ಎಸ್ಸೆಸ್ಸೆಂ ಹೇಳಿಕೆ ಹಾಸ್ಯಾಸ್ಪದ: ಮೇಯರ್‌

ಬಿಜೆಪಿ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಆಗಿಲ್ಲ ಎಂದಿರುವುದು ಸರಿಯಲ್ಲ

Team Udayavani, May 16, 2022, 3:21 PM IST

mayor

ದಾವಣಗೆರೆ: ಸತತ ಸೋಲಿನಿಂದ ಹತಾಶರಾಗಿರುವ ಮಾಜಿ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ ಬಿಜೆಪಿ ಅಧಿಕಾರಾವಧಿಯಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಆಗಿಲ್ಲ ಎಂದು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ಮೇಯರ್‌ ಜಯಮ್ಮ ಗೋಪಿನಾಯ್ಕ ದೂರಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎಸ್. ಮಲ್ಲಿಕಾರ್ಜುನ್‌ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ತಮ್ಮ ಸಂಸ್ಥೆ, ಮನೆ, ಸಂಬಂಧಿ ಕರ ಆಸ್ತಿ ಇರುವ ಕಡೆ ಕಾಂಕ್ರಿಟೀಕರಣ ಮಾಡಿರುವುದನ್ನೇ ದಾವಣಗೆರೆ ಅಭಿವೃದ್ಧಿ ಎಂದುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು. ಮಲ್ಲಿಕಾರ್ಜುನ್‌ರವರ ಅಧಿಕಾರವಧಿಯಲ್ಲಿ ಯಾವುದೇ ಕಾಮಗಾರಿಗಳಿಗೆ ಟೆಂಡರ್‌ ಕರೆಯದೆ ಒಂದೇ ಸಂಸ್ಥೆಗೆ ನೀಡಿದ್ದಾರೆ. ಅದರಲ್ಲಿ ಎಷ್ಟು ಲಾಭ ಮಾಡಿಕೊಂಡಿರಬಹುದು ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಅದರ ಬಗ್ಗೆ ಮಲ್ಲಿಕಾರ್ಜುನ್‌ ಅವರು ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ವೀಣಾ ನಂಜಪ್ಪ ಮಾತನಾಡಿದ ಅವರು, ನಮ್ಮ ತಂದೆ ಎಸ್‌. ಎ. ರವೀಂದ್ರನಾಥ್‌ ಅವರು ಸಚಿವರಾಗಿದ್ದಾಗ 900 ಕೋಟಿ ಅನುದಾನದಲ್ಲಿ ಭದ್ರಾ ನಾಲಾ ಆಧುನೀಕರಣ ಮಾಡಿರುವುದರಿಂದ ಜಿಲ್ಲೆ ಹಚ್ಚ ಹಸಿರಾಗಿದೆ. ಜಿಲ್ಲಾಧಿಕಾರಿ ಕಚೇರಿ, ದಾವಣಗೆರೆ ವಿಶ್ವವಿದ್ಯಾಲಯ, ಪ್ರಾದೇಶಿಕ ಸಾರಿಗೆ ಕಚೇರಿ ಪ್ರಾರಂಭಕ್ಕೆ ಕಾರಣರಾಗಿದ್ದಾರೆ. ದಾವಣಗೆರೆಯಲ್ಲಿ ನೂರಕ್ಕೂ ಹೆಚ್ಚು ಪಾರ್ಕ್‌ ಗಳಿಗೆ ಬೇಲಿ ಅಳವಡಿಸಿಕೊಳ್ಳುವ ಮೂಲಕ ಒತ್ತುವರಿ ಆಗುವುದನ್ನ ತಪ್ಪಿಸಿದ್ದಾರೆ ಎಂದು ತಿಳಿಸಿದರು.

