Davanagere; ಫಲಾನುಭವಿಗೆ ನೀಡಬೇಕಿದ್ದ ಟಿಸಿ ಮಾರಿದ ಅಧಿಕಾರಿಗಳು!
Team Udayavani, Aug 14, 2024, 4:49 AM IST
ದಾವಣಗೆರೆ: ಆದಿಜಾಂಬವ ಅಭಿವೃದ್ಧಿ ನಿಗಮದಡಿ ಕೊರೆಸಲಾಗಿದ್ದ ಕೊಳವೆ ಬಾವಿಗೆ ಒಬ್ಬ ಫಲಾನುಭವಿಗೆ ಹಳೆಯ ವಿದ್ಯುತ್ ಪರಿವರ್ತಕ (ಟಿಸಿ) ನೀಡಿದ್ದರೆ, ಇನ್ನೊಬ್ಬ ಫಲಾನುಭವಿಗೆ ನೀಡಬೇಕಿದ್ದ ವಿದ್ಯುತ್ ಪರಿವರ್ತಕವನ್ನು ಅಧಿಕಾರಿಗಳೇ ಮಾರಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳವಾರ ನಡೆದ ದಾವಣಗೆರೆ ತಾ.ಪಂ. ತ್ತೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಈ ವಿಷಯ ಬಹಿರಂಗಪಡಿಸಿದ್ದಾರೆ.
ಆದಿಜಾಂಬವ ಅಭಿವೃದ್ಧಿ ನಿಗಮದ ಮೂಲಕ ಕೊಳವೆಬಾವಿ ಕೊರೆಸಲಾಗಿದ್ದ ಕಂದಗಲ್ಲು ಗ್ರಾಮದ ಗಂಗಾಧರಪ್ಪ ಅವರಿಗೆ ಪಂಪ್ಸೆಟ್, ಪೈಪ್ ಕೊಟ್ಟಿದ್ದಾರೆ. ಆದರೆ ಹೊಸ ಟಿಸಿ ಬದಲು ಹಳೆಯದನ್ನು ಕೊಟ್ಟಿದ್ದಾರೆ. ಹುಲಿಕಟ್ಟೆ ಗ್ರಾಮದ ಚನ್ನಬಸಪ್ಪ ಅವರಿಗೆ ಕೊಳವೆಬಾವಿ ಕೊರೆಸಿದ 3 ವರ್ಷದ ಬಳಿಕ ಟಿಸಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ತಾ.ಪಂ. ಆಡಳಿತಾಧಿಕಾರಿ ಕೃಷ್ಣ ನಾಯ್ಕ ಮತ್ತು ಇಒ ರಾಮ ಭೋವಿ, ಕೂಡಲೇ ಈ ಬಗ್ಗೆ ತನಿಖೆ ಮಾಡಿ ವಾರದೊಳಗೆ ವಸ್ತುನಿಷ್ಠ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸೌಲಭ್ಯ ದುರ್ಬಳಕೆ ಮಾಡಿಕೊಂಡ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.