ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ


Team Udayavani, Feb 28, 2017, 1:30 PM IST

dvg6.jpg

ಹೊನ್ನಾಳಿ: ರಾಜ್ಯ ಸರ್ಕಾರ ಮತ್ತು ತಾಲೂಕು ಆಡಳಿತದ ನಿಷ್ಕ್ರಿಯ, ಭ್ರಷ್ಟಾಚಾರದ ವಿರುದ್ಧ, ಸಮರ್ಪಕವಾಗಿ ಆಶ್ರಯ ಮನೆ ಮತ್ತು ಶೌಚಾಲಯಗಳಿಗೆ ಮರಳು ಒದಗಿಸುವುದು, ಪಡಿತರ ಕೂಪನ್‌ ಪದ್ಧತಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. 

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತು ತಾಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ.ರಾಜಪ್ಪ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ನಿಲ್ದಾಣದ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿಯ ಬಳಿ ಬೃಹತ್‌ ಪ್ರತಿಭಟನಾ ಸಭೆ ನಡೆಸಲಾಯಿತು. 

ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ರಾಜ್ಯದಲ್ಲಿ ಕಳೆದ 4 ವರ್ಷಗಳಿಂದ ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತು ತಾಲೂಕು ಆಡಳಿತ ಜನ ವಿರೋಧಿ ಹಾಗೂ ರೈತ ವಿರೋಧಿ ಆಡಳಿತ ನಡೆಸುತ್ತಿದ್ದು, ರಾಜ್ಯದ ಜನತೆಯ ಹಿತರಕ್ಷಣೆಯ ಕಡೆ ಗಮನ ನೀಡುತ್ತಿಲ್ಲ. 

ತಾಲೂಕಿನಲ್ಲಿ ಈವರೆಗೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ತಾಲೂಕಿನ ಆಡಳಿತ ದಿಕ್ಕೆಟ್ಟು ಹೋಗಿದೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎಂದು ಆರೋಪಿಸಿದರು. ಭೀಕರ ಬರಗಾಲ ಪೀಡಿತ ತಾಲೂಕು ಎಂದು ಘೋಷಣೆಯಾಗಿದ್ದರೂ ಈವರೆಗೂ ಸಮರ್ಪಕವಾಗಿ ಬರ ಕಾಮಗಾರಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗದೇ ತಾಲೂಕು ಆಡಳಿತ ಸಂಪೂರ್ಣ ನಿಷ್ಕಿೃಯವಾಗಿದೆ. 

ರೈತವರ್ಗ, ಕೂಲಿಕಾರ್ಮಿಕರು, ದಿನ ನಿತ್ಯದ ಕೂಲಿಯಿಲ್ಲದೇ ಜೀವನ ನಡೆಸುವುದು ಕಷ್ಟವಾಗಿ ಗೂಳೆ ಹೋಗುತ್ತಿದ್ದಾರೆ. ಅಕ್ರಮ ಮರಳು ದಂಧೆ ಹಗಲು ರಾತ್ರಿ ಎಗ್ಗಿಲ್ಲದೇ ನಡೆಯುತ್ತಿದೆ. ಅಕ್ರಮ ಮರಳು ಲೂಟಿಕೋರರಿಗೆ ಹೇಗೆ ಸಿಗುತ್ತಿದೆ? ಎಂಬುದೇ ಯಕ್ಷ ಪ್ರಶ್ನೆಯಾಗಿದೇ ಶಾಸಕರು ಜೊತೆಗೆ ಹಿಂಬಾಲಕರಿಗೆ ತಾಲೂಕಿನಲ್ಲಿ ಮರಳು ಮೀಸಲಾಗಿದೆ.

ಇಲ್ಲಿಂದ ಹೊರ ಜಿಲ್ಲೆಗಳಿಗೆ ರಾತ್ರೋರಾತ್ರಿ ಹತ್ತಾರು ಲಾರಿಗಳಲ್ಲಿ ಮರಳು ಲೂಟಿಯಾಗುತ್ತಿದೆ ಎಂದು ಆರೋಪಿಸಿದರು. ತಾಲೂಕು ಬಿಜೆಪಿ ಅಧ್ಯಕ್ಷ ಡಿ.ಜಿ.ರಾಜಪ್ಪ ಮಾತನಾಡಿ, ಕಾಂಗ್ರೆಸ್‌ ಸರ್ಕಾರದ ಆಡಳಿತದ ಬಗ್ಗೆ ರಾಜ್ಯದ ಜನತೆ ದಿನ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ಯಾವ ಇಲಾಖೆಯ ಅಧಿಕಾರಿಗಳು ಸಾರ್ವಜನಿಕ ಕೆಲಸದ ಕಡೆ ಗಮನ ನೀಡುತ್ತಿಲ್ಲ.

ಜಿಪಂ, ತಾಪಂ, ಗ್ರಾಪಂ ಸದಸ್ಯರ ಮಾತಿಗೆ ಬೆಲೆ ಕೊಡದೆ ತಾಲೂಕು ಆಡಳಿತದ ಜೊತೆ ಶಾಮಿಲಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದರು. ಜಿಪಂ ಸದಸ್ಯರಾದ ದೀಪಾ ಜಗದೀಶ್‌, ಎಂ.ಆರ್‌.ಮಹೇಶ್‌, ಸಿ.ಸುರೇಂದ್ರನಾಯ, ತಾಪಂ ಉಪಾಧ್ಯಕ್ಷ ಸಿದ್ದಲಿಂಗಪ್ಪ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಶಾಂತರಾಜ್‌ಪಾಟೀಲ್‌, ತಾಲೂಕು ರೈತ ಮೋರ್ಚಾ ಅಧ್ಯಕ್ಷ ರವೀಂದ್ರನಾಥ್‌, ಯುವ ಮೋರ್ಚಾ ಅಧ್ಯಕ್ಷ ಸಿ.ಆರ್‌.ಶಿವಾನಂದ್‌, 

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಭು ಹೊನ್ನಾಳಿ, ಕಾರ್ಯದರ್ಶಿ ಮಂಜುನಾಥ್‌, ಯುವ ಮೋರ್ಚಾ ಉಪಾಧ್ಯಕ್ಷ ಎಂ.ಮಂಜುನಾಥ್‌, ಪಪಂ ಸದಸ್ಯರಾದ ಹೊಸಕೇರಿ ಸುರೇಶ್‌, ಸರಳಿನಮನೆ ಮಂಜುನಾಥ್‌,  ಗುಲಾರಖಾನಂ ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಪಿ. ಮುರಾರಿ, ಸಿದ್ದನಗೌಡ, ಎಸ್‌.ಟಿ. ಮೋರ್ಚಾ ಅಧ್ಯಕ್ಷ ವೀರಪ್ಪ, ಎಸ್ಸಿ ಮೋರ್ಚಾ ಅಧ್ಯಕ್ಷ ಮಾರುತಿ, ಒಬಿಸಿ ಮೋರ್ಚಾ ಅಧ್ಯಕ್ಷ ಕನಕದಾಸ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇರ್ಷಾದ್‌ಖಾನ್‌, ಸ್ಲಂ ಮೋರ್ಚಾ ಅಧ್ಯಕ್ಷ ರಂಗಪ್ಪ ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.