ಅತಿವೃಷ್ಟಿ ಸಂತ್ರಸ್ತರ ನೋವಿಗೆ ಸ್ಪಂದಿಸಿ

ಹಾನಿ ಸಂಭವಿಸಿದ 24 ಗಂಟೆಯೊಳಗೆ ಪರಿಹಾರ ನೀಡಿ

Team Udayavani, Jun 2, 2022, 2:49 PM IST

pain

ದಾವಣಗೆರೆ: ಅತಿವೃಷ್ಟಿ ಸಂದರ್ಭಗಳಲ್ಲಿ ಜೀವಹಾನಿ, ಮಳೆ ಹಾನಿ ಹಾಗೂ ಜಾನುವಾರುಗಳ ಹಾನಿಗೆ ಸಂಬಂಧಿಸಿದಂತೆ ಘಟನೆ ವರದಿಯಾದ 24 ಗಂಟೆಯೊಳಗೆ ಪರಿಹಾರ ನೀಡಿ. ಬಳಿಕ ದಾಖಲೆಗಳನ್ನು ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ನಗರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅವಘಡಗಳು ಸಂಭವಿದ ಸಂದರ್ಭಗಳಲ್ಲಿ ಸಂತ್ರಸ್ತರಿಗೆ ತಕ್ಷಣದ ಪರಿಹಾರದ ಅವಶ್ಯಕತೆ ಇರುತ್ತದೆ. ಹಾಗಾಗಿ ಪರಿಹಾರ ನೀಡುವ ಮೂಲಕ ಅವರ ನೋವಿಗೆ ಸ್ಪಂದಿಸಲು ಮುಖ್ಯಮಂತ್ರಿಯವರು ತಿಳಿಸಿದ್ದು ಅದರಂತೆ ಎಲ್ಲ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದರು.

