![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 14, 2022, 11:46 PM IST
ದಾವಣಗೆರೆ: ಪಠ್ಯಕ್ರಮದಲ್ಲಿ ಬಸವಣ್ಣನವರಿಗೆ ಯಾವುದೇ ಅವಮಾನ ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗೂರು ರಾಮಚಂದ್ರಪ್ಪ ಸಮಿತಿ ಶಿಫಾರಸು ಮಾಡಿರುವುದೇ ಈಗಲೂ ಇದೆ. ಮೊದಲು ಬಸವಣ್ಣ ಜನಿವಾರ ಕಿತ್ತು ಹಾಕಿ ಹೋದರು ಎಂದಿತ್ತು. ಈಗ ಉಪನಯನದ ಅನಂತರ ಹೋದರು ಎಂದಾಗಿದೆ.
ಆದರೆ ಬಸವಣ್ಣನವರಿಗೆ ಯಾವುದೇ ರೀತಿಯ ಅವಮಾನ ಆಗಿಲ್ಲ. ನಾಲ್ಕು ವರ್ಷಗಳ ಕಾಲ ಇಲ್ಲದ ಗೊಂದಲ ಈಗೇಕೆ? ಈಗಾಗಲೇ ಶೇ. 75ರಷ್ಟು ಪಠ್ಯಪುಸ್ತಕ ವಿತರಣೆ ಆಗಿದೆ. ಬ್ರಿಟಿಷರು ದೇಶಕ್ಕೆ ಬರುವ ಮುನ್ನವೂ ದೇಶದಲ್ಲಿ ಜ್ಞಾನಾರ್ಜನೆ ನಡೆಯುತ್ತಿತ್ತು. ಈಗ ನಾವು ಇತಿಹಾಸವನ್ನು ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಜೆಎನ್ಯು, ಭಾರತವನ್ನು ತುಕ್ಡೇತುಕ್ಡೇ ಮಾಡುವ ಗ್ಯಾಂಗ್ ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಹಿಂದೆ ಕೆಲಸ ಮಾಡಿತ್ತು. ಈಗಲೂ ಹಿಂದೂ ಸಮಾಜ ಒಡೆಯುವ, ಭಾರತವನ್ನು ಇಬ್ಭಾಗ ಮಾಡುವ ಕೆಲಸ ಮಾಡುತ್ತಿದೆ. ಆ ಗ್ಯಾಂಗ್ ಏನೇ ಮಾಡಿದರೂ ಯಶಸ್ವಿಯಾಗಲ್ಲ. ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಹಿಂದೆ ಜೆಎನ್ಯು ಗ್ಯಾಂಗ್ ಇದೆ ಎಂದು ನಾವು ಹೇಳುತ್ತಲೇ ಬರುತ್ತಿದ್ದೆವು. ಈಗ ಅದು ಸಾಬೀತಾಗಿದೆ ಎನ್ನುವುದಕ್ಕೆ ಜೆಎನ್ಯು ಪ್ರೊಫೆಸರ್ ಒಬ್ಬರು ಪತ್ರ ಬರೆದಿರುವುದೇ ಸಾಕ್ಷಿ. ಕರ್ನಾಟಕದ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಪತ್ರ ಬರೆಯುವುದಕ್ಕೆ ಅವರು ಏನು ಓದಿದ್ದಾರೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.