿದೆ. ರಾಜ್ಯ, ಕೇಂದ್ರ ಸರ್ಕಾರಗಳು ದೊಡ್ಡವರ ಪರ ನಿಲ್ಲುತ್ತಿವೆ. ಸಣ್ಣವರ ಕೂಗು ಕೇಳುತ್ತಿಲ್ಲ. ಬರದ ಈ ದಿನಗಳಲ್ಲಿ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದರು. 

ಕೇಂದ್ರ ಸರ್ಕಾರ ಕಾರ್ಪೋರೇಟ್‌ ವಲಯಕ್ಕೆ ಕೋಟ್ಯಂತರ ರೂಪಾಯಿ ಸಹಾಯ ಮಾಡುತ್ತದೆ. ಈ ವರ್ಷ 5 ಲಕ್ಷ ಕೋಟಿ ರೂ.ನಷ್ಟು ರಿಯಾಯಿತಿ ನೀಡಿದೆ. ಆದರೆ, ಕೂಲಿ ಕಾರ್ಮಿಕರ, ರೈತರ ಸಮಸ್ಯೆ ಆಲಿಸಲು ಸಮಯವಿಲ್ಲ. ಲಕ್ಷ ಕೋಟಿ ರೂ.ಗಿಂತ ಕಡಮೆ ಇರುವ ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ ಎಂದು ದೂರಿದರು. 

ಕೂಡಲೇ ಕೇಂದ್ರ-ರಾಜ್ಯ ಸರ್ಕಾರಗಳು ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸಬೇಕು. ದಿನಕ್ಕೆ 300 ರೂ.ನಂತೆ ಕನಿಷ್ಠ ವೇತನ ನೀಡಲು ಕ್ರಮ ವಹಿಸಬೇಕು. ಸದ್ಯಉದ್ಯೋಗ ಖಾತರಿ ಯೋಜನೆಅಡಿ ಕೊಡಲಾಗುವ ಕೆಲಸವನ್ನು ವರ್ಷದಲ್ಲಿ 200ರಿಂದ 250 ದಿನ ಕೊಡಬೇಕು. ಬೋಗಸ್‌ ಜಾಬ್‌ ಕಾರ್ಡ್‌ ಹೊಂದಿರುವವರನ್ನು ಪತ್ತೆ ಮಾಡಿ, ರದ್ದುಮಾಡಬೇಕು.

ನಿಜವಾಗಿಯೂ ಕೆಲಸದ ಅಗತ್ಯ ಇರುವ ಕಾರ್ಮಿಕರಿಗೆ ಜಾಬ್‌ ಕಾರ್ಡ್‌ ನೀಡಬೇಕು ಎಂದು ಅವರು ಆಗ್ರಹಿಸಿದರು.  ಹಾಲಿ ಎನ್‌ಆರ್‌ಇಜಿ ಅಡಿ ನೀಡಲಾಗುವ ಕೂಲಿ ಹಣವನ್ನು ಮನಸ್ಸಿಗೆ ಬಂದಾಗ ನೀಡಲಾಗುತ್ತಿದೆ. ಇದು ಬದಲಾಗಬೇಕು. ಇತರೆಯವರಿಗೆ ಕೊಡುವ ಮಾದರಿಯಲ್ಲಿಯೇ ವಾರಕ್ಕೆ ನೀಡಲು ಕ್ರಮ ಕೈಗೊಳ್ಳಬೇಕು.

ಮಧ್ಯವರ್ತಿಗಳ ಹಾವಳಿಯಿಂದ ಕೂಲಿ ಕಾರ್ಮಿಕರನ್ನು ಮುಕ್ತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ಸಂಘಟನೆ ಉಪಾಧ್ಯಕ್ಷೆ ನೇತ್ರಾವತಿ, ವೀರಮ್ಮ, ತಿಪ್ಪೇಸ್ವಾಮಿ, ಶ್ರೀಮತಿ ಹುಚ್ಚೆಂಗಮ್ಮ, ಶ್ರೀಮತಿ ಶಶಿಕಲಾ, ಕೆಂಚಪ್ಪ, ಕೆ. ಗುಡದಯ್ಯ, ತಿಪ್ಪೇಸ್ವಾಮಿ, ಶಶಿಕಲಾ, ಜಗದೀಶ್‌ ರ್ಯಾಲಿ ನೇತೃತ್ವ ವಹಿಸಿದ್ದರು.  

ಟಾಪ್ ನ್ಯೂಸ್

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.