Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Team Udayavani, Apr 27, 2024, 5:04 PM IST
ದಾವಣಗೆರೆ: ಕಳೆದ ವಿಧಾನಸಭೆಯಲ್ಲಿ ಬಿಜೆಪಿಯನ್ನು ಕನ್ನಡಿಗರು ಸೋಲಿಸಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರ ನೀಡದೆ ಕರ್ನಾಟಕದ ಮೇಲೆ ಸೇಡು ತೆಗೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರಿಬ್ಬರಿಗೂ ಕರ್ನಾಟಕಕ್ಕೆ ಆಗಮಿಸಿ ಜನತೆಯ ಮತ ಕೇಳುವ ನೈತಿಕತೆ ಇಲ್ಲ. ಇವರು ಕನ್ನಡಿಗರಿಗೆ ವಿಶೇಷವಾಗಿ ರಾಜ್ಯದ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದರು.
ಪೂರ್ಣ ಪ್ರಮಾಣದ ಬರ ಪರಿಹಾರ ನೀಡದೇ ರಾಜ್ಯಕ್ಕೆ ಬಂದರೆ ರಾಜ್ಯದ ಜನ ಗೋ ಬ್ಯಾಕ್ ಹೋರಾಟ ಮಾಡಬೇಕು. ಕಾಂಗ್ರೆಸ್ ಕೂಡ ಈ ಹೋರಾಟ ಮಾಡಲಿದೆ. ರಾಜ್ಯದಲ್ಲಿ ಭೀಕರ ಬರ ಇದೆ. ಕುಡಿಯವ ನೀರು, ಜಾನುವಾರುಗಳಿಗೆ ಮೇವು ಬೇಕಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಪರಿಹಾರ ಕೇಳಿದರೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ ಎಂದರು.
ಕನ್ನಡಿಗರು ಅವರಿಗೆ ಈ ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ. ಕಳೆದ ಲೋಕಸಭೆ ಚುನಾವಣೆಯ ಸಂಖ್ಯೆ ಉಲ್ಟಾ ಆಗಲಿದ್ದು 27 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಸುರ್ಜೇವಾಲಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.