ರಸ್ತೆ ಬದಿ ನೆಟ್ಟಿರುವ ಸಸಿ ಹೆಮ್ಮರವಾಗಲು ಸಹಕರಿಸಿ


Team Udayavani, Feb 10, 2017, 12:30 PM IST

dvg3.jpg

ದಾವಣಗೆರೆ: ಪರಿಸರ ನಾಶದಿಂದ ಆಗುತ್ತಿರುವ ದುಷ್ಪರಿಣಾಮ ಕುರಿತು ಎಲ್ಲರೂ ಪುಂಖಾನುಪುಂಖವಾಗಿ ಮಾತನಾಡಬಲ್ಲರು. ಅದೇ ಪರಿಸರ ಸಂರಕ್ಷಣೆ ಕುರಿತು ತುಟಿ ಬಿಚ್ಚುವವರು, ಕಾರ್ಯೋನ್ಮುಖರಾಗುವವರು ಕೆಲವರು ಮಾತ್ರ. ಪರಿಸರ ನಾಶವಾದಂತೆ ಗಂಭೀರ ಸಮಸ್ಯೆಗಳು ಎದುರಾಗುತ್ತವೆ. ಇವನ್ನು ನಿವಾರಿಸುವ ನಿಟ್ಟಿನಲ್ಲಿ ಯಾರೋ ಒಬ್ಬರು ಕಾರ್ಯೋನ್ಮುಖರಾದರೆ ಸಾಲದು ಎಲ್ಲರೂ ಕೈ ಜೋಡಿಸಬೇಕು. 

ಅಂತಹದ್ದೊಂದು ಕಾರ್ಯ ಮಾಡುವ ಸದಾವಕಾಶ ಇದೀಗ ಪಾಲಿಕೆ ವ್ಯಾಪ್ತಿಯ ಜನರಿಗೆ ಒದಗಿಬಂದಿದೆ. ನಗರದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ನೂರಾರು ಮರಗಳು ನೆಲಕ್ಕುರುಳಿವೆ. ಇದೀಗ ಜಿಲ್ಲಾಡಳಿತ, ಪಾಲಿಕೆ ಅದೇ ಜಾಗದಲ್ಲಿ ಸಸಿಗಳನ್ನು ನೆಟ್ಟು ಪರಿಸರ ಬೆಳೆಸಲು ಮುಂದಾಗುತ್ತಿವೆ. ಈ ಕಾರ್ಯದಲ್ಲಿ ಪಾಲಿಕೆ ವ್ಯಾಪ್ತಿಯ ಜನರೂ ಕೈ ಜೋಡಿಸಬೇಕಿದೆ. 

ನಗರದ ವಿವಿಧ ರಸ್ತೆಗಳ ಇಕ್ಕೆಲಗಳಲ್ಲಿ ತರೇಹವಾರಿ ಸಸಿಗಳನ್ನು ನೆಡಲಾಗಿದೆ.  ಮಳೆಗಾಲ, ಚಳಿಗಾಲ ಇದ್ದುದರಿಂದ ಜೊತೆಗೆ ಅರಣ್ಯ ಇಲಾಖೆ ಒಂದಿಷ್ಟು ನೀರುಣಿಸಿದ್ದರಿಂದ ಸಸಿಗಳು ಇನ್ನೂ ಹಸಿರಾಗಿ ನಳನಳಿಸುತ್ತಿವೆ. ನೀಡುತ್ತಿವೆ. ಇಂತಹ ಸಸಿಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ನಗರದ ಪ್ರತಿಯೊಬ್ಬ ನಾಗರಿಕರು ತಮ್ಮ ಜವಾಬ್ದಾರಿ ಸಹ ನಿಭಾಯಿಸಬೇಕಿದೆ. ಸರ್ಕಾರದ ಕೆಲಸವೆಂದರೆ ಎಷ್ಟರ ಮಟ್ಟಿಗೆ ಕಾರ್ಯಗತವಾಗಲಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯವೇ ಆಗಿದೆ.

ಈ ಹಿಂದೆ ಅದೆಷ್ಟೋ ಸಸಿಗಳು ನೆಟ್ಟ ಕೆಲವೇ ದಿನಗಳಲ್ಲಿ ನಾಶವಾಗಿ ಹೋಗಿವೆ. ಆದರೆ, ಈ ಬಾರಿ ತೀರಾ ಅಂತಹ ಪರಿಸ್ಥಿತಿ ಇಲ್ಲ. ಒಂದಿಷ್ಟು ಸಸಿಗಳು ಉಳಿದಿವೆ. ತಮ್ಮ ತಮ್ಮ ಮನೆ ಮುಂದೆ ರಸ್ತೆ ಬದಿಯಲ್ಲಿ ನೆಟ್ಟಿರುವ ಸಸಿಗಳಿಗೆ ನಿವಾಸಿಗಳು ನೀರೆರೆಯುವ ಕೆಲಸಮಾಡಿದರೆ ಆ ಸಸಿಗಳು ಮುಂದೆ ಹೆಮ್ಮರವಾಗಿ ನಿಮಗೆ, ನಿಮ್ಮ ಮುಂದಿನ ಪೀಳಿಗೆಗೆ ನೆರಳಾಗಲಿವೆ. ಮಳೆ ಬರಲು ಸಹಕಾರಿಯಾಗಲಿವೆ.

