![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 15, 2022, 6:09 PM IST
ಹೊಸದುರ್ಗ: ರಾಜಕೀಯ ಪಕ್ಷಗಳು ಚುನಾವಣೆ ಬಂದಾಗ ಮಾತ್ರ ಎಸ್ಸಿ-ಎಸ್ಟಿ ಸಮುದಾಯಗಳನ್ನು ಬಳಸಿಕೊಳ್ಳದೆ ಅವರ ಹಿತರಕ್ಷಣೆ ಮಾಡಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ಪಟ್ಟಣದ ರಾಧಾಕೃಷ್ಣ ಕಲ್ಯಾಣಮಂಟಪದಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ಹಾಗೂ ಜನಜಾಗೃತಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಭಾರತ ದೇಶ ಶ್ರೇಣಿಕೃತ ಜಾತಿ ವ್ಯವಸ್ಥೆಯಿಂದ ಕೂಡಿದೆ. ಹುಟ್ಟಿದ ಜಾತಿಯ ಕಾರಣಕ್ಕಾಗಿ ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯನ್ನು ಕೀಳಾಗಿ ನೋಡುವ ಪದ್ಧತಿ ಜೀವಂತವಾಗಿದೆ.
ಆದ್ದರಿಂದ ದೇಶದಲ್ಲಿ ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೆಯೋ ಅಲ್ಲಿಯವರೆಗೂ ಶೋಷಿತ ಸಮುದಾಯಗಳ ಜನರಿಗೆ ಮೀಸಲಾತಿ ಅಗತ್ಯ ಎಂದು ಪ್ರತಿಪಾದಿಸಿದರು. ಭಾರತದಲ್ಲಿ ಧರ್ಮ, ಜಾತಿ ಮತ್ತು ಉಪಜಾತಿಗಳ ವ್ಯವಸ್ಥೆ ಇದ್ದು, ಇಂದಿಗೂ ಕೆಲವು ಸಮುದಾಯದವರನ್ನು ಗ್ರಾಮಗಳಿಂದ ಹೊರಗಿಟ್ಟಿದ್ದಾರೆ. ಡಾ| ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ನೀಡದೆ ಇದ್ದಿದ್ದರೆ ಈ ಜನರ ಜೀವನ ಡೋಲಾಯಮಾನವಾಗಿರುತ್ತಿತ್ತು ಎಂದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9ರಂದು 5ನೇ ವರ್ಷದ ಶ್ರೀ ವಾಲ್ಮೀಕಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಬಾರಿ ಜಾತ್ರೆಯಲ್ಲಿ 88 ಅಡಿ ಎತ್ತರದ ರಥ ವಿಶೇಷವಾಗಿದೆ. ಎಸ್ಸಿ-ಎಸ್ಟಿ ಸಮುದಾಯದ ಎಲ್ಲಾ ಬಂಧುಗಳು ಕುಟುಂಬ ಸಮೇತರಾಗಿ ಜಾತ್ರೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಹರ್ತಿಕೋಟೆ ವೀರೇಂದ್ರಸಿಂಹ ಮಾತನಾಡಿ, ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಶೋಷಿತ ಎಸ್ಸಿ-ಎಸ್ಟಿ ಸಮುದಾಯಗಳ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 267 ದಿನಗಳ ಕಾಲ ಧರಣಿ ಸತ್ಯಾಗ್ರಹ ನಡೆಸಿದರು.
ಶ್ರೀಗಳ ಹಕ್ಕೊತ್ತಾಯಕ್ಕೆ ಮಣಿದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡಿದೆ. ನವೆಂಬರ್ ತಿಂಗಳಿನಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಜಾರಿಯಲ್ಲಿದೆ ಎಂದು ತಿಳಿಸಿದರು. ನಾಯಕ ಸಮಾಜದ ಅಧ್ಯಕ್ಷ ಶಿವಣ್ಣ, ಮಾಜಿ ಅಧ್ಯಕ್ಷ ತುಂಬಿನಕೆರೆ ಬಸವರಾಜ್, ಗುತ್ತಿಕಟ್ಟೆ ಕೆಂಚಪ್ಪ, ರಂಗನಾಥ್ ಚನ್ನಸಮುದ್ರ, ಆದಿಜಾಂಬವ ಸಮಾಜದ ಅಧ್ಯಕ್ಷ ಎಂ. ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಹೆಗ್ಗೆರೆ ಶಂಕ್ರಪ್ಪ, ಮುಖಂಡರಾದ ಮಾವಿನಕಟ್ಟೆ ಪ್ರಕಾಶ್,ಅವಳಪ್ಪ, ಜಯಣ್ಣ, ಮಳಲಿ ರವಿತೇಜ, ಹೊನ್ನೇನಹಳ್ಳಿ ರಂಗಪ್ಪ, ತಿಪ್ಪೇಸ್ವಾಮಿ, ಶಿವರಾಜ್, ವಿಜಯಕುಮಾರ್ ಮತ್ತಿತರರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.