ನುಡಿದಂತೆ ನಡೆದ ವಚನಕಾರರು
Team Udayavani, Mar 11, 2017, 1:11 PM IST
ದಾವಣಗೆರೆ: 12ನೇ ಶತಮಾನದ ವಚನಕಾರರು ನುಡಿದಂತೆ ನಡೆದು, ನಡೆ-ನುಡಿ ಒಂದಾಗಿಸಿಕೊಂಡು ಬದುಕಿದವರು ಎಂದು ಹಿರಿಯ ಸಾಹಿತಿ ಕೆ.ಬಿ. ಸಿದ್ದಯ್ಯ ಬಣ್ಣಿಸಿದರು. ಜಿಲ್ಲಾಡಳಿತದಿಂದ ಶುಕ್ರವಾರ ಕುವೆಂಪು ಕನ್ನಡಭವನದಲ್ಲಿ ಆಯೋಜಿಸಲಾಗಿದ್ದ ದಲಿತ ವಚನಕಾರರ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
12ನೇ ಶತಮಾನದಲ್ಲಿ ಶುದ್ಧ ಕಾಯಕ, ಸತ್ಯದಿಂದ ಬದುಕನ್ನು ನಡೆಸಿದ ಮಹಾಪುರುಷರಾದ ಮಾದಾರ ಚನ್ನಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಮಾದಾರ ಧೂಳಯ್ಯ ಮತ್ತು ಉರಿಲಿಂಗ ಪೆದ್ದಿ ಇವರನ್ನು ಕೇವಲ ದಲಿತ ವಚನಕಾರರು ಎಂದರೆ ಶುಶ್ಕವಾಗುತ್ತದೆ ಎಂದರು. ಅಕ್ಕಮಹಾದೇವಿ, ಸೂಳೆ ಸಂಕವ್ವೆ, ಕಲ್ಯಾಣಮ್ಮನಂತಹ ಅನೇಕ ಮಹಿಳಾ ವಚನಗಾರ್ತಿಯರು ನಾಡು ಕಟ್ಟಿದ ಮಹಾನ್ ವ್ಯಕ್ತಿಗಳು.
ವಿದ್ಯಾರ್ಥಿಗಳು ವಚನಗಳು ಮತ್ತು ಭಾರತ ಸಂವಿಧಾನ ಅಧ್ಯಯನ ಮಾಡಬೇಕೆಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ವಚನಕಾರರು ಎಲ್ಲರಿಗಿಂತ ಮೇಲುಗೈ ಸಾಧಿಸಿರುವುದಕ್ಕೆ ಕಾರಣ ಅವರು ತಮ್ಮ ಅನುಭವದ ನೆಲೆಯಲ್ಲಿ ತತ್ವಗಳನ್ನು ಕಟ್ಟಿ ಕೊಟ್ಟಿರುವುದು.
ಬಸವಣ್ಣನವರು ಅಂತರಂಗದ ಶುದ್ಧಿಯ ಬಗ್ಗೆ ಹೇಳಿದರೆ, ಸರ್ವಜ್ಞ ತಮ್ಮ ತ್ರಿಪದಿಗಳಲ್ಲಿ ಕಚ್ಚೆ, ಕೈ, ಬಾಯಿ ಸರಿಯಿದ್ದರೆ ಅದೇ ದೈವತ್ವ. ಅವನೇ ನಿಶ್ಚಿಂತ ಅಂತ ಹೇಳಿದ್ದಾರೆ. ಎಂತಹ ದೊಡ್ಡ ದೊಡ್ಡ ಗ್ರಂಥಗಳು ಸಾರುವ ತತ್ವಗಳನ್ನು ವಚನಗಳು ಸರಳವಾಗಿ ಎಲ್ಲರಿಗೂ ತಲುಪಿಸುತ್ತವೆ ಎಂದರು.
ನಾವೆಲ್ಲಾ ದಿನೇ ದಿನೇ ಬೆಳೆಯುತ್ತಿರುವಂತೆ ನಮ್ಮ ಆಲೋಚನೆಗಳನ್ನು ಉತ್ತಮ ರೀತಿಯಲ್ಲಿ ಬೆಳೆಸಿದರೆ ಅವು ಹೆಮ್ಮರವಾಗುತ್ತದೆ. ನುಡಿಗಿಂತ ಉತ್ತಮವಾಗಿ ನಡೆಯಬೇಕು. ನುಡಿದಂತೆ ನಡೆಯುವ ಕಾಲವೊಂದಿತ್ತು ಎಂಬುದಕ್ಕೆ ವಚನಕಾರರೇ ಸಾಕ್ಷಿಯಾಗಿದ್ದು, ನಾವೆಲ್ಲರೂ ಅವರ ದಾರಿಯಲ್ಲಿ ಸಾಗುವ ಪ್ರಯತ್ನ ಮಾಡಬೇಕು, ಆಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.
ಜಿಪಂ ಅಧ್ಯಕ್ಷೆ ಉಮಾ ರಮೇಶ್, ಜಿಪಂ ಸದಸ್ಯ ಕೆ.ಎಸ್. ಬಸವರಾಜಪ್ಪ, ಪಾಲಿಕೆ ಆಯುಕ್ತ ಬಿ.ಎಚ್. ನಾರಾಯಣಪ್ಪ, ತಹಶೀಲ್ದಾರ್ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕುಮಾರ್ ಹನುಮಂತಪ್ಪ ವೇದಿಕೆಯಲ್ಲಿದ್ದರು.
ದಾವಣಗೆರೆಯ ದೀಪಕಮಲ ಸಂಗೀತ ಶಾಲಾ ಕಲಾವಿದರು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಮ್ಮ ಹೆಮ್ಮೆಯ ವಚನಕಾರರು ಎಂಬ ಮಡಿಕೆ ಪತ್ರವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿ, ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.