ಸಿದ್ದರಾಮಯ್ಯ ಘೋಷಣೆಗಳ ಪ್ರವೀಣ
Team Udayavani, Jun 3, 2017, 1:31 PM IST
ದಾವಣಗೆರೆ: ಸಿದ್ದರಾಮಯ್ಯ ಘೋಷಣೆಗಳ ಪ್ರವೀಣ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ವ್ಯಂಗವಾಡಿದ್ದಾರೆ. ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕಳೆದ 4 ವರ್ಷಗಳಲ್ಲಿ ಮಾಡಿದ್ದೇನು ಎಂಬುದನ್ನು ಪ್ರಶ್ನಿಸಬೇಕಿದೆ.
ಕಳೆದ 18 ತಿಂಗಳಿನಿಂದ ಜನತಾ ದರ್ಶನವಿರಲಿ, ಅವರು ಈ ರಾಜ್ಯದ ಸಿಎಂ ಎಂಬುದೇ ಜನರಿಗೆ ಇನ್ನೂ ಮನವರಿಕೆಯಾಗಿಲ್ಲ ಎಂದರು. ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮರಳು ಮಾμಯಾ ತಡೆಗೆ ಮುಂದಾದಾಗ ಅವರ ಮೇಲೆ ಹಲ್ಲೆ ನಡೆದ ಬಗ್ಗೆ ದೂರು ನೀಡಿದ ಇತಿಹಾಸ ಈವರೆಗೆ ಇಲ್ಲ.
ಇಂತಹ ಆಡಳಿತ ವೈಖರಿಯ ಸರ್ಕಾರ ರಾಜ್ಯದಲ್ಲಿದೆ ಎಂದು ಅವರು ಟೀಕಿಸಿದರು. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಅವಧಿಯಲ್ಲಿನ ಎಲ್ಲಾ ವರ್ಗದ ಮಠಗಳಿಗೆ ಅನುದಾನ ನೀಡಲಾಗಿದೆ. ಈ ಸರ್ಕಾರ ದಲಿತರಿಗಾಗಿ ಏನೂ ಮಾಡಿಲ್ಲ. ಬಜೆಟ್ ನಲ್ಲಿ ದಲಿತರ ಅಭಿವೃದ್ದಿ ಯೋಜನೆಗಳಿಗೆ ಮೀಸಲಿಟ್ಟ ಅನುದಾನವನ್ನೇ ಖರ್ಚುಮಾಡಿಲ್ಲ ಎಂದು ದೂರಿದರು.
ನಾನು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೋಗಿದ್ದು ನಿಜ. ಬ್ರಿಗೇಡ್ ಉದ್ದೇಶವನ್ನೇ ಪಕ್ಷದ ಹಿಂದುಳಿದ ಮೋರ್ಚಾದ ಮೂಲಕ ಕೈಗೊಳ್ಳುವಂತೆ ರಾಷ್ಟ್ರೀಯ ನಾಯಕರು ಹೇಳಿದರು. ಹಾಗಾಗಿ ಇನ್ನು ಮುಂದೆ ಮೋರ್ಚಾದ ಹಿಂದುಳಿದ ಘಟಕದ ಮೂಲಕ ಸಂಘಟನೆ ಮುಂದುವರಿಸುವೆ ಎಂದ ಈಶ್ವರಪ್ಪ, ಕೆಲವು ಜಿಲ್ಲೆ ಗಳಲ್ಲಿ ಮುಖಂಡರ ನಡುವಿನ ಭಿನ್ನಾಭಿಪ್ರಾಯವನ್ನ ರಾಷ್ಟ್ರೀಯ ನಾಯಕರು ಸರಿಪಡಿಸಲಿದ್ದು, ಮುಂದೆ ಆ ಜಿಲ್ಲಾ ಮುಖಂಡರು ಸಹ ತಮ್ಮೊಂದಿಗೆ ಕೈ ಜೋಡಿಸಲಿದ್ದಾರೆ ಎಂದರು.
ಮಾಜಿ ಸಚಿವರಾದ ಜಿ. ಕರುಣಾಕರ ರೆಡ್ಡಿ, ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರ, ಮಾಡಾಳ್ ವಿರುಪಾಕ್ಷಪ್ಪ, ಜಿ.ಗುರುಸಿದ್ದನಗೌಡ, ಬಿ.ಪಿ.ಹರೀಶ್, ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ರಾಜನಹಳ್ಳಿ ಶಿವಕುಮಾರ್, ರಾಜಶೇಖರ್, ರಮೇಶ್ ನಾಯ್ಕ ಸುದ್ದಿಗೋಷ್ಟಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.