ಚಲನಶೀಲತೆಯಿಂದ ಖನ್ನತೆ ದೂರ
Team Udayavani, Apr 8, 2017, 12:57 PM IST
ದಾವಣಗೆರೆ: ಮನುಷ್ಯ ಚಲನಶೀಲ ಬದುಕು ಕಟ್ಟಿಕೊಂಡರೆ ಮಾನಸಿಕ ಸಮಸ್ಯೆ ಕಾಡುವುದಿಲ್ಲ, ಜಡವಾದಾಗ ಖನ್ನತೆ ಮತ್ತಿತರೆ ಮಾನಸಿಕ ಸಮಸ್ಯೆಗಳಿಗೆ ಒಳಗಾಗುತ್ತಾನೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ವಿಶ್ವ ಆರೋಗ್ಯ ದಿನಾಚರಣೆ ನಿಮಿತ್ತ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಆವರಣ ಬಳಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚಲನಶೀಲ ಬದುಕು ಮಾನಸಿಕ ರೋಗಗಳಿಂದ ಮುಕ್ತವಾಗಲು ಇರುವ ಉತ್ತಮ ಮಾರ್ಗ ಎಂದರು.
ಮಾನಸಿಕ ಆರೋಗ್ಯ ವಿಭಾಗದ ಡಾ| ದಯಾನಂದ್ ಸಾಗರ್ ಮಾತನಾಡಿ, ಮನಷ್ಯರು ಸದಾ ಒಂದಿಲ್ಲೊಂದು ಒತ್ತಡಕ್ಕೆ ಸಿಲುಕುತ್ತಾರೆ. ದಿನವಿಡೀ ಬೇಜಾರು, ಸುಸ್ತು, ಯಾವುದೇ ಕೆಲಸದಲ್ಲಿ ನಿರಾಸಕ್ತಿ, ಆತ್ಮಹತ್ಯೆ ಪ್ರವೃತ್ತಿ, ಜೀವನವೇ ಬೇಡವೆಂಬ ಭಾವ ಎರಡು ವಾರಗಳಿಗಿಂತ ಹೆಚ್ಚಾಗಿ ಇದ್ದರೆ ಖನ್ನತೆಗೆ ಒಳಗಾಗಿದ್ದಾರೆಂದು ಹೇಳಬಹುದು ಎಂದು ತಿಳಿಸಿದರು.
ಸಾಮಾನ್ಯವಾಗಿ ನಾವು ಒತ್ತಡಕ್ಕೊಳಗಾದಾಗ ಬೇರೆಯವರಲ್ಲಿ ಮಾತಾಡಿ ಹಂಚಿಕೊಂಡರೆ ಒತ್ತಡ ಕಡಿಮೆಯಾಗುತ್ತದೆ. ಅದೇ ರೀತಿ ಖನ್ನತೆ ಬಗ್ಗೆ ಸಂಬಂಧಿಧಿಸಿದ ವೈದ್ಯರ ಸಲಹೆ ಪಡೆಯುವುದು ಸೂಕ್ತ ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಣಾಧಿಕಾರಿ ಡಾ| ತ್ರಿಪುಲಾಂಬ, ಚಿಗಟೇರಿ ಜಿಲ್ಲಾಸ್ಪತ್ರೆಯ ಅಧಿಧೀಕ್ಷಕಿ ಡಾ| ನೀಲಾಂಬಿಕಾ, ಡಿವೈಎಸ್ಪಿ ಅಶೋಕ್ ಕುಮಾರ್, ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ| ಜಿ.ಡಿ. ರಾಘವನ್, ಆರ್ಸಿಎಚ್ಒ ಡಾ| ಶಿವಕುಮಾರ್, ಡಾ| ಸರೋಜಾಬಾಯಿ, ಜಿಲ್ಲಾ ಸರ್ವೇಕ್ಷಣಾಧಿಧಿಕಾರಿ ಡಾ| ಗಂಗಾಧರ್ ಇತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.