ನೆರವಿಗಾಗಿ ಇಬ್ಬರು ಮಕ್ಕಳೊಂದಿಗೆಪ್ರತಿಭಟಿಸಿದ ಅಸಹಾಯಕ ತಂದೆ
Team Udayavani, Feb 9, 2017, 12:14 PM IST
ದಾವಣಗೆರೆ: ರೈಲ್ವೆ ಅಪಘಾತದಲ್ಲಿ ಪತ್ನಿ ಜೊತೆಗೆ ತನ್ನ ಒಂದು ಕೈಯನ್ನು ಕಳೆದುಕೊಂಡಿರುವ ವ್ಯಕ್ತಿ ಜೀವನ ನಿರ್ವಹಣೆಗೆ ಸರ್ಕಾರದ ನೆರವು ಕೋರಿ ಬುಧವಾರ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ತನ್ನ ಮಕ್ಕಳೊಡನೆ ಪ್ರತಿಭಟಿಸಿದ ಘಟನೆ ನಡೆದಿದೆ.
ದಾವಣಗೆರೆ ತಾಲೂಕಿನ ಈಚಘಟ್ಟ ಗ್ರಾಮದ ತಿಮ್ಮೇಶ್ ತನ್ನ ಮಕ್ಕಳಾದ ದಿನೇಶ್, ದಿವ್ಯಾ ಜೊತೆಗೂಡಿ ಪ್ರತಿಭಟನೆ ನಡೆಸಿ, ಸ್ವತಃ ಜಿಲ್ಲಾಧಿಕಾರಿಗಳೇ ಇಲ್ಲಿಗೆ ಬಂದು, ನನ್ಮ ಅಳಲು ಕೇಳಿ, ಸೂಕ್ತ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಪೊಲೀಸರು ಮತ್ತು ಮಕ್ಕಳ ಸಾಂತ್ವನ ಕೇಂದ್ರದ ಸಿಬ್ಬಂದಿ ತಿಮ್ಮೇಶ್ ಮತ್ತು ಆತನ ಮಕ್ಕಳನ್ನು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಬಳಿಗೆ ಕರೆದೊಯ್ದರು. ಸೂಕ್ತ ನೆರವಿನ ಭರವಸೆ ದೊರೆಯಿತು.
ಘಟನೆ ಹಿನ್ನೆಲೆ: ಈಚಘಟ್ಟ ಗ್ರಾಮದ ತಿಮ್ಮೇಶ್ ಒಂದೂವರೆ ತಿಂಗಳ ಹಿಂದೆ ರೈಲು ಇಳಿಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದ ಪರಿಣಾಮ ಒಂದು ಕೈಯನ್ನೇ ಕಳೆದುಕೊಂಡಿದ್ದರಿಂದ ದುಡಿಮೆ ಮಾಡದಂತಾಗಿದ್ದರು.
ತಿಮ್ಮೇಶ್ ಪತ್ನಿ ತಿಮ್ಮಕ್ಕ ಸಹ ರೈಲು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಒಂದು ಕಡೆ ದುಡಿಯಲು ಆಗದ ಅಸಹಾಯಕತೆ ಮತ್ತೂಂದು ಕಡೆ ಮಕ್ಕಳ ಪೋಷಣೆಯ ಹೊರೆ. ಇದರಿಂದ ಜರ್ಜಿರಿತನಾದ ತಿಮ್ಮೇಶ್ ಜಿಲ್ಲಾಡಳಿತದ ನೆರವು ಕೋರಿ ಪ್ರತಿಭಟನೆಯ ಹಾದಿ ತುಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ
Shiruru Landslide Tragedy: ಟ್ಯಾಂಕರ್ ಎಂಜಿನ್, ಸ್ಕೂಟಿ ಪತ್ತೆ
Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ
Badminton; ಅನ್ಮೋಲ್ ಖರಬ್ಗೆ ಬ್ಯಾಡ್ಮಿಂಟನ್ ಪ್ರಶಸ್ತಿ
Duleep Trophy:ಇಂಡಿಯಾ ಎ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.