ಬಕ್ರೀದ್‌ ಆಚರಣೆಯಲ್ಲಿರಲಿ ಸಾಮಾಜಿಕ ಅಂತರ


Team Udayavani, Jul 29, 2020, 2:54 PM IST

ಬಕ್ರೀದ್‌ ಆಚರಣೆಯಲ್ಲಿರಲಿ ಸಾಮಾಜಿಕ ಅಂತರ

ದಾವಣಗೆರೆ: ಮುಂದಿನ ದಿನಗಳಲ್ಲಿ ಕೋವಿಡ್ ಉಲ್ಬಣವಾಗಿ ಕಠೊರವಾಗಿರಬಹುದಾದ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಗಳ ಅನ್ವಯವೇ ಸಾಮಾಜಿಕ ಅಂತರದಲ್ಲಿ ಬಕ್ರೀದ್‌ ಆಚರಣೆ ನಡೆಸಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಸೂಚನೆ ನೀಡಿದ್ದಾರೆ.

ಬಕ್ರಿದ್‌ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಶಾಂತಿಯುತವಾಗಿ ಬಕ್ರೀದ್‌ ಆಚರಿಸಬೇಕು ಎಂದು ಮನವಿ ಮಾಡಿದರು.

ಕೋವಿಡ್ ಸೋಂಕಿಗೆ ಚಿಕಿತ್ಸೆ ನೀಡುವ ವೈದ್ಯರಲ್ಲೇ ಈಗ ಸೋಂಕು ಕಾಣಿಸಿಕೊಂಡಿದೆ. ಎಲ್ಲ ಕಡೆಗಳಲ್ಲೂ ಕೋವಿಡ್ ಹರಡಿರುವುದರಿಂದ ಹೊರಗಿನಿಂದಲೂ ವೈದ್ಯರನ್ನು ಕರೆಸಲಾಗದು. ಕೋವಿಡ್ ಗೆ ಚಿಕಿತ್ಸೆ ನೀಡುವುದು ಹೇಗೆ ಎಂಬ ಗಂಭೀರ ಪ್ರಶ್ನೆ ಕಾಡುತ್ತದೆ. ಹಾಗಾಗಿ ಎಲ್ಲರೂ ಸೋಂಕಿನ ತೀವ್ರತೆ ಸರಿಯಾಗಿ ಅರಿತು ವೈಯಕ್ತಿಕ, ಸಾಮೂಹಿಕ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ಮತ್ತು ಗಮನ ನೀಡಬೇಕು ಎಂದರು.

ಇತ್ತೀಚೆಗಷ್ಟೇ ಗ್ರಾಮಾಂತರದಲ್ಲಿ ಏಳು ಹಸುಗಳ ಕಳ್ಳ ಸಾಗಣೆ ಮಾಡುತ್ತಿದ್ದುದು ಪತ್ತೆಯಾಗಿದೆ. ