ಮಸಿ ಬಳಿದವರನ್ನು ತಕ್ಷಣ ಬಂಧಿಸಲು ಆಗ್ರಹಿಸಿ ಪ್ರತಿಭಟನೆ


Team Udayavani, Mar 13, 2017, 1:21 PM IST

dvg5.jpg

ದಾವಣಗೆರೆ: ವಿವಾದಿತ ಲೇಖಕ ಯೋಗೇಶ್‌ ಮಾಸ್ಟರ್‌ಗೆ ಮಸಿ ಬಳಿದು ಮಾರಣಾಂತಿಕ ಹಲ್ಲೆಮಾಡಿದವರು ಸಂಘ ಪರಿವಾರದವರು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ವಿವಿಧ ಪ್ರಗತಿ ಪರ ಸಂಘಟನೆ, ಎಡಪಕ್ಷಗಳ ಪ್ರತಿನಿಧಿಗಳು ಮೆರವಣಿಗೆ ನಡೆಸಿದರು. 

ವಿದ್ಯಾನಗರ ರಸ್ತೆಯ ಬಳಿಯ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಲಂಕೇಶ್‌- 82 ಕಾರ್ಯಕ್ರಮದ ಸ್ಥಳದಿಂದ ಮೆರವಣಿಗೆಆರಂಭಿಸಿದ ನೂರಾರು ಪ್ರತಿನಿಧಿಗಳು ಗುಂಡಿ ವೃತ್ತ, ವಿದ್ಯಾರ್ಥಿ ಭವನ, ಅಂಭೇಡ್ಕರ್‌ ವೃತ್ತದ ಮೂಲಕ ಜಯದೇವ ವೃತ್ತ ತಲುಪಿದರು. 

ಜಯದೇವ ವೃತ್ತದಲ್ಲಿ ಕೆಲ ಹೊತ್ತು ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿದರು. ನಂತರ ಬಡಾವಣೆ ಠಾಣೆಗೆ ತೆರಳಿ, ದೂರು ಸಲ್ಲಿಸಿದರು. ದೂರು ಸಲ್ಲಿಸುವ ಮುನ್ನ ಮಾತನಾಡಿದ ಪತ್ರಕರ್ತೆ ಗೌರಿ ಲಂಕೇಶ್‌, ದಾವಣಗೆರೆ ಒಂದು ಕ್ರಾಂತಿ ಭೂಮಿ. ಇಲ್ಲಿ ಪ್ರಜ್ಞಾವಂತರು, ಸಾಹಿತಿಗಳು, ಪ್ರಗತಿಪರರು ಇದ್ದಾರೆ. 

ಇದೇ ಕಾರಣಕ್ಕೆ ನಾವು ಇಲ್ಲಿ ಲಂಕೇಶ್‌ರ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ನಾಡಿನ ಹೆಸರಾಂತ ಸ್ವಾಮೀಜಿಗಳಾದ ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಅಂತಹ ಕಾರ್ಯಕ್ರಮವನ್ನು ಕೆಡಿಸಬೇಕು ಎಂಬ ಉದ್ದೇಶದಿಂದ ಇಂತಹ ದಾಳಿಮಾಡಲಾಗಿದೆ ಎಂದು ಆರೋಪಿಸಿದರು.

ಯಾವುದೇ ಕಾರಣಕ್ಕೂ ಇಂತಹಕಿಡಿಗೇಡಿಗಳನ್ನು ಬಿಡಬಾರದು. ನಾವು  ಇಂತಹ ಕೃತ್ಯಗಳಿಗೆ ಹೆದರುವುದಿಲ್ಲ. ಆದರೆ, ಕಾನೂನು, ಸುವ್ಯವಸ್ಥೆಗೆ ಬೆಲೆ ಕೊಡುತ್ತೇವೆ. ಅದೇ ಕಾರಣಕ್ಕೆ ಶಾಂತಿಯುತ ಮೆರವಣಿಗೆ ಮಾಡಿ, ದೂರು ಸಲ್ಲಿಸಿದ್ದೇವೆ.ಪೊಲೀಸರು ಯಾವುದೇ ಕಾರಣಕ್ಕೂ ಇಂತಹ ಕಿಡಿಗೇಡಿಗಳನ್ನು ಬಿಡಬಾರದು ತಕ್ಷಣ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. 

