ನಮ್ಮ ರಕ್ಷಣೆಗಾಗಿಯೇ ಕಾನೂನು ಪಾಲನೆ
Team Udayavani, Mar 10, 2017, 12:56 PM IST
ದಾವಣಗೆರೆ: ನಮ್ಮ ರಕ್ಷಣೆಗೆಂದೇ ಇರುವ ಕಾನೂನುಗಳನ್ನು ಪರಿಪಾಲಿಸಬೇಕಾಗಿರುವುದು ನಮ್ಮ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುವರ್ಣ ಕೆ ಮಿರ್ಜಿ ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ ಮತ್ತು ಜಿಲ್ಲಾ ವಕೀಲರ ಸಂಘದಿಂದ ಗುರುವಾರ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆಟೋರಿಕ್ಷಾ ಮತ್ತು ಖಾಸಗಿ ಬಸ್ ಚಾಲಕರಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಭ್ರೂಣಾವಸ್ಥೆಯಿಂದ ಸಾಯುವವರೆಗೆ ಕಾನೂನಿನ ಚೌಕಟ್ಟಿಗೆ ಒಳಪಟ್ಟಿರುತ್ತೇವೆ.
ಪ್ರತಿಯೊಬ್ಬರೂ ಪ್ರಮುಖ ಕಾನೂನುಗಳ ಬಗ್ಗೆ ತಿಳಿದುಕೊಂಡು ಪಾಲಿಸಬೇಕಿದೆ ಎಂದರು. ಹೆಲ್ಮೆಟ್ ಕಡ್ಡಾಯಗೊಳಿಸಿರುವುದು ನಮ್ಮ ಸುರಕ್ಷತೆಗಾಗಿ. ಅದನ್ನು ಎಲ್ಲರೂ ಪಾಲಿಸಬೇಕು. ಆಟೋ ಮತ್ತು ಬಸ್ ಚಾಲಕರು ಕಡ್ಡಾಯವಾಗಿ ಪರವಾನಗಿ ಹೊಂದಿರಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು.
ಇದರಿಂದ ತಾವು ಹಾಗೂ ಇತರರು ರಕ್ಷಿತವಾಗಿರಬಹುದು. ಆಟೋ ಚಾಲಕರು ತಡರಾತ್ರಿಯಲ್ಲಿ ಗ್ರಾಹಕರಿಂದ ಹೆಚ್ಚು ಬಾಡಿಗೆ ಪಡೆಯದೇ ರಸ್ತೆ ನಿಯಮ ಪಾಲನೆ ಮೂಲಕ ಉತ್ತಮ ಸೇವೆ ನೀಡಬೇಕೆಂದು ಅವರು ಕಿವಿಮಾತು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಬಹುತೇಕ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರಿಗೆ, ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನೇಕ ಸೌಲಭ್ಯಗಳಿದ್ದು ಅವುಗಳ ಸದುಪಯೋಗ ಪಡೆಯಬೇಕು ಎಂದು ಅವರು ತಿಳಿಸಿದರು. ಸಾವಿರಾರು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ.
ಅದಕ್ಕಾಗಿ ಲೋಕ ಅದಾಲತ್ ಮೂಲಕ ಸಣ್ಣ ಪುಟ್ಟ ಕ್ರಿಮಿನಲ್, ಸಿವಿಲ್ ಮತ್ತು ಪ್ರಿ-ಲಿಟಿಗೇಷನ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಸಾಲಬಾಧೆಗೆ ಆತ್ಯಹತ್ಯೆ ಪರಿಹಾರವಲ್ಲ. ಲೋಕ ಅದಾಲತ್ ಸಂಧಾನದ ಮೂಲಕ ಪರ್ಯಾಯ ಕಂಡುಕೊಳ್ಳಬಹುದು ಎಂದು ಅವರು ಸಲಹೆನೀಡಿದರು.
ವಕೀಲ ಎಚ್.ಎಸ್. ಯೋಗೇಶ್, ಮೋಟಾರು ವಾಹನ ಕಾಯ್ದೆ ವಿಷಯ ಕುರಿತು ಉಪನ್ಯಾಸ ನೀಡಿ, ಪ್ರಾಪ್ತ ವಯಸ್ಸಿನವರು ನಿಯಮಾನುಸಾರ ವಾಹನ ಪರವಾನಗಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಡಿಎಲ್, ಆರ್ಸಿ ಬುಕ್ ಮತ್ತು ವಿಮೆ ಪ್ರತಿಯನ್ನು ತಮ್ಮೊಂದಿಗೆ ಇರಿಸಿಕೊಂಡಿರಬೇಕು. ಪೋಷಕರು ಯಾವುದೇಕಾರಣಕ್ಕೂ ಅಪ್ರಾಪ್ತ ವಯಸ್ಕರ ಕೈಗೆ ವಾಹನ ನೀಡಬಾರದು ಎಂದು ಹೇಳಿದರು.
ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಲೋಕಿಕೆರೆ ಸಿದ್ದಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿ.ಎಚ್. ಹಿರೇಗೌಡರ್, ಮೋಟಾರು ವಾಹನ ನಿರೀಕ್ಷಕ ಮೊಹಮ್ಮದ್ ಖಾಲಿದ್, ಲಾರಿ ಚಾಲಕರ ಸಂಘದ ಅಧ್ಯಕ್ಷ ಸೈಫುಲ್ಲಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.