ಕಾರ್ಯದರ್ಶಿ ಮೇಲೆ ನಡೆಸಿದವರ ಬಂಧಿಸಿ


Team Udayavani, Feb 24, 2017, 12:37 PM IST

dvg4.jpg

ದಾವಣಗೆರೆ: ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗಪ್ಪ ನವರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳು ಗುರುವಾರ ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪಗೆ ಮನವಿ ಸಲ್ಲಿಸಿದರು. 

ತೋರಣಗಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊರ ವಲಯದಲ್ಲಿರುವ ಕುಡಿಯುವ ನೀರಿನ ಘಟಕಕ್ಕೆ ಸಂಪರ್ಕ ಒದಗಿಸಿರುವ ವಿದ್ಯುತ್‌ ತಂತಿ ತಗುಲಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಸುದ್ದಿ ತಿಳಿದ ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗಪ್ಪ ಸ್ಥಳಕ್ಕೆ ತೆರಳಿದ್ದಾಗ 8-10 ಮಂದಿ  ಕಿಡಿಗೇಡಿಗಳು ಏಕಾಏಕಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಕಿವಿ, ತಲೆಗೆ ತೀವ್ರ ಹೊಡೆತ  ಬಿದ್ದಿದೆ. ಅನೇಕ ಕಡೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ ಎಂದು ಮನವಿಯಲ್ಲಿ ದೂರಿದ್ದಾರೆ. ವಿದ್ಯುತ್‌ ತಂತಿ ತಗುಲಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದು ನಿಜಕ್ಕೂ  ವಿಷಾದನೀಯ ಸಂಗತಿ. ಆದರೆ, ಘಟನಾ ಸ್ಥಳಕ್ಕೆ ತೆರಳಿದ್ದಂತಹ ಗ್ರಾಮ ಪಂಚಾಯತ್‌ ಕಾರ್ಯದರ್ಶಿಗೆ ಮಾತನಾಡಲಿಕ್ಕೂ ಅವಕಾಶ ನೀಡದೆ ಏಕಾಏಕಿ ಅಮಾನವೀಯವಾಗಿ  ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ.

ಕೆಲವರು ಈ ರೀತಿ ಹಲ್ಲೆ ನಡೆಸಿದ್ದು ದುಷ್ಕೃತ್ಯದ ಸಂಚು ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಹಲ್ಲೆ ನಡೆಸಿದವರ ವಿರುದ್ಧ  ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆ ಮರುಕಳಿಸದಂತೆ ನಿಗಾವಹಿಸಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಅಧ್ಯಕ್ಷ ಎಸ್‌. ಎಂ. ಸಂಗಮೇಶ್‌, ವಿವೇಕಾನಂದ, ಎಂ.ಆರ್‌. ಸಿದ್ದಪ್ಪ, ಐ.ಸಿ. ವಿದ್ಯಾವತಿ, ಪ್ರೇಮ, ಮಾಳಮ್ಮ, ಮಮತಾ, ಶಿವಕುಮಾರ್‌, ಅಭಿಜಿತ್‌, ಇಶ್ರತ್‌, ಸುನೀಲ್‌ ಇತರರು ಮನವಿ ಸಲ್ಲಿಸಿದ ಸಂದರ್ಭದಲ್ಲಿದ್ದರು. 

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basvaraj

CM Aspirant: ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.