ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪಾದಯಾತ್ರೆ


Team Udayavani, Dec 19, 2021, 7:32 PM IST

shivamogga news

ಶಿವಮೊಗ್ಗ: ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನಾಕಾರರು ಬಿ.ಎಚ್‌. ರಸ್ತೆಯಲ್ಲಿರುವ ಶಿವಪ್ಪ ನಾಯಕಪ್ರತಿಮೆಯಿಂದ ಮೆರವಣಿಗೆ ಆರಂಭಿಸಿ ಎಎ ಸರ್ಕಲ್‌, ಗೋಪಿಸರ್ಕಲ್‌ ಮೂಲಕ ಮಹಾವೀರ ಸರ್ಕಲ್‌ ತಲುಪಿ ನಂತರಪ್ರತಿಭಟನಾ ಸಭೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವೈಜ್ಞಾನಿಕ ನೀತಿ ಜಾರಿಗೆತಂದಿರುವುದರಿಂದ ತೈಲ, ಗ್ಯಾಸ್‌ ಸಿಲಿಂಡರ್‌, ಅಗತ್ಯ ದಿನಸಿವಸ್ತುಗಳ ಬೆಲೆ ಗಗನಕ್ಕೇರಿದೆ.

ರೈತರ ಪಂಪ್‌ ಸೆಟ್‌ಗೂ ಕೂಡವಿದ್ಯುತ್‌ ಇಲ್ಲವಾಗಿದೆ. ಜನ ಸಾಮಾನ್ಯರು ಜೀವನ ನಡೆಸುವುದೇಕಷ್ಟವಾಗಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿರುವುದರಿಂದದಿನನಿತ್ಯದ ಬದುಕಿನ ಮೇಲೂ ಕೂಡ ಪರಿಣಾಮ ಬೀರುತ್ತದೆ.ಬಡವರ ಬದುಕು ದಿನದಿಂದ ದಿನಕ್ಕೆ ದುಸ್ತರಗೊಂಡಿದೆ ಎಂದುಪ್ರತಿಭಟನಾಕಾರರು ದೂರಿದರು.ಕೇವಲ 15 ದಿನದಲ್ಲಿ ಅಡುಗೆ ಅನಿಲ ಸಿಲಿಂಡರ್‌ ದರ 103ರೂ. ಏರಿಕೆಯಾಗಿದೆ. ಸಬ್ಸಿಡಿ ಕೂಡ ಇಲ್ಲವಾಗಿದೆ.

ವಿದ್ಯುತ್‌ ದರಅಗತ್ಯಕ್ಕಿಂತ ಹೆಚ್ಚಾಗಿದೆ. ಅಡುಗೆ ಎಣ್ಣೆ, ಬೇಳೆ, ಕಾಳು, ತರಕಾರಿಇವೆಲ್ಲವುಗಳ ಬೆಲೆ ಏರಿಕೆಯಾಗಿದ್ದು, ಬಡವರು ಒಪ್ಪೊತ್ತಿನ ಊಟಮಾಡುತ್ತಿದ್ದಾರೆ. ಇಷ್ಟಾದರೂ ಬಿಜೆಪಿ ಸರ್ಕಾರ ತಲೆಕೆಡಿಸಿಕೊಂಡಂತೆಕಾಣುತ್ತಿಲ್ಲ. ಭಾವನಾತ್ಮಕ ವಿಚಾರಗಳ ಮೂಲಕ ಜನರ ದಿಕ್ಕುತಪ್ಪಿಸುವ ಕಾರ್ಯ ಮಾಡುತ್ತಲೇ ಇದೆ. ರೈತರಂತೂ ಕಂಗಾಲಾಗಿಹೋಗಿದ್ದಾರೆ. ಬೆಳೆ ಹಾನಿ ಪರಿಹಾರವೂ ಇಲ್ಲ. ವೈಜ್ಞಾನಿಕ ಬೆಲೆಯೂಇಲ್ಲವಾಗಿದೆ. ಅತಿ ಅವಶ್ಯಕವಾಗಿರುವ ಬಟ್ಟೆಯ ಮೇಲೂ ಜಿ.ಎಸ್‌.ಟಿ. ವಿಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಬೆಲೆನಿಯಂತ್ರಣದಲ್ಲಿಡಬೇಕು. ವಿದ್ಯುತ್‌ ಕಾಂಯ್ದೆ ತಿದ್ದುಪಡಿಮಾಡಬೇಕು. ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು. ರೈತರಪಂಪ್‌ಸೆಟ್‌ ಗೆ ವಿದ್ಯುತ್‌ ನೀಡಬೇಕು. ಯಶಸ್ವಿನಿ ಯೋಜನೆಪುನಾರಂಭಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ಮುಂದಿನ ದಿನಗಳಲ್ಲಿತೀವ್ರ ಹೋರಾಟ ನಡೆಸಲಿದೆ. ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ವರಿಷ್ಠ ರಾಹುಲ್‌ ಗಾಂಧಿ ಅಮೇಥಿಯಲ್ಲಿ ಕೈಗೊಂಡಿರುವಪಾದಯಾತ್ರೆ ಬೆಂಬಲಿಸಿ ಈ ಪ್ರತಿಭಟನೆ ನಡೆಸಲಾಗಿದೆ ಎಂದುಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌, ವಿಜಯಕುಮಾರ್‌,ಎಚ್‌.ಸಿ. ಯೋಗೀಶ್‌, ರಾಮೇಗೌಡ, ಚಂದ್ರಶೇಖರ್‌,ಚಂದ್ರಭೂಪಾಲ್‌, ಸಿ.ಜಿ. ಮಧುಸೂದನ್‌, ಕೆ. ಚೇತನ್‌, ರೇಖಾರಂಗನಾಥ್‌, ಎಚ್‌.ಪಿ. ಗಿರೀಶ್‌, ಇಕ್ಕೇರಿ ರಮೇಶ್‌, ಜಿ.ಡಿ.ಮಂಜುನಾಥ್‌, ಸೌಗಂಧಿಕಾ, ವಿಶ್ವನಾಥ್‌ ಕಾಶಿ, ರಮೇಶ್‌ ಹೆಗ್ಡೆ,ನಾಜೀಮಾ, ಕವಿತಾ, ಮೊದಲಾದವರಿದ್ದರು.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.