ಮಾಜಿ ಮೇಯರ್‌ ಎಸ್‌.ಟಿ. ವೀರೇಶ್‌ ಮಾತನಾಡಿ, ಸಂಸದ ಸಿದ್ದೇಶ್ವರ ಮತ್ತು ಶಾಸಕ ರವೀಂದ್ರನಾಥ್‌ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೇಳಲು ಸಾಕಷ್ಟು ದಿನಗಳೇ ಬೇಕು. ಸಂಸದರು, ಶಾಸಕರು ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಲವಾರು ಬಾರಿ ಹೇಳಲಾಗಿದೆ. ಮಲ್ಲಿಕಾರ್ಜುನ್‌ ಅವರು ಚುನಾವಣಾ ಸಂದರ್ಭದಲ್ಲಿ ಮಾತ್ರವೇ ಇಲ್ಲಸಲ್ಲದ ಹೇಳಿಕೆ ನೀಡಿವುದು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಸಂಸದ ಸಿದ್ದೇಶ್ವರ ಅವರು ದಾವಣಗೆರೆ ರೈಲ್ವೆ ನಿಲ್ದಾಣ ವನ್ನು ಒಂದೇ ವರ್ಷದಲ್ಲಿ ಮರು ಅಭಿವೃದ್ಧಿ ಮಾಡುವ ಮೂಲಕ ಒಂದು ಪ್ರವಾಸಿ ತಾಣ ಮಾಡಿದ್ದಾರೆ.ಎಸ್‌ ಟಿಪಿಐ, ಸಿಆರ್‌ ಸಿ ಕೇಂದ್ರ, ಅಂಚೆ ಇಲಾಖೆ ವಿಭಾಗೀಯ ಕಚೇರಿ ತಂದಿದ್ದಾರೆ. ಕೆಲವೇ ದಿನಗಳಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನಡೆಯಲಿದೆ. ಆದಷ್ಟು ಬೇಗ ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಅಶೋಕ ಚಿತ್ರಮಂದಿರದ ಬಳಿ ರೈಲ್ವೆ ಸಮಸ್ಯೆ ಆದಷ್ಟು ಬೇಗ ಬಗೆಹರಿಯಲಿದೆ. ಈಗ ಅಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರದ ರೂಪದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕೆಳ ಸೇತುವೆ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಸಂಸದರು, ಶಾಸಕರ ವಿರುದ್ಧ ಮಾತನಾಡುವಾಗ ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಸುಮ್ಮನೆ ಮಾತನಾಡ ಬಾರದು. ನಾವು ನಮ್ಮ ಸಂಸರು, ಶಾಸಕರು ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಾಖಲೆಯೊಂದಿಗೆ ಬಹಿರಂಗ ಚರ್ಚೆಗೆ ನಾವೆಲ್ಲರೂ ಸಿದ್ಧ ಎಂದು ತಿಳಿಸಿದರು.

ಉಪ ಮೇಯರ್‌ ಗಾಯತ್ರಿ ಬಾಯಿ ಖಂಡೋಜಿರಾವ್‌, ಗೌರಮ್ಮ, ರೇಣುಕಾ ಶ್ರೀನಿವಾಸ್‌, ಎಲ್‌.ಡಿ. ಗೋಣೆಪ್ಪ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಸಾಮಾನ್ಯರು ಮಾತನಾಡಲೇಬಾರದೆ?

ನಾವು ಸಹ ಜನಪ್ರತಿನಿಧಿಗಳು. ಜನರಿಂದ ಆಯ್ಕೆಯಾದಂತಹವರು. ಎಸ್.ಎಸ್. ಮಲ್ಲಿಕಾರ್ಜುನ್‌ ಅವರ ಕಾರ್ಯ ವೈಖರಿ ಬಗ್ಗೆ ಮಾತನಾಡಿದರೆ ನಾಯಿ, ನರಿ… ಎನ್ನುತ್ತಾರೆ. ಜನಸಾಮಾನ್ಯರಾದವರು ಏನು ಮಾತನಾಡಬಾರದೆ, ಏನನ್ನೂ ಕೇಳಬಾರದೆ. ನಮ್ಮ ಮುಖಂಡರ ಬಗ್ಗೆ ದಾಖಲೆಯಿಟ್ಟುಕೊಂಡು ಮಾತನಾಡಲಿ. ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ನಗರಪಾಲಿಕೆ ಸದಸ್ಯ ಆರ್‌. ಶಿವಾನಂದ್‌ ತಿಳಿಸಿದರು.

ಎರಡೂ ಗೆಲ್ಲುತ್ತೇವೆ…

ಮಹಾನಗರ ಪಾಲಿಕೆಯ 27 ಮತ್ತು 38ನೇ ವಾರ್ಡ್ ನ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಬಹಳ ದಿನಗಳಿಂದ ಇದ್ದಂತಹ ರಾಜಕಾಲುವೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಕೆಲಸ ಮಾಡಲಾಗಿದೆ. 6.5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಬಿಜೆಪಿಯ ಅಭಿವೃದ್ಧಿ ಕಾರ್ಯ, ಶ್ರೀನಿವಾಸ್‌ರವರ ಜನಪರ ಕೆಲಸಗಳಿಂದ ಎರಡೂ ವಾರ್ಡ್‌ಗಳಲ್ಲಿ ನಾವೇ ಬಿಜೆಪಿಯವರೇ ಗೆಲ್ಲುತ್ತೇವೆ ಎಂದು ಮಾಜಿ ಮೇಯರ್‌ ಎಸ್‌.ಟಿ. ವೀರೇಶ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.