ಕೆರೆ ಸಂಜೀವಿನಿ ಅಡಿ ಕೆರೆಗಳ ಅಭಿವೃದ್ಧಿ


Team Udayavani, Feb 27, 2017, 1:02 PM IST

dvg4.jpg

ದಾವಣಗೆರೆ: ರಾಜ್ಯ ಸರ್ಕಾರದ ಕೆರೆ ಸಂಜೀವಿನಿ ಯೋಜನೆಯಡಿ ಬೆಳವನೂರು, ತುರ್ಚಘಟ್ಟ ಸೇರಿದಂತೆ ಈ ಭಾಗದ ಕೆರೆಗಳ ಅಭಿವೃದ್ಧಿಗೆ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು. ಭಾನುವಾರ ತಾಲೂಕಿನ ಬೆಳವನೂರು ಗ್ರಾಮದ ಕೆರೆ ಹೂಳು ಎತ್ತುವ ಕಾಮಗಾರಿಗೆ ಚಾಲನೆನೀಡಿದ ನಂತರ ಮಾತನಾಡಿದರು.

ಬೆಳವನೂರು ಕೆರೆ 32 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. 12 ಎಕರೆ ಜಾಗ ಒತ್ತುವರಿಮಾಡಲಾಗಿತ್ತು. ಇದೀಗ ರೈತರೇ ಸ್ವತಃ ಕೆರೆ ಒತ್ತುವರಿ ತೆರವುಗೊಳಿಸಿ, ಅಭಿವೃದ್ಧಿಗೆ ಅನುವುಮಾಡಿಕೊಟ್ಟಿದ್ದಾರೆ. ಈಗ 18 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ರೈತರು ಸಹ ಇದಕ್ಕೆ ಸಹಕಾರ ಕೊಡಬೇಕು.

ಕೆರೆಯ ಹೂಳನ್ನು ತಮ್ಮ ತಮ್ಮ ಹೊಲಗಳಿಗೆ ಸಾಗಿಸಿಕೊಳ್ಳುವ ಮೂಲಕ ಕೆರೆ ಹೂಳೆತ್ತುವ ಕೆಲಸ ಪೂರ್ಣಗೊಳ್ಳಲು ನೆರವಾಗಬೇಕು ಎಂದರು. ಕೆರೆಯ ಸಂಪೂರ್ಣ ಅಭಿವೃದ್ಧಿ ಕೈಗೊಳ್ಳುವ ಉದ್ದೇಶ ಸಹ ಇದೆ. 1.5 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೆ ಸರ್ಕಾರ ಸಮ್ಮತಿ ಸೂಚಿಸಿದೆ. ಶೀಘ್ರದಲ್ಲಿಯೇ ಕೆರೆಯ ಸಂಪೂರ್ಣ ಅಭಿವೃದ್ಧಿ ಮಾಡಿ, ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲಾಗುವುದು.

ಇದೇ ಕೆರೆಯಿಂದ ದಾವಣಗೆರೆಯ ಕೆಲ ಭಾಗಗಳಿಗೂ ನೀರು ಒದಗಿಸುವ ಉದ್ದೇಶ ಇದೆ ಎಂದು ತಿಳಿಸಿದರು. ತುರ್ಚಘಟ್ಟ ಕೆರೆ ಅಭಿವೃದ್ಧಿಗೆ 1 ಕೋಟಿ ಬಿಡುಗಡೆ ಮಾಡಲಾಗಿದೆ. 22 ಕೆರೆ ತುಂಬಿಸುವ ಮಾದರಿಯಲ್ಲಿ ಯಾವುದೇ ಕೆರೆ ಅಭಿವೃದ್ಧಿ ಮಾಡಲ್ಲ. ಸ್ವಾಭಾವಿಕವಾಗಿ ನೀರು ಹರಿದುಬಂದು ತುಂಬುವಂತೆ ಕೆರೆಗಳ ಅಭಿವೃದ್ಧಿ ಮಾಡಲಾಗುವುದು.

ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಇದಕ್ಕಾಗಿ  ನಮ್ಮ ಸರ್ಕಾರ ಹಿಂದೆ ಮುಂದೆ ನೋಡದೆ ಅನುದಾನ ನೀಡುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಉಮಾ ರಮೇಶ್‌, ತಾಲೂಕು ಪಂಚಾಯತ್‌ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ,

ಜಿಲ್ಲಾ ಪಂಚಾಯತ್‌ ಸದಸ್ಯ ಜಿ.ಸಿ. ನಿಂಗಪ್ಪ, ತಾಲೂಕು ಪಂಚಾಯತ್‌ ಸದಸ್ಯ ಮಂಜಪ್ಪ, ಬೆಳವನೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಹಾಲಮ್ಮ, ಎಪಿಎಂಸಿ ಸದಸ್ಯ ಈರಣ್ಣ, ಮುಖಂಡರಾದ ಬಸವರಾಜ, ಚಂದ್ರಪ್ಪ, ರತ್ನಬಾಯಿ, ಉಜ್ಜಪ್ಪ, ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕಾಧಿಕಾರಿ ಎಲ್‌.ಎಸ್‌. ಪ್ರಭುದೇವ್‌ ಇತರರು ಈ ವೇಳೆ ಹಾಜರಿದ್ದರು. 

ಟಾಪ್ ನ್ಯೂಸ್

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Putin: ಉಕ್ರೈನ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

Putin: ಉಕ್ರೈನ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

18-bng

Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.