ಬೇಡಿಕೆ ಈಡೇರಿಕೆಗೆ ಹೊರಗುತ್ತಿಗೆ ನೌಕರರಿಂದ ಪತ್ರ ಚಳವಳಿ
Team Udayavani, Oct 6, 2020, 4:45 PM IST
ದಾವಣಗೆರೆ: ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ 300ಕ್ಕೂ ಹೆಚ್ಚು ನೌಕರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿಶ್ವೇಶ್ವರಯ್ಯ ಉದ್ಯಾನದಲ್ಲಿ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವ ಮೂಲಕ ವಿನೂತನ ಚಳವಳಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಎನ್.ಸಿ. ಹಾಲಸ್ವಾಮಿ, ರಾಜ್ಯ ಸಮಿತಿ ಸೆಪ್ಟೆಂಬರ್ 24 ರಿಂದ ಕೆಲಸ ಬಹಿಷ್ಕರಿಸಿಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಆರೋಗ್ಯ ಇಲಾಖೆಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರುಶಾಂತಿಯುತವಾಗಿ ಧರಣಿ ನಡೆಸುತ್ತಿದ್ದೇವೆ.ದಾವಣಗೆರೆಯಲ್ಲೂ 12 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು ಪತ್ರ ಚಳವಳಿ ಮೂಲಕ ಸರ್ಕಾರಕ್ಕೆ ನಮ್ಮ ಹೋರಾಟದ ಉದ್ದೇಶ ತಿಳಿಸಿದ್ದೇವೆ ಎಂದರು.
ನಾವು ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ಕೆಲಸ ಕಾಯಂ ಮಾಡಬೇಕೆಂದು ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸದೆ ಅಧಿಕಾರಿಗಳ ಮೂಲಕ ಶಿಸ್ತುಕ್ರಮದ ಎಚ್ಚರಿಕೆ ನೀಡಲು ನಿರ್ದೇಶನಮಾಡುತ್ತಿರುವುದು ವಿಷಾದನೀಯ. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ್ದಾರೆ.ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದ ನಮಗೆ ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ನೋಟಿಸ್ ಜಾರಿ ಮಾಡುವ ಮೂಲಕ ನ್ಯಾಯಯುತ ಹೋರಾಟ ಹತ್ತಿಕ್ಕುವಕೆಲಸ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಮಾನ ವೇತನ, ಸೇವಾ ಭದ್ರತೆ, ಎಲ್ಲ ಹುದ್ದೆಗಳಿಗೆ ವೇತನ ಭತ್ಯೆ, ಶ್ರೇಣಿ ನೀಡಬೇಕು. ಹರಿಯಾಣ ರಾಜ್ಯದ ಮಾದರಿಯಲ್ಲಿ ಮಾನವಸಂಪನ್ಮೂಲ ನಿಯಮ ಜಾರಿಗೊಳಿಸಬೇಕು, ಮಧ್ಯವರ್ತಿಗಳಿಲ್ಲದೇ ವೇತನ ಇಲಾಖೆ ನೇರವಾಗಿ ಪಾವತಿಮಾಡಬೇಕು, ಬೋನಸ್ ನೀಡಬೇಕು, ವರ್ಗಾವಣೆಗೆ ಅವಕಾಶ ನೀಡಬೇಕು ಹೀಗೆಒಟ್ಟು 14 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಪತ್ರ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಡಾ| ಮಂಜುನಾಥ್, ಪ್ರಮುಖರಾದ ಮಂಜುನಾಥ್ ಎ.ಎಲ್., ಲೀಲಾವತಿ, ಡಾ| ಅಂದನಗೌಡ ಪಾಟೀಲ್, ಅಂಬರೀಷ್, ಸಚಿನ್ ಹಾಗೂ ರವಿಕುಮಾರ್ ಹೊಳಲ್ಕೆರೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.