![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-415x264.jpg)
ರಾಕೇಶ್ ಟಿಕಾಯತ್-ಸಿಂಗ್ ಮೇಲಿನ ಹಲ್ಲೆಗೆ ಆಕ್ರೋಶ
ಹಲ್ಲೆ, ಮಸಿ ಬಳಿದಿರುವುದರ ಹಿಂದೆ ಕೋಡಿಹಳ್ಳಿ ಚಂದ್ರಶೇಖರ್ ಕೈವಾಡ ಶಂಕೆ
Team Udayavani, Jun 2, 2022, 3:06 PM IST
![rakesh-singh](https://www.udayavani.com/wp-content/uploads/2022/06/rakesh-singh-620x389.jpg)
ದಾವಣಗೆರೆ: ಭಾರತೀಯ ಕಿಸಾನ್ ಯೂನಿಯನ್ ನ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್ ಅವರ ಮುಖಕ್ಕೆ ಮಸಿ ಬಳಿದು ಹಲ್ಲೆ ನಡೆಸಿದ ಘಟನೆ ಖಂಡಿಸಿ ಮಂಗಳವಾರ ಸಂಯುಕ್ತ ಕಿಸಾನ್ ಮೋರ್ಚಾ, ಪ್ರಗತಿಪರ ಚಿಂತಕರ ವೇದಿಕೆ ಪದಾಧಿಕಾರಿಗಳು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಗಾಂಧಿಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿರುವಾಗಲೇ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿಯನ್ನು ಬಳಿದು ಹಲ್ಲೆ ನಡೆಸಲಾಗಿದೆ. ಯುದ್ಧವೀರ ಸಿಂಗ್ ಮೇಲೆ ಮೈಕ್ ನಿಂದ ಹಲ್ಲೆ ಇಡೀ ದೇಶದ ರೈತ ಸಮುದಾಯದ ಮೇಲೆ ನಡೆದ ಹಲ್ಲೆಯಾಗಿದೆ. ರಾಜ್ಯದ ಘನತೆಗೆ ಧಕ್ಕೆ ತಂದ ಘಟನೆಯಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ರಾಕೇಶ್ ಟಿಕಾಯತ್ ಹೇಳುತ್ತಿದ್ದಂತೆ ಘಟನೆ ನಡೆದಿರುವುದು ಗಮನಿಸಿದರೆ ಇದರ ಹಿಂದೆ ಕೋಡಿಹಳ್ಳಿ ಚಂದ್ರಶೇಖರ್ ಕೈವಾಡ ಕೂಡ ಇರಬಹುದು. ಹಲ್ಲೆಕೋರರು ಮೋದಿ ಮೋದಿ ಎಂದು ಕೂಗಿರುವುದು ಗಮನಿಸಿದರೆ ಹೋರಾಟದಿಂದ ಕೇಂದ್ರ ಸರ್ಕಾರವನ್ನು ಮಣಿಸಿದರೆಂದು ಸಿಟ್ಟಿನಿಂದ ಬಿಜೆಪಿ ಕಾರ್ಯಕರ್ತರು ಈ ರೀತಿ ಮಾಡಿರಬಹುದು ಅಥವಾ ಮುಖಂಡರು ಮಾಡಿಸಿರಬಹುದು. ಹಾಗಾಗಿ ಘಟನೆಯ ಬಗ್ಗೆ ಕೂಲಂಕುಷವಾದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ತೇಜಸ್ವಿ ಪಟೇಲ್, ವಕೀಲ ಅನೀಸ್ ಪಾಷ, ಈ. ಶ್ರೀನಿವಾಸ್, ಹುಚ್ಚವ್ವನಹಳ್ಳಿ ಮಂಜುನಾಥ್, ಕೆ.ಎಚ್. ಆನಂದ್ರಾಜ್, ಮಧು ತೊಗಲೇರಿ, ಆದಿಲ್ ಖಾನ್, ಎಚ್. ಮಲ್ಲೇಶ್, ಅಬ್ದುಲ್ ಘನಿ ತಾಹಿರ್, ಜಬೀನಾ ಖಾನಂ, ಕರಿಬಸಪ್ಪ, ಹೆಗ್ಗೆರೆ ರಂಗಪ್ಪ, ಐರಣಿ ಚಂದ್ರು, ಮುಸ್ತಾಫಾ ಮೊದಲಾದವರು ಭಾಗವಹಿಸಿದ್ದರು.
ಕೊಲೆ ಯತ್ನ ಪ್ರಕರಣ ದಾಖಲಿಸಿ
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಮತ್ತು ಹೋರಾಟಗಳನ್ನು ಹತ್ತಿಕ್ಕುವ ಸಲುವಾಗಿ ಆಡಳಿತರೂಢ ಪಕ್ಷಗಳು ಕುತಂತ್ರಗಳನ್ನು ಮಾಡುತ್ತಾ ಬಂದಿವೆ. ಆದರೆ, ಭಯವನ್ನು ಹುಟ್ಟಿಸುವುದರಿಂದ ಅಥವಾ ಯಾವುದೇ ಒತ್ತಡದಿಂದ ಹೋರಾಟಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಘಟನೆಯ ಆರೋಪಿಗಳನ್ನು ತೀವ್ರ ತನಿಖೆಗೆ ಒಳಪಡಿಸಿ ಹಿಂದೆ ಯಾರ ಕೈವಾಡ ಇದೆಯೋ ಅವರನ್ನು ತಕ್ಷಣ ಬಂಧಿಸಿ ಅವರ ವಿರುದ್ಧ ಕೊಲೆ ಪ್ರಯತ್ನದ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಟಾಪ್ ನ್ಯೂಸ್
![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-415x264.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere; Protest by BJP Zilla Raitamorcha condemning the price hike](https://www.udayavani.com/wp-content/uploads/2024/07/dava-150x83.jpg)
Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ
![1-sadsadasd](https://www.udayavani.com/wp-content/uploads/2024/06/1-sadsadasd-3-150x90.jpg)
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
![7](https://www.udayavani.com/wp-content/uploads/2024/06/7-18-150x90.jpg)
Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ
![ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ](https://www.udayavani.com/wp-content/uploads/2024/06/shyamanur-150x84.jpg)
ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ
![Valmiki Corporation case: Siddaramaiah should resign on moral responsibility: Bellad](https://www.udayavani.com/wp-content/uploads/2024/06/bellad-150x83.jpg)
Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್
MUST WATCH
ಹೊಸ ಸೇರ್ಪಡೆ
![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-150x95.jpg)
Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.