ಬಗರ್‌ ಹುಕುಂ ಸಾಗುವಳಿ ಹಕ್ಕುಪತ್ರ ವಿತರಣೆಗೆ ಆಗ್ರಹ


Team Udayavani, May 21, 2019, 12:04 PM IST

dg-tdy-3..

ದಾವಣಗೆರೆ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ದಾವಣಗೆರೆ: ಅರಣ್ಯಭೂಮಿ, ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ) ನೇತೃತ್ವದಲ್ಲಿ ಸಾಗುವಳಿದಾರರರು ಸೋಮವಾರ ಪ್ರತಿಭಟನೆ ನಡೆಸಿದರು.

ಶ್ರೀ ಜಯದೇವ ವೃತ್ತದಿಂದ ತಹಶೀಲ್ದಾರ್‌ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಾಲೂಕು ಆಡಳಿತ ಕೂಡಲೇ ತಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದೇ ಹೋದಲ್ಲಿ ಮಾಯಕೊಂಡ ಹೋಬಳಿಯ ಎಲ್ಲಾ ಕಡೆ ತಹಶೀಲ್ದಾರ್‌ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಅರಣ್ಯಭೂಮಿ, ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಸಂಘಟನೆಯ ನೇತೃತ್ವದಲ್ಲಿ ವಿವಿಧ ಹಂತದ ಹಲವಾರು ಹೋರಾಟ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ 1992 ಮತ್ತು 1999 ರಲ್ಲಿ ಬಗರ್‌ ಹುಕುಂ ಸಾಗುವಳಿದಾರರಿಂದ ಹಕ್ಕುಪತ್ರಕ್ಕಾಗಿ ಫಾರಂ ನಂಬರ್‌ 52 ಮತ್ತು ಫಾರಂ ನಂಬರ್‌ 53 ಅರ್ಜಿ ಆಹ್ವಾನಿಸಿತ್ತು. ಅದರಂತೆ ಅನೇಕರು ಸಲ್ಲಿಸಿರುವ ಅರ್ಜಿಗಳನ್ನು ಬಗರ್‌ ಹುಕುಂ ಸಮಿತಿ ಸರಿಯಾಗಿ ನಿರ್ವಹಣೆ ಮಾಡಿಯೇ ಇಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಈಗ ಸರ್ಕಾರ ಫಾರಂ ನಂಬರ್‌ 57 ಆಹ್ವಾನಿಸಿದೆ. ದಾವಣಗೆರೆ ತಾಲೂಕಿನಲ್ಲೇ 2,650 ಅರ್ಜಿಗಳನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಲಾಗಿದೆ. ಸರ್ಕಾರದಿಂದ ಈಗಾಗಲೇ ದಾವಣಗೆರೆ ತಾಲೂಕು ಮತ್ತು ಮಾಯಕೊಂಡ ಕ್ಷೇತ್ರದ ಬಗರ್‌ ಹುಕುಂ ಸಮಿತಿ ಸಹ ರಚನೆಯಾಗಿವೆ. ಅದೇ ರೀತಿ ಇತರೆಡೆಯೂ ಬಗರ್‌ ಹುಕುಂ ಸಮಿತಿ ರಚಿಸಬೇಕು ಹಾಗೂ ಫಾರಂ ನಂ. 52, 53 ಹಾಗೂ 57 ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡುವ ಮೂಲಕ ಭೂಮಿ ಹಂಚಿಕೆ ಹಾಗೂ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಕಂದಾಯ ಇಲಾಖೆ 2000 ಹಾಗೂ 2004ರಲ್ಲಿ ತನ್ನ ವ್ಯಾಪ್ತಿಯಲ್ಲಿನ ಅರಣ್ಯ ಭೂಮಿಯನ್ನು ಸಂಬಂಧಿತ ಇಲಾಖೆಗೆ ವರ್ಗಾಯಿಸಿದೆ. ಅಂತಹ ಸಂದರ್ಭದಲ್ಲಿ ಅರಣ್ಯ ಅತಿಕ್ರಮಣದಾರರ ಅರ್ಜಿ ಪರಿಶೀಲನೆ ಮಾಡುವಾಗ ಯಾವ ವರ್ಷದ ದಾಖಲೆ ಆಧಾರದ ಮೇಲೆ ಭೂಮಿಯನ್ನು ಮಂಜೂರಾತಿ ಮಾಡುತ್ತಿದೆ ಎಂಬುದನ್ನು ಸರ್ಕಾರ, ತಹಶೀಲ್ದಾರ್‌ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಎಲ್ಲಾ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು. ಇಲ್ಲದೇ ಹೋದಲ್ಲಿ ಸಂಘಟನೆ ನೇತೃತ್ವದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆ ರಾಜ್ಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌, ಹೊನ್ನೂರು ಸಿದ್ದವೀರಪ್ಪ, ಗುಮ್ಮನೂರು ಬಸವರಾಜ್‌, ಕೋಲ್ಕುಂಟೆ ಬಸಣ್ಣ, ಕುಕ್ಕುವಾಡ ಪರಮೇಶ್‌, ಕಾಡಜ್ಜಿ ಪ್ರಕಾಶ್‌, ಆಲೂರು ಪರಶುರಾಮ್‌, ಬಾತಿ ಮಂಜಪ್ಪ, ಹುಚ್ಚವ್ವನಹಳ್ಳಿ ಪ್ರಕಾಶ್‌, ಚಿಕ್ಕಬೂದಾಳ್‌ ಭಗತ್‌ಸಿಂಹ, ಹೂವಿನಮಡು ನಾಗರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.