ಸಿಪಿಐ ಮುಖಂಡರಾದ ಡಾ| ಸಿದ್ಧನಗೌಡ ಪಾಟೀಲ್‌, ಎಚ್‌.ಕೆ. ರಾಮಚಂದ್ರಪ್ಪ ಮಾತನಾಡಿ, ಇದೊಂದು ಅತ್ಯಂತ ಹೇಯ ಕೃತ್ಯ, ಅಭಿವ್ಯಕ್ತಿ ಸ್ವಾತಂತ್ರ ಹರಣಮಾಡುವ ಯತ್ನ. ಇಂತಹ ಬೆದರಿಕೆಗೆ ನಾವು ಬಗ್ಗುವುದಿಲ್ಲ ಎಂದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್‌. ಅಶೋಕ್‌ ಮಾತನಾಡಿ, ನಾವು ಗೂಂಡಾ ಸಂಸ್ಕೃತಿಯಿಂದ ಬಂದವರಲ್ಲ.

ನಾವು ಕಾನೂನು ನಂಬಿ ಜೀವನ ನಡೆಸುವವರು. ಯೋಗೀಸ್‌ ಮಾಸ್ಟರ್‌ ಮೇಲೆ ಹಲ್ಲೆ ನಡೆಯುತ್ತಿರುವುದು ಇದು ಮೊದಲಲ್ಲ. ಈ ಹಿಂದೆ ಸಹ ದಾವಣಗೆರೆಯ ಕಾರ್ಯಕ್ರಮಕ್ಕೆ ಬಂದಾಗ ಅವರ ಮೇಲೆ ಹಲ್ಲೆಮಾಡಲು ಮುಂದಾಗಿದ್ದರು. ಆಗ ನಮ್ಮ ಕಾರ್ಯಕರ್ತರು ತಡೆದು ನಿಲ್ಲಿಸಿದ್ದರು.

ಇದು ಗೊತ್ತಿದ್ದು ಪೊಲೀಸರು ಸೂಕ್ತ ಭದ್ರತೆ ಒದಗಿಸದಿರುವುದು ಬೇಸರದ ಸಂಗತಿ ಎಂದರು. ಆಮ್‌ ಆದ್ಮಿ ಪಕ್ಷದ ಕೆ. ರಾಘವೇಂದ್ರ, ನಗರಪಾಲಿಕೆ ಸದಸ್ಯ ಎಚ್‌.ಜಿ. ಉಮೇಶ್‌, ರೈತ ಸಂಘದ ಬಲ್ಲೂರು ರವಿಕುಮಾರ್‌, ಆವರಗೆರೆ ರುದ್ರಮುನಿ, ಅರುಣಕುಮಾರ್‌ ಕುರುಡಿ, ಮಾನವ ಬಂಧುತ್ವ ವೇದಿಕೆಯ ರಾಘು ದೊಡ್ಮನಿ,

ಸಿಪಿಐ ಎಂನ ಕೆ.ಎಲ್‌. ಭಟ್‌, ವಕೀಲ ಅನೀಸ್‌ ಪಾಷ, ಮುಖಂಡರಾದ ಐರಣಿ ಚಂದ್ರು, ಟಿ.ವಿ. ರೇಣುಕಮ್ಮ, ಉಷಾರಾಣಿ, ಹೆಗ್ಗೆರೆ ರಂಗಪ್ಪ, ಇ. ಶ್ರೀನಿವಾಸ್‌, ಕೆ. ಮಹಾಂತೇಶ್‌, ಕೋಳಿ ಇಬ್ರಾಹಿಂ, ಟಿ. ಅಜರ್‌, ಮಲ್ಲಿಗೆ ಸೇರಿದಂತೆ ವಿವಿಧ ಪ್ರಗತಿ ಪರ, ದಲಿತ ಪರ, ರೈಪರ ಸಂಘಟನೆ ಮುಖಂಡರು  ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಪಂಜ: ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Sullia: ಪಂಜ; ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಪಂಜ: ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Sullia: ಪಂಜ; ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

suicide (2)

Heart attack: ಕಚೇರಿಯಲ್ಲೇ 40 ವರ್ಷದ ಟೆಕ್ಕಿ ಸಾವು

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

police crime

Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್‌ ಪೇದೆ ಹತ್ಯೆ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.