ಈ ಬಾರಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗುತ್ತಿದ್ದು ಮಳೆಯಿಂದ ಆಗಬಹುದಾದ ಅವಘಡ ಹಾನಿಗಳ ಬಗೆಗೆ ಜಾಗರೂಕರಾಗಿರಬೇಕು. ಹಿಂದಿನ ಮೂರು ವರ್ಷಗಳ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಿದ ಅನುಭವ ನಮ್ಮಲ್ಲಿದೆ ಹಾಗಾಗಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನೆದುರಿಸಲು ಸಿದ್ಧರಾಗಿರಬೇಕು. ಮಳೆ ಹಾನಿ ಪ್ರದೇಶಗಳಲ್ಲಿ ಸ್ಥಾಪಿಸುವ ಕಾಳಜಿ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆಯ ವ್ಯವಸ್ಥೆ ಮಾಡಬೇಕು. ಹಿಂದಿನ ಐದು ವರ್ಷಗಳಲ್ಲಿ ಗ್ರಾಮ ಹಾಗೂ ನಗರಗಳಲ್ಲಿ ನೀರು ತುಂಬಿ ಸಮಸ್ಯೆಯಾಗುತ್ತಿದ್ದ ಪ್ರದೇಶಗಳನ್ನು ಗುರುತಿಸಿ ಸರಿಪಡಿಸಬೇಕು. ನದಿ ಪಾತ್ರದಲ್ಲಿ ಪ್ರತಿ ಮೂರು ಗಂಟೆಗಳಿಗೊಮ್ಮೆ ನೀರಿನ ಮಟ್ಟ ಒಳಹರಿವು ಹಾಗೂ ಹೊರಹರಿವು ಮಾಹಿತಿ ಕಲೆ ಹಾಕಬೇಕು. ಹರಿಹರ ಹಾಗೂ ಹೊನ್ನಾಳಿ ಪಟ್ಟಣದ ಕೆಲ ಪ್ರದೇಶಗಳು ಮುಳುಗಡೆಗೆ ಒಳಗಾಗುವ ಕಡೆಗಳಲ್ಲಿ ಮುಂಜಾಗ್ರತೆಯಿಂದಎಲ್ಲ ಸಿದ್ಧತೆಗಳನ್ನು ‌ಮುಂಚಿತವಾಗಿಯೇ ಮಾಡಿಟ್ಟುಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ನಾಲ್ಕೈದು ಅತಿ ದೊಡ್ಡ ದೊಡ್ಡ ಹಳ್ಳಗಳಿದ್ದು, ಯಾವ ಯಾವ ಹಳ್ಳಗಳು ತುಂಬಿ ಹರಿದರೆ ಎಲ್ಲಿ ಎಲ್ಲಿ ಹಾನಿಯಾಗುತ್ತದೆ ಎಂಬ ನಿಖರವಾದ ಮಾಹಿತಿ ನೀಡಬೇಕು ಹಾಗೂ ಅದರಿಂದ ಸಂಭವಿಸಬಹುದಾದ ತೊಂದರೆಗಳನ್ನು ಗ್ರಹಿಸಿ ಈ ಮುಂಚೆ ಕಾಳಜಿ ಕೇಂದ್ರಗಳನ್ನು ಎಲ್ಲೆಲ್ಲಿ ತೆರೆಯಲಾಗಿತ್ತು ಹಾಗೂ ಈಗ ಎಲ್ಲೆಲ್ಲಿ ಕಾಳಜಿ ಕೇಂದ್ರ ತೆರೆಯಬೇಕು ಎಂಬುದರ ಕಾರ್ಯಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ಕಂದಾಯ ಸಚಿವರ ಆದೇಶದ ಮೇರೆಗೆ ಜಿಲ್ಲೆಯ ಹರಿಹರ ಹಾಗೂ ಹೊನ್ನಾಳಿ ತಾಲೂಕಿನ ಅಗ್ನಿಶಾಮಕ ಇಲಾಖೆಗೆ ಎರಡು ಬೋಟ್‌ ಹಾಗೂ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಎಲ್ಲ ಉಪಕರಣಗಳನ್ನು ತರಿಸುವಂತೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್‌ ಚಿಂತಾಲ್‌ ಮಾಹಿತಿ ನೀಡಿ, 1.36 ಲಕ್ಷ ಹೆಕ್ಟೇರ್‌ಗೆ ಬೇಕಾಗುವ ಮೆಕ್ಕೆಜೋಳ ಬಿತ್ತನೆ ಬೀಜಗಳು ಲಭ್ಯ ಇವೆ. ರೈತರು ಮೆಕ್ಕೆಜೋಳದ ಜೊತೆಗೆ ತೊಗರಿ ಬೆಳೆಯನ್ನು ಅಂತರ ಬೇಸಾಯದಲ್ಲಿ ಬೆಳೆಯಲು ರೈತರಿಗೆ ಮಾಹಿತಿ ನೀಡಲಾಗಿದೆ. ಸೋಯಾಬೀನ್‌ ಬೆಳೆಯಲು ರೈತರನ್ನು ಪ್ರೋತ್ಸಾಹಿಸಲಾಗಿದೆ ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎ. ಚನ್ನಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಬಿ. ಬಸರಗಿ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್‌ ಮುದ್ದಜ್ಜಿ, ಡಿಯುಡಿಸಿ ಅಧಿಕಾರಿ ನಜ್ಮಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌, ಎಲ್ಲ ತಾಲೂಕುಗಳ ತಹಶೀಲ್ದಾರರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕರು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಬೇಕು. ರಸಗೊಬ್ಬರಗಳಿಗೆ ಸರ್ಕಾರ ನಿಯೋಜಿಸಿದ ದರಕ್ಕಿಂತ ಜಾಸ್ತಿ ದರಕ್ಕೆ ಮಾರಿದರೆ ರೈತರಿಂದ ಮಾಹಿತಿ ಪಡೆದು ಮಾರಾಟಗಾರರ ಪರವಾನಗಿ ರದ್ದುಪಡಿಸಲಾಗುವುದು. -ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.