![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 14, 2021, 6:17 PM IST
ದಾವಣಗೆರೆ: ಕೋವಿಡ್ ಹಿನ್ನೆಲೆಯಲ್ಲಿ ಕೈಗಾರಿಕೆಗಳು ಸಾಕಷ್ಟು ಹಿಂಜರಿತ ಕಂಡಿವೆ. ಇದರ ಬೆನ್ನಲ್ಲೇ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು ನೂತನ ಕೈಗಾರಿಕಾ ನೀತಿ ಜಾರಿಗೊಂಡಿದ್ದು ಇದು ಮಾದರಿ ನೀತಿಯಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಬಿ. ಅರಸಪ್ಪ ಹೇಳಿದರು.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ದಾವಣಗೆರೆ ಇವುಗಳ ಸಹಯೋಗದಲ್ಲಿ ಶನಿವಾರ ನಗರದಲ್ಲಿ ಏರ್ಪಡಿಸಲಾಗಿದ್ದ ನೂತನ ಕೈಗಾರಿಕಾ ನೀತಿ ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೊಸ ಕೈಗಾರಿಕಾ ನೀತಿ ಕ್ರಮಗಳಿಂದಾಗಿ ರಾಜ್ಯವು ಉನ್ನತ ಮಟ್ಟದ ಕೈಗಾರಿಕಾ ಕಾರ್ಯಕ್ಷಮತೆ ಹೊಂದಲು ಸಹಕಾರಿಯಾಗಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕೈಗಾರಿಕೆಗಳು ಸಂಕಷ್ಟದಲ್ಲಿದ್ದು, ಇದರಿಂದ ಸುಧಾರಿಸಿಕೊಳ್ಳಲು ವರ್ಷದವರೆಗೆ ವಿದ್ಯುತ್ ದರ ಹೆಚ್ಚಿಸದಂತೆ ಮನವಿ ಮಾಡಲಾಗಿತ್ತು. ಆದರೂ ದರ ಹೆಚ್ಚಿಸಿರುವುದು ಗಾಯದ ಮೇಲೆ ಬರ ಹಾಕಿದಂತಾಗಿದೆ. ಇದನ್ನು ತಗ್ಗಿಸುವಂತೆ ಕೋರಿದ್ದೇವೆ ಎಂದರು.
ಇದನ್ನೂ ಓದಿ:ಬೀದರ್: ಹಿರಿಯ ಪತ್ರಕರ್ತ ವಿಶ್ವನಾಥ ಪಾಟೀಲ್ ನಿಧನ
ಕೈಗಾರಿಕೆಗಳ ಕಚ್ಚಾವಸ್ತುಗಳ ಬೆಲೆಯೂ ಹೆಚ್ಚಿದೆ. ಇದನ್ನು ನಿಯಂತ್ರಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಮೊದಲು ಕೆಎಸ್ಎಸ್ ಐಡಿಸಿ ವತಿಯಿಂದ ಸ್ಟೀಲ್ ಹಂಚಿಕೆ ಮಾಡಲಾಗುತ್ತಿತ್ತು. ಈಗ ಅದೇ ರೀತಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಡಿಪೋ ಸ್ಥಾಪಿಸಿ ಸ್ಟೀಲ್ ಹಂಚಿಕೆ ಮಾಡುವಂತೆ ಮನವಿ ಮಾಡಲಾಗಿದ್ದು, ಕೆಎಸ್ಎಸ್ ಐಡಿಸಿ ಎಂಡಿಯವರು ಒಪ್ಪಿದ್ದಾರೆ ಎಂದರು. ಕೈಗಾರಿಕೆ ಮತ್ತು ವಾಣಿಜ್ಯ
ಇಲಾಖೆಯ ಅಪರ ನಿರ್ದೇಶಕಎಚ್.ಎಂ ಶ್ರೀನಿವಾಸ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜಯಪ್ರಕಾಶ್ ನಾರಾಯಣ, ಗ್ರಾಮೀಣ ವಿಭಾಗದ ಜಂಟಿ ಕಾರ್ಯದರ್ಶಿ ಸಿ.ಸಿ. ಹೊಂಡದಕಟ್ಟಿ, ಕಾಸಿಯಾ ಸದಸ್ಯರಾದ ಶೇಷಾಚಲ, ಮಂಜುನಾಥ ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.