ಅಲ್ಲದೆ, ತಾಪಮಾನ ಕಡಿಮೆ ಮಾಡುವಲ್ಲಿ ತಮ್ಮದೇ ಕೊಡುಗೆ ನೀಡಲಿವೆ. ಸಾಮಾಜಿಕ ಜವಾಬ್ದಾರಿ ಬಗ್ಗೆ ಮಾತನಾಡುವ ಬಹುತೇಕರು ಇಂತಹ ಸಣ್ಣ ಸಣ್ಣ ವಿಷಯಗಳು ಬಂದಾಗ ನುಣುಚಿಕೊಳ್ಳುತ್ತಾರೆ. ಇದಕ್ಕೊಂದು ಅಪವಾದ ಎಂಬಂತೆ ಪರಿಸರ ಕಾಳಜಿವುಳ್ಳವರು ಸಸಿಗಳ ಉಳಿಸಲು ಮುಂದಾಗಬೇಕು.  

ಕೈ ಬಿಡಲಿರುವ ಅರಣ್ಯ ಇಲಾಖೆ: ನಗರದಲ್ಲಿ ನಿರ್ಮಾಣವಾಗಿರುವ ರಸ್ತೆಗಳ ಬದುಗಳಲ್ಲಿ ಸಸಿಗಳನ್ನು ನೆಡಲಾಗಿದೆ. ಎಸ್‌ಎಸ್‌ ಹೈಟೆಕ್‌  ಆಸ್ಪತ್ರೆ, ಲಕ್ಷ್ಮಿ ಫ್ಲೋರ್‌ ಮಿಲ್‌ ರಸ್ತೆ, ಡೆಂಟಲ್‌ ಕಾಲೇಜು ರಸ್ತೆ, ಎವಿಕೆ ಕಾಲೇಜು ರಸ್ತೆ, ಹದಡಿ ರಸ್ತೆ, ಲೋಕಿಕೆರೆ ರಸ್ತೆ ಸೇರಿದಂತೆ ಬಹುತೇಕ ಎಲ್ಲಾ ಭಾಗಗಳಲ್ಲಿ ಸಸಿಗಳನ್ನು ನೆಡಲಾಗಿದೆ. ಸದ್ಯ ಅರಣ್ಯ ಇಲಾಖೆ ನೀರು ಎರೆಯುತ್ತಿದೆ. ಇಲಾಖೆ ಅಧಿಕಾರಿಗಳು ಹೇಳುವಂತೆ ಪಾಲಿಕೆಯಿಂದ ಬಂದಿರುವ ಅನುದಾನ ಇನ್ನೊಂದು ಬಾರಿ ಮಾತ್ರ ನೀರುಣಿಸಲು ಸಾಕಾಗುತ್ತದೆ. ಮತ್ತೆ ನೀರುಣಿಸುವುದು ಅಸಾಧ್ಯವಂತೆ. 

ಇಷ್ಟು ಮಾಡಿ ಸಾಕು: ನೀವು ಕುಡಿಯುವ ನೀರನ್ನು ಈ ಸಸಿಗಳಿಗೆ ಎರೆಯಬೇಕಿಲ್ಲ. ನಿಮ್ಮ ಮನೆಯಲ್ಲಿನ ತ್ಯಾಜ್ಯ ನೀರು ಈ ಸಸಿಗಳಿಗೆ ಸಾಕು. ನೆಲ, ಪಾತ್ರೆ, ಬಟ್ಟೆ ತೊಳೆದ ನೀರನ್ನು ಚರಂಡಿಗೆ ಸುರಿಯುವ ಬದಲು ಈ ಸಸಿಗಳಿಗೆ ಹಾಕಿ. ಇನ್ನು ಮನೆ ಮುಂದೆ ವಾಹನ ತೊಳೆದ ನೀರು ನೇರ ಸಸಿಯ ಬುಡ ತಲುಪುವಂತೆ ಒಂದಿಷ್ಟು ದಾರಿಮಾಡಿ. ಇನ್ನು ಹೋಟೆಲ್‌, ಇತರೆ ವ್ಯಾಪಾರಿ ಮಳಿಗೆ ಹೊಂದಿದವರು ಕನಿಷ್ಠ ಅರ್ಧಕೊಡ ನೀರು ಸಸಿಗಳಿಗೆ ಎರೆದು ಸಾಮಾಜಿಕ ಜವಾಬ್ದಾರಿ ಮೆರೆಯಬೇಕಿದೆ.

* ಪಾಟೀಲ ವೀರನಗೌಡ

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.