![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 30, 2022, 1:46 PM IST
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಎಷ್ಟು ಬಾರಿ ಬೇಕಾದರೂ ರಾಜ್ಯಕ್ಕೆ ಬಂದರೂ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಾದೂ ನಡೆಯಲ್ಲ. ಮೋದಿ ಎಷ್ಟು ಬಾರಿ ಬಂದರೂ ಬಿಜೆಪಿ ಗೆಲ್ಲಲ್ಲ ಎಂದರು.
ಅಮಿತ್ ಶಾ ಬಂದಾಕ್ಷಣ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತದೆಯೆಂದು ಹೇಳಲು ಆಗುತ್ತದೆಯೇ. ಅಮಿತ್ ಶಾ ಜಾದೂ ಮಾಡುತ್ತಾರಾ? ಅವರ ತಂತ್ರ ಕೆಲಸ ಮಾಡಲ್ಲ ಎಂದು ತಿಳಿಸಿದರು.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಅಧಿಕಾರದಲ್ಲಿ ಇಲ್ಲ. ಕರ್ನಾಟಕದಲ್ಲಿ ಅಮಿತ್ ಶಾ ಹಾಗೂ ಮೋದಿ ಜಾದೂ ನಡೆಯಲು ಸಾಧ್ಯವಿಲ್ಲ. ಜನರಿಗೆ ಬಿಜೆಪಿಯವರ ಕಳ್ಳಾಟ ಗೊತ್ತಾಗಿದೆ ಎಂದರು.
ಕಳಸಾ ಬಂಡೂರಿ ನಾಲಾ ವಿವಾದ ಸಂಬಂಧ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಚುನಾವಣಾ ಗಿಮಿಕ್. ಇವೆಲ್ಲಾ ನಡೆಯಲ್ಲ. ಗೆಜೆಟ್ ನೋಟಿಫಿಕೇಶನ್ ಆಗಿ ಎರಡು ವರ್ಷವಾಯ್ತು. ಎರಡು ವರ್ಷ ಏನು ಮಾಡುತ್ತಿದ್ದರು. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಯಾಕೆ ಮಾಡಲಿಲ್ಲ. ಈಗ ಚುನಾವಣೆ ಬರುತ್ತಿದೆ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೂರಿದರು.
ಇದನ್ನೂ ಓದಿ:ಆಘಾತದ ನಡುವೆಯೂ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ
ಕಾಂಗ್ರೆಸ್ ನವರು ಹುಬ್ಬಳ್ಳಿಯಲ್ಲಿ ಸಮಾವೇಶ ಮಾಡ್ತೇವೆಂದು ನಿರ್ಧಾರ ತೆಗೆದು ಕೊಂಡಿದ್ದಾರೆ. ಸಮಾವೇಶ ಮಾಡಿ ಜನರಿಗೆ ಸತ್ಯಾಂಶ ತಿಳಿಸುತ್ತೇವೆ ಎಂದರು.
ಪಂಚಮಸಾಲಿ, ಲಿಂಗಾಯತ, ಒಕ್ಕಲಿಗರಿಗೆ ಸರ್ಕಾರ ಮೀಸಲಾತಿ ಘೋಷಿಸಿದೆ. ಸಂವಿಧಾನ ಬದ್ಧವಾಗಿ ಆಗಬೇಕು. ಒಕ್ಕಲಿಗರೇನೂ ಮೀಸಲಾತಿ ಕೇಳಿದ್ದರಾ? ಒಕ್ಕಲಿಗರಿಗೆ ಮೀಸಲಾತಿ ಕೊಟ್ಟಿದ್ದಕ್ಕೆ ನನ್ನ ವಿರೋಧ ಇಲ್ಲ. ಜಾರಿಯಾಗಬೇಕಷ್ಟೇ. ಇದೆಲ್ಲಾ ಚುನಾವಣಾ ಗಿಮಿಕ್ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.