Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು
Team Udayavani, Oct 8, 2024, 6:58 PM IST
ದಾವಣಗೆರೆ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೋರ್ವರು ಲಕ್ಷಾಂತರ ರೂ. ಹಣ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗಳೂರು ತಾಲೂಕಿನ ಬಿಳಿಚೋಡು ಗ್ರಾಪಂನಲ್ಲಿ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಪ್ರಸ್ತುತ ದೊಣ್ಣೆಹಳ್ಳಿ ಗ್ರಾಪಂನಲ್ಲಿ ಗ್ರೇಡ್-1 ಕಾರ್ಯದರ್ಶಿಯಾಗಿರುವ ತಿಮ್ಮಪ್ಪ ಟಿ. ಎಂಬುವರ ವಿರುದ್ಧ 27.51 ಲಕ್ಷ ರೂ. ಹಣ ದುರುಪಯೋಗದ ಬಗ್ಗೆ ಜಗಳೂರು ತಾಪಂ ಕಾರ್ಯನಿರ್ವಹಣಾಧಿಕಾರಿ ಕೆಂಚಪ್ಪ ಎನ್.ಕೆ. ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಿಳಿಚೋಡು ಗ್ರಾಪಂನಲ್ಲಿ 2022-23ನೇ ಸಾಲಿನಲ್ಲಿ ಮಳೆ, ಪ್ರವಾಹದಿಂದ ಹಾನಿಗೊಳಗಾದ ಕೆರೆಗಳ ದುರಸ್ತಿಗೆ ಬಿಡುಗಡೆಯಾಗಿದ್ದ 2.84 ಲಕ್ಷ ರೂ.ಗಳನ್ನು ಕೆರೆಯ ಅಭಿವೃದ್ಧಿಗೆ ಬಳಸದೆ ನಿಯಮಬಾಹೀರವಾಗಿ ಇತರೆ ಉದ್ದೇಶಕ್ಕೆ ವೆಚ್ಚ ಮಾಡಿದ್ದಾರೆ. ಇದೇ ತಾಲೂಕಿನ ಬಸವನಕೋಟೆ ಗ್ರಾಪಂನಲ್ಲಿ 15ನೇ ಹಣಕಾಸು ಯೋಜನೆಯ 24.67ಲಕ್ಷ ರೂ. ಅನುದಾನವನ್ನು ಈ-ಗ್ರಾಮ ಸ್ವರಾಜ್ ತಂತ್ರಾಂಶದ ಮೂಲಕ ಪಾವತಿ ಮಾಡದೆ ಚೆಕ್ ಮೂಲಕ ಅಧ್ಯಕ್ಷರ ಸಹಿ ಪಡೆಯದೆ, ಸ್ವತಃ ಸಹಿ ಮಾಡಿಕೊಂಡು ಗುತ್ತಿಗೆದಾರರಿಗೆ ಬಿಡುಗಡೆ ಮಾಡಿದ್ದಾರೆ.
ತಿಮ್ಮಪ್ಪ ಅವರು ಒಟ್ಟು 27.51 ಲಕ್ಷ ರೂ. ದುರುಪಯೋಗಪಡಿಸಿಕೊಂಡಿದ್ದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ
Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.