ರೈಲ್ವೆ  ನಿಲ್ದಾಣ ನೂತನ ಕಟ್ಟಡ ಉದ್ಘಾಟನೆ ಶೀಘ್ರ

ಮೊದಲ ಹಂತದ ಕಾಮಗಾರಿ ಮಾರ್ಚ್‌ 27ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ: ಸಂಸದ ಸಿದ್ದೇಶ್ವರ

Team Udayavani, Feb 20, 2021, 3:13 PM IST

MP GM Siddeswar

ದಾವಣಗೆರೆ: ರೈಲ್ವೆ ನಿಲ್ದಾಣದ ನೂತನ ಕಟ್ಟಡ ಮತ್ತುಡಿಸಿಎಂ ರೈಲ್ವೆ ಗೇಟ್‌ ಉದ್ಘಾಟನಾ  ಕಾರ್ಯಕ್ರಮವನ್ನು ಮಾರ್ಚ್‌ ಅಂತ್ಯ ಇಲ್ಲವೇ ಏಪ್ರಿಲ್‌ ಮೊದಲ ವಾರದಲ್ಲಿ ನೆರವೇರಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಶುಕ್ರವಾರ ನೂತನ ರೈಲ್ವೆ ನಿಲ್ದಾಣ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೊದಲ ಹಂತದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ನೂತನ ಕಟ್ಟಡದ ಕಾಮಗಾರಿ ಶೇ. 80ಕ್ಕಿಂತಲೂ ಹೆಚ್ಚು ಮುಗಿದಿದೆ. ಮಾ. 27ಕ್ಕೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳಲಿದೆ. ಹಾಗಾಗಿ ಮಾ. 28, ಏಪ್ರಿಲ್‌ 3 ಇಲ್ಲವೇ 4 ರಂದು ಉದ್ಘಾಟನೆ ಮಾಡಲಾಗುವುದು ಎಂದರು.

ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಎಸ್ಕಲೇಟರ್‌ ಅಳವಡಿಸಲಾಗುತ್ತಿದೆ. ಮೈಸೂರು ವಿಭಾಗದಲ್ಲಿ ಎಸ್ಕಲೇಟರ್‌ ಹೊಂದಿರುವ ನಾಲ್ಕನೇ ರೈಲ್ವೆ ನಿಲ್ದಾಣ ದಾವಣಗೆರೆಯಾಗಿದೆ. ಹಿಂದಿನ ಕಟ್ಟಡಕ್ಕೆ ಹೋಲಿಕೆ ಮಾಡಿದರೆ ಈಗಿನ ಕಟ್ಟಡ ಸುಸಜ್ಜಿತ, ವಿಶಾಲ ಮತ್ತು ಸುಂದರವಾಗಿದೆ ಎಂದು ತಿಳಿಸಿದರು.

ಎರಡನೇ ಹಂತದಲ್ಲಿ ಉಪವಿಭಾಗಾಧಿಕಾರಿ ಕಚೇರಿಯನ್ನು ಸ್ಥಳಾಂತರಿಸಿ ಆ ಜಾಗವನ್ನು ರೈಲ್ವೆ ಇಲಾಖೆ ಸುಪರ್ದಿಗೆ ನೀಡಲಾಗುವುದು. ಎರಡನೇ ಮಹಡಿ ನಿರ್ಮಾಣ ಮಾಡಿ ಪ್ರಯಾಣಿಕರ ತಂಗುದಾಣ ಒಳಗೊಂಡಂತೆ ಆಧುನಿಕ ಸೌಲಭ್ಯ ಒದಗಿಸುಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಉಪವಿಭಾಗಾಧಿಕಾರಿ ಕಚೇರಿ ನಿರ್ಮಾಣಕ್ಕೆ ಮುಖ್ಯಮಂತ್ರಿಯವರು 5 ಕೋಟಿ ರೂ. ಅನುದಾನ ನೀಡಿದ್ದಾರೆ. ಎರಡನೇ ರೈಲ್ವೆ ಗೇಟ್‌ ದಾರಿಯಲ್ಲಿ ಕೆಲವು ಅಂಗಡಿ ತೆರವು ಮಾಡಿಕೊಡಬೇಕು ಎಂದು ಇಲಾಖೆಯವರು ಕೇಳಿದ್ದಾರೆ. ಆವುಗಳನ್ನು ತೆರವು ಮಾಡಿಕೊಡಲಾಗುವುದು ಎಂದರು.

ಅಶೋಕ ಚಿತ್ರಮಂದಿರ ರೈಲ್ವೆ ಗೇಟ್‌ ಬಳಿ ಕೆಳ ಸೇತುವೆ ನಿರ್ಮಾಣ ಕಾರ್ಯಕ್ಕೆ ಸಿದ್ಧತೆ ನಡೆದಿದೆ. ಅಲ್ಲಿರುವ ಜಾಗದ ಮಾಲೀಕರು ಬೇರೆಡೆ ಜಾಗ ಇಲ್ಲವೇ ಸೂಕ್ತ ಪರಿಹಾರ ಕೇಳಿದ್ದಾರೆ. ಆದಷ್ಟು ಬೇಗ ಕಾಮಗಾರಿಗೆ ಚಾಲನೆ ನೀಡಲಾಗುವುದು. ಕರೂರು ಕ್ರಾಸ್‌ ಬಳಿ ರೈಲ್ವೆ ಗೇಟ್‌ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು. ಜನರ ಬೇಡಿಕೆಗೆ ತಕ್ಕಂತೆ ರೈಲ್ವೆ ಇಲಾಖೆಯಿಂದ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು.

ಮೇಯರ್‌ ಬಿ.ಜಿ. ಅಜಯ್‌ಕುಮಾರ್‌, ಸದಸ್ಯ ಆರ್‌.ಎಲ್‌. ಶಿವಪ್ರಕಾಶ, ದೂಡಾ ಆಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಬಿಜೆಪಿ ಜಿಲ್ಲಾ ಅಧ್ಯಕ್ಷ ಎಸ್‌.ಎಂ. ವೀರೇಶ್‌ ಹನಗವಾಡಿ, ಮಾಜಿ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಡಿಆರ್‌ಎಂ ರಾಹುಲ್‌ ಆಗರವಾಲ್‌ ಇತರರು ಇದ್ದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.