ಸಮಸ್ಯೆ ಅರಿಯಲು ಬೇಕಿದೆ ಬಹು ಶಿಸ್ತೀಯ ಅಧ್ಯಯನ


Team Udayavani, Feb 26, 2017, 12:48 PM IST

dvg2.jpg

ದಾವಣಗೆರೆ: ಬಹು ಶಿಸ್ತೀಯ ಅಧ್ಯಯನ ಮಾಡದ ಹೊರತು ನಮ್ಮ ದೇಶದ ಸಮಸ್ಯೆಗಳು ನಮಗೆ ಅರ್ಥವಾಗುವುದಿಲ್ಲ ಎಂದು ಆಳ್ನಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಡಾ| ವಿನಯಾ ಒಕ್ಕುಂದ ಅಭಿಪ್ರಾಯಪಟ್ಟರು. 

ಶನಿವಾರ ಎ.ಆರ್‌.ಎಂ. ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್‌, ಧಾರವಾಡದ ಸಮಷ್ಠಿ ಫೌಂಡೇಷನ್‌ನಿಂದ ಹಮ್ಮಿಕೊಂಡಿದ್ದ ಸಮಕಾಲೀನ ಸಮಸ್ಯೆಗಳು ಮತ್ತು ಪರಿಹಾರಗಳು: ಬಹುಶಿಸ್ತೀಯ ಅಧ್ಯಯನಗಳ ಅನುಸಂಧಾನ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ನಮ್ಮ ಸಮಸ್ಯೆಗಳು ಈಗ ದೂರವಿಲ್ಲ. ನಮ್ಮ ಉಸಿರಿನಷ್ಟೇ ಹತ್ತಿರ ಇವೆ. ಅವು ಮೇಲ್ನೋಟಕ್ಕೆ ಸಮಸ್ಯೆಗಳಂತೆ ಕಾಣುವುದಿಲ್ಲ. ಸಮಸ್ಯೆಗಳಾವು ಎಂಬುದ ತಿಳಿಯಲು ಬಹುಶಿಸ್ತೀಯ ಅಧ್ಯಯನ ಅವಶ್ಯಕ ಎಂದು ಪ್ರತಿಪಾದಿಸಿದರು. ಸದ್ಯದ ಸ್ಥಿತಿಯಲ್ಲಿ ನಮ್ಮ ದೇಶದ ನಾಲ್ಕು ಅಂಗಗಳು ಕಾಲು ಮುರಿದುಕೊಂಡು ಬಿದ್ದಿವೆ.

ಯಾವ ಅಂಗ ಸಹ ಸಮುದಾಯದ ಪರ ಕೆಲಸ ಮಾಡುವುದಿಲ್ಲ. ಶಾಸಕಾಂಗ ಎಂತಹ ಕಾನೂನು ಮಾಡಬಹುದು ಎಂಬುದನ್ನು ನಾವೀಗ ನೋಡುತ್ತಿದ್ದೇವೆ. ಕಾರ್ಯಾಂಗ ಸಂಪೂರ್ಣ ನೆಲಕಚ್ಚಿದೆ. ನ್ಯಾಯಾಂಗ ಸರ್ಕಾರದ ಆಣತಿಯಂತೆ ನಡೆದುಕೊಳ್ಳುತ್ತಿದೆ. ಇದಕ್ಕೆ ತಮಿಳುನಾಡಿನ ಶಶಿಕಲಾ ಪ್ರಕರಣ ಉತ್ತಮ ಉದಾರಹಣೆ.

ಇನ್ನು ಪತ್ರಿಕಾ ರಂಗ ಬಂಡವಾಳಶಾಹಿಗಳ ಕೈಯಲ್ಲಿದೆ ಎಂದು ಅವರು ಹೇಳಿದರು.  ಈ ಸೂಕ್ಷ್ಮ ವಿಷಯಗಳನ್ನು ಅರ್ಥಮಾಡಿಕೊಂಡು ನಾವು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ನಮ್ಮತನ ಪುನರ್‌ ಪ್ರತಿಷ್ಠಾಪಿಸಲು ಹೋರಾಡಬೇಕಿದೆ. ಹಾಗೆ ವಿಷಯಗಳ ಅರ್ಥ ಮಾಡಿಕೊಂಡು ಹೋರಾಟ ಮಾಡಬೇಕಾದರೆ ಬಹುಶಿಸ್ತೀಯ ಅಧ್ಯಯನ ಅನಿವಾರ್ಯ.

ಬಹುಶಿಸ್ತೀಯ ಅಧ್ಯಯನದಲ್ಲಿ ಆಳವಿರಬೇಕು. ನಮ್ಮ ಇಂದಿನ ಪಠ್ಯಕ್ರಮ ಅದನ್ನು ಹೇಳಲಾರವು. ಪಠ್ಯದಿಂದಾಚೆ ಇರುವ ವಿಷಯಗಳನ್ನು ಶಿಕ್ಷಕ ವೃಂದ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಬೇಕು ಎಂದು ಅವರು ತಿಳಿಸಿದರು. ಸಮಾಜದಲ್ಲಿ ಆಗುತ್ತಿರುವ ಪ್ರತಿ ಬದಲಾವಣೆಯನ್ನು ಹತ್ತಿರದಿಂದ ನೋಡಬೇಕಾದ ಸ್ಥಿತಿ ಪ್ರಸ್ತುತ ಇದೆ. ಆದರೆ, ನಮ್ಮ ಶಿಕ್ಷಣ ಪದ್ಧತಿ ಇಂತಹ ಅವಕಾಶ ಮಾಡಿಕೊಡುವುದಿಲ್ಲ. ಬದಲಿಗೆ ಪಟ್ಟಭದ್ರರ ಚಿಂತನೆಗಳನ್ನು ಹೇಳಿಕೊಡುತ್ತಿದೆ.

ಸಾಮಾಜಿಕ  ಬದಲಾವಣೆ, ವಿವಿಧ ಆಯಾಮದ ವಿಚಾರಧಾರೆ ನಮ್ಮ ಅಧ್ಯಯನದ ಭಾಗವಾಗದ ಹೊರತು ಶಿಕ್ಷಣದ ಸುಧಾರಣೆ ಅಸಾಧ್ಯ ಎಂದು ಅವರು ತಿಳಿಸಿದರು. ದಾವಿವಿ ಪ್ರಾಧ್ಯಾಪಕ ಡಾ| ಜಿ.ಟಿ. ಗೋವಿಂದಪ್ಪ, ದೇವರಾಜ ಅರಸು ವಿದ್ಯಾಸಂಸ್ಥೆಯ ಸಂಸ್ಥಾಪಕ ಎನ್‌. ನಿಂಗಣ್ಣ, ವಿಚಾರ ಸಂಕಿರಣ ಸಮಿತಿಯ ಸಂಯೋಜಕ ಅಧ್ಯಕ್ಷ ಡಾ| ಪ್ರಕಾಶ್‌ ಹಲಗೇರಿ ವೇದಿಕೆಯಲ್ಲಿದ್ದರು.  

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.