Davanagere: ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ


Team Udayavani, Oct 12, 2024, 6:44 PM IST

ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

ದಾವಣಗೆರೆ: ಮಹಿಷಾಸುರ ಮರ್ದನ ರೀತಿಯಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಮರ್ದನವಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (MP Renukacharya) ಭವಿಷ್ಯ ನುಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾರೂ ಆಪರೇಷನ್ ಕಮಲ ಮಾಡುವುದೇ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಜಗಳ ಮತ್ತು ಸ್ವಯಂಕೃತ ಅಪರಾಧದಿಂದಲೇ ಪತನವಾಗುತ್ತದೆ ಎಂದರು.

ಮುಡಾ ಹಗರಣದ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್‌ನವರೇ ಮುಖ್ಯಮಂತ್ರಿ ಕುರ್ಚಿ ಮೇಲೆ ಟವೆಲ್ ಹಾಕಿದ್ದಾರೆ. ಡಾ| ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಮಹತ್ವಾಕಾಂಕ್ಷಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದ್ದಾರೆ. ರಾಜ್ಯ ಸರ್ಕಾರ ತಾನೇ ತಾನಾಗಿ ಪತನವಾಗಲಿದೆ ಎಂದು ತಿಳಿಸಿದರು.

ಸಹೋದರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬುಟ್ಟಿಯಲ್ಲಿ ಹಾವು ಇದೆ ಎಂದು ಹೇಳುತ್ತಿರುವಂತೆ ಯಾವಾಗಲೂ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಯೋಜನೆಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಬಸವರಾಜ ರಾಯರೆಡ್ಡಿ, ಬಿ.ಆರ್. ಪಾಟೀಲ್ ಅವರಂತಹ ಹಿರಿಯ ಶಾಸಕರೇ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ಬೇಸರಗೊಂಡಿದ್ದಾರೆ. ಇನ್ನು ಕೆಲವು ಶಾಸಕರು, ಕಾಂಗ್ರೆಸ್ ಟಿಕೆಟ್‌ನಿಂದ ಎಲೆಕ್ಷನ್ ನಿಲ್ಲುವುದಿಲ್ಲ ಎಂಬುದಾಗಿ ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ಬೆಂಕಿ ಹಚ್ಚಲು ಪ್ರಯತ್ನ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿದಂತಹವರ ವಿರುದ್ಧ ಬಿಜೆಪಿ ಆಡಳಿತದಲ್ಲಿ ದಾಖಲಿಸಿದ್ದ ಮೊಕದ್ದಮೆಗಳನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆದಿದೆ. ರಾಜ್ಯದಲ್ಲಿ ದೇಶದ್ರೋಹ ಮಾಡಿದಂತಹ ಸರ್ಕಾರ ಆಡಳಿತ ಮಾಡುತ್ತಿದೆ. ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ರಾಜೀನಾಮೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಭಿಮಾನದ ರಾಜಕಾರಣ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯ ಜೊತೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಅವರು ತಾವೇ ತಾವಾಗಿ ರಾಜೀನಾಮೆ ನೀಡುತ್ತಾರೆ. ಅವರು ರಾಜೀನಾಮೆ ನೀಡಿದರೆ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ಟಾಪ್ ನ್ಯೂಸ್

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

1-ree

India vs Bangladesh; ಸಂಜು ಸ್ಯಾಮ್ಸನ್ ಅಬ್ಬರ: ಚೊಚ್ಚಲ T20 ಅಂತಾರಾಷ್ಟ್ರೀಯ ಶತಕ

10

Mangaluru: ನಿವೃತ್ತ ಕರ್ನಲ್‌ ರತ್ನಕುಮಾರ್‌ ಅಡಪ ನಿಧನ

1-sanju-bg

Bollywood actor; ಸಂಜಯ್ ದತ್ ಕರಾವಳಿ ಭೇಟಿ: ಕಟೀಲಿನಲ್ಲಿ ಪ್ರಾರ್ಥನೆ

Mysore-Press

Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

shettar

Hubli ಗಲಭೆ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವುದು ದೊಡ್ಡ ದುರಂತ: ಶೆಟ್ಟರ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

Mysore-Press

Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

shettar

Hubli ಗಲಭೆ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವುದು ದೊಡ್ಡ ದುರಂತ: ಶೆಟ್ಟರ್ ಕಿಡಿ

Hubli: State govt working to breed terrorists: Aravind Bellad

Hubli: ರಾಜ್ಯ ಸರ್ಕಾರವು ಭಯೋತ್ಪಾದಕರನ್ನು ಹುಟ್ಟು ಹಾಕುವ ಕೆಲಸ ಮಾಡುತ್ತಿದೆ: ಬೆಲ್ಲದ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

19

Mangaluru: ಲಾರಿ ಅಡಿಗೆ ಬಿದ್ದು ಸ್ಕೂಟರ್‌ ಸವಾರ ಸಾವು

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

17

Women’s T20 World Cup: ಶ್ರೀಲಂಕಾ ವಿರುದ್ಧ ಕಿವೀಸ್‌ಗೆ 8 ವಿಕೆಟ್‌ ಜಯಭೇರಿ

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

Asia TT: ಭಾರತ ಮಹಿಳಾ ಡಬಲ್ಸ್‌ ಜೋಡಿ ಸೆಮೀಸ್‌ಗೆ, ಪದಕ ಖಚಿತ

Asia TT: ಭಾರತ ಮಹಿಳಾ ಡಬಲ್ಸ್‌ ಜೋಡಿ ಸೆಮೀಸ್‌ಗೆ, ಪದಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.