ಸಿದ್ದು ಹೊಗಳಿಕೆ ಜತೆಗೇ ನಾಯಕರಿಂದ ಸಾಮೂಹಿಕ ನಾಯಕತ್ವ ಜಪ


Team Udayavani, Aug 4, 2022, 7:35 AM IST

ಸಿದ್ದು ಹೊಗಳಿಕೆ ಜತೆಗೇ ನಾಯಕರಿಂದ ಸಾಮೂಹಿಕ ನಾಯಕತ್ವ ಜಪ

ದಾವಣಗೆರೆ: ಬಹುನಿರೀಕ್ಷಿತ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕರು ಸಿದ್ದರಾಮಯ್ಯ ಗುಣಗಾನ ಮಾಡಿದರೂ ಸಾಮೂಹಿಕ ನಾಯಕತ್ವ ಜಪ ಮಾಡಿ ಜಾಣ್ಮೆ ನಡೆ ಅನುಸರಿಸಿದರು.

ಸಿದ್ದರಾಮಯ್ಯರನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವುದೇ ಸಮಾವೇಶದ ಉದ್ದೇಶ ಎಂಬ ಮಾತು ಕೇಳಿಬಂದಿತ್ತು.

ಸಮಾವೇಶವು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಬಿರುಕು ಮೂಡಿಸಿ ಪಕ್ಷದಲ್ಲಿ ಬಣ ರಾಜಕೀಯ ಜೋರಾಗಲಿದೆ ಎಂಬ ಆತಂಕವು ನಾಯಕರ ಒಗ್ಗಟ್ಟು ಪ್ರದರ್ಶನದಿಂದ ದೂರವಾದಂತಾಗಿದೆ.

ಖುದ್ದು ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಎಂದರೆ ನನಗೆ ಇಷ್ಟ. ಅವರ ವಿಚಾರಧಾರೆ, ಬಡವರು ಹಾಗೂ ದುರ್ಬಲರ ಪರ ಅವರ ಬದ್ಧತೆ ಮುಖ್ಯಮಂತ್ರಿಯಾಗಿ ಅವರು ರೂಪಿಸಿದ ಕಾರ್ಯಕ್ರಮಗಳು ಇಷ್ಟ .
ಅವರೊಬ್ಬ ಮಾಸ್‌ ಲೀಡರ್‌ ಎಂದು ಹೇಳಿದರಾದರೂ, ಡಿ.ಕೆ.ಶಿವಕುಮಾರ್‌ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದರು.

ಸಾಮೂಹಿಕ ನಾಯಕತ್ವದಡಿ ಬಿಜೆಪಿ -ಆರೆಸ್ಸೆಸ್‌ ವಿರುದ್ಧ ಹೋರಾಟ ಮಾಡಿ ಕರ್ನಾಟಕದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ತನ್ನಿ ಎಂದು ಬಹಿರಂಗ ವಾಗಿಯೇ ಹೇಳುವ ಮೂಲಕ ಡಿ.ಕೆ.ಶಿವಕುಮಾರ್‌ ಸೇರಿ ಹಲವರಲ್ಲಿದ್ದ ಆತಂಕವನ್ನೂ ದೂರ ಮಾಡಿದರು.

ಸಿದ್ದರಾಮಯ್ಯ ಅವರು ಕೂಡ, “ನನ್ನ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಭಿನ್ನಾಭಿಪ್ರಾಯವಿದೆ. ಸಮಾವೇಶಕ್ಕೆ ಅವರ ವಿರೋಧವಿತ್ತು ಎಂಬುದೆಲ್ಲ ಬಿಜೆಪಿ ಸೃಷ್ಟಿ. ನಮ್ಮಲ್ಲಿ ಯಾವುದೇ ಬಿರುಕು ಇಲ್ಲ. ನಮ್ಮ ಗುರಿ ಪಕ್ಷ ಅಧಿಕಾರಕ್ಕೆ ತರುವುದು’ ಎಂದು ಹೇಳಿದ್ದು, ಇದೇ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರಿಗೆ ರೇಷ್ಮೆ ಶಾಲು ಹೊದಿಸಿ, ಇಂದಿರಾಗಾಂಧಿಯ ಭಾವಚಿತ್ರ ಸ್ಮರಣಿಕೆ ಕೊಟ್ಟು ಆಲಿಂಗಿಸಿ ಕೊಂಡಿದ್ದು ಕಾರ್ಯಕರ್ತರಲ್ಲಿದ್ದ ಗೊಂದಲ ನಿವಾರಿಸುವ ಪ್ರಯತ್ನ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಇಬ್ಬರ ಅಪ್ಪುಗೆ ನೋಡಿ ನನಗೆ ಸಂತಸವಾಗಿದೆ ಎಂದು ರಾಹುಲ್‌ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್‌ ಡೈನಮಿಕ್‌ ಅಧ್ಯಕ್ಷರು ಎಂದು ಕೆ.ಸಿ. ವೇಣುಗೋಪಾಲ್‌ ಶಹಬ್ಟಾಸ್‌ಗಿರಿ ನೀಡುವ ಹೇಳುವ ಮೂಲಕ ವೇದಿಕೆಯಲ್ಲೇ “ಇಬ್ಬರೂ ಪಕ್ಷಕ್ಕೆ ಶಕ್ತಿ’ ಎಂಬ ಸಂದೇಶ ರವಾನೆಯಾಗು ವಂತೆ ನೋಡಿಕೊಂಡರು ಎಂದೇ ಹೇಳಲಾಗುತ್ತಿದೆ.

ಬಿ.ಕೆ.ಹರಿಪ್ರಸಾದ್‌, ಡಾ| ಜಿ.ಪರಮೇಶ್ವರ್‌, ಎಂ.ಬಿ. ಪಾಟೀಲ್‌ ಮಾತನಾಡುವ ಸಂದರ್ಭದಲ್ಲೂ ಸಿದ್ದರಾಮಯ್ಯ ಅವರ ಅವಧಿಯ ಯೋಜನೆಗಳು ಹಾಗೂ ಅದರಿಂದ ಆದ ಅನುಕೂಲದ ಬಗ್ಗೆ ಹೇಳುತ್ತಾ, ಅವರ ಮಾರ್ಗದರ್ಶನದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ತರೋಣ ಎಂದು ಪ್ರತಿಪಾದಿಸಿದರು.

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಪದೇಪದೆ ಹೇಳುತ್ತಿದ್ದ ಮಾಜಿ ಸಚಿವ ಜಮೀರ್‌ ಅಹಮದ್‌ ಅವರು ಅಪ್ಪಿ ತಪ್ಪಿಯೂ ಭಾಷಣದ ವೇಳೆ ಆ ವಿಚಾರ ಪ್ರಸ್ತಾವಿಸಲಿಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಶಕ್ತಿ, 10 ಲಕ್ಷ ಜನ ಇಲ್ಲಿ ಬಂದಿರುವುದೇ ಅವರ ಜನಪ್ರಿಯತೆ ಸಾಕ್ಷಿ ಎಂದಷ್ಟೇ ಹೇಳಿದರು. ಇದು ಹೈಕಮಾಂಡ್‌ನ‌ ತಾಕೀತಿನ ಎಫೆಕ್ಟ್ ಎಂದೂ ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಪ್ರತಿ ಹಂತದಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಎಂದೇ ಹೇಳಿದ್ದು ಕೂಡ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದು ಕೊಟ್ಟಿದೆ. ಒಟ್ಟಾರೆ, ನಮ್ಮ ನಿರೀಕ್ಷೆಯಂತೆ ಸಿದ್ದರಾಮಯ್ಯ ಕಾರ್ಯಕ್ರಮ ಕಾಂಗ್ರೆಸ್‌ಗೆ ರಾಜಕೀಯವಾಗಿ ಲಾಭ ತಂದುಕೊಡುವ ಸಮಾವೇಶವಾಯಿತು ಎಂದು ಹಿರಿಯ ನಾಯಕರೊಬ್ಬರು ಹೇಳುತ್ತಾರೆ.

ಸಮಾವೇಶದ ಮತ್ತೊಂದು ಪ್ರಮುಖ ಅಂಶ ಎಂದರೆ, ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಿ ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆ ಕೊನೆಯದಾದರೂ ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ ಎಂಬ ಸಂದೇಶ ರವಾನಿಸಿದರು.

ಜನಸ್ತೋಮ ಕಂಡು ಸಂತಸ
ಸಮಾವೇಶದ ಬಗ್ಗೆ ದೂರುಗಳು ಹೈಕಮಾಂಡ್‌ವರೆಗೂ ತಲುಪಿದ್ದರಿಂದ ವರಿಷ್ಠರಿಗೂ ಚುನಾವಣೆ ಹೊಸ್ತಿಲಲ್ಲಿ ಏನಾಗುವುದೋ ಎಂಬ ಆತಂಕ ಇತ್ತಾದರೂ ಜನಸ್ತೋಮ ಕಂಡು ರಾಹುಲ್‌ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್‌ ಸಂತಸಗೊಂಡಿದ್ದಾರೆ. ವೇದಿಕೆಯಲ್ಲಿ ಮುಖಂಡರ ಭಾಷಣದ ವೇಳೆಯೂ ರಾಹುಲ್‌ ಹಾಗೂ ಕೆ.ಸಿ.ವೇಣುಗೋಪಾಲ್‌ ಅವರು ಕೃಷ್ಣ ಬೈರೇ ಗೌಡ, ಸತೀಶ ಜಾರಕಿಹೊಳಿ, ಎಸ್‌.ಎಸ್‌. ಮಲ್ಲಿ ಕಾರ್ಜುನ ಅವರಿಂದ ಕೆಲವು ಮಾಹಿತಿ ಪಡೆದುಕೊಂಡರು. ಎಲ್ಲರೂ ಸಾಮೂಹಿಕ ನಾಯಕತ್ವದಡಿ ಚುನಾವಣೆಗೆ ಹೋದರೆ ಪಕ್ಷಕ್ಕೆ ಲಾಭ ಎಂದೇ ಎಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

– ಎಸ್‌.ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.