ಕಾಯಂ ನೌಕರಿ ಭಾಗ್ಯ ನೀಡಿ
Team Udayavani, Jul 3, 2018, 3:38 PM IST
ದಾವಣಗೆರೆ: ರಾಜ್ಯ ಸರ್ಕಾರಿ ನೌಕರರಂತೆ ಅರ್ಹ ಗುತ್ತಿಗೆ ಆಧಾರಿತ ನೌಕರರಿಗೆ 6ನೇ ವೇತನ ಆಯೋಗದ ವೇತನ ಶ್ರೇಣಿ ಮತ್ತು ಸೌಲಭ್ಯ, ವಿಮಾ ಜಾರಿಗೊಳಿಸಲು ಒತ್ತಾಯಿಸಿ ರಾಜ್ಯ ಸರಕಾರಿ ದಿನಗೂಲಿ ನೌಕರರ ಮಹಾಮಂಡಲದ ನೇತೃತ್ವದಲ್ಲಿ ದಿನಗೂಲಿ ನೌಕರರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದರು.
ವಿವಿಧ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಪಂಜಾಬ್ ಸರ್ಕಾರ ಮತ್ತು ಜಗಜಿತ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ 2016ರ ಅ. 26 ರಂದು ನೀಡಿರುವ ಮಹತ್ವದ ತೀರ್ಪಿನ ಅನ್ವಯ ಕಾಯಂ ನೌಕರರಂತೆ ಅರ್ಹ ದಿನಗೂಲಿ ನೌಕರರಿಗೆ ಪೂರ್ವಾನ್ವಯವಾಗುವಂತೆ ವೇತನ, ಸೌಲಭ್ಯ ನೀಡಬೇಕು.
ಅರ್ಹ ದಿನಗೂಲಿ ನೌಕರರಿಗೆ ಸಹ 6ನೇ ವೇತನ ಆಯೋಗದ ವೇತನ ಶ್ರೇಣಿ ಮತ್ತು ಸೌಲಭ್ಯ ನೀಡಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
ಗುತ್ತಿಗೆ ನೌಕರರು ಕನಿಷ್ಠ ವೇತನದಿಂದಲೂ ವಂಚಿತರಾಗಿದ್ದಾರೆ. ಗುತ್ತಿಗೆ ನೌಕರರಿಗೆ ಪೂರ್ವಾನ್ವಯವಾಗುವಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಗುತ್ತಿಗೆ ಆಧಾರಿತ ನೌಕರರನ್ನು ಕಾಯಂ ನೌಕರರರನ್ನಾಗಿಸಬೇಕು. ಹೊರ ಮತ್ತು ಒಳ ಗುತ್ತಿಗೆ ಪದ್ಧತಿಯನ್ನೇ ರದ್ದುಪಡಿಸುವ ಮೂಲಕ ಗುತ್ತಿಗೆ ನೌಕರಿ ಮುಕ್ತ ರಾಜ್ಯ ಮಾಡಬೇಕು. ಆ ಹಿನ್ನೆಲೆಯಲ್ಲಿ ಗುತ್ತಿಗೆ ನೌಕರರಿಗೆ ಕಾಯಂ ನೌಕರಿ ಭಾಗ್ಯ ನೀಡಬೇಕು ಎಂದು ಒತ್ತಾಯಿಸಿದರು.
ಈಗ ಚಾಲ್ತಿಯಲ್ಲಿರುವ ಗುತ್ತಿಗೆ ನೌಕರರ ನೇರ ನೇಮಕಾತಿ ಪ್ರಕ್ರಿಯೆ ಕೈ ಬಿಡುವುದು, ಗುತ್ತಿಗೆ ಅವಧಿ ಮುಗಿದಿದ್ದಲ್ಲಿ ಈಗಾಗಲೇ ಕೆಲಸ ಮಾಡುತ್ತಿದ್ದವರನ್ನೇ ಮುಂದುವರೆಸುವುದು, ಸರ್ಕಾರಿ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜಿನಲ್ಲಿ 10-15 ವರ್ಷದಿಂದ ದುಡಿಯುತ್ತಿರುವ ಡಿ ಗ್ರೂಪ್ ನೌಕರರು ಪೂರ್ಣಕಾಲಿಕ ಡಿ ಗ್ರೂಪ್ ನೌಕರರೆಂದು ಕಾಯಂಗೊಳಿಸುವುದು, ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮ, ಕೃಷ್ಣ ಜಲ ಭಾಗ್ಯ ನೀರಾವರಿ ನಿಗಮ ಮುಂತಾದ ನಿಗಮ ಮತ್ತು ನೀರಾವರಿ ಇಲಾಖೆ, ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಆಧಾರಿತ ನೌಕರರಿಗೆ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು. ಸರಕಾರಿ ದಿನಗೂಲಿ ನೌಕರರ ಮಹಾಮಂಡಲದ ಜಿಲ್ಲಾ ಅಧ್ಯಕ್ಷ ಕೆ.ವಿ.ಚಂದ್ರಹಾಸ್, ಜಿಲ್ಲಾ ಸಂಚಾಲಕ ಪಿ.ಜಿ. ಮರುಳಸಿದ್ದಪ್ಪ, ಎ.ಕೆ. ಅಂಜಿನಪ್ಪ ಇತರರು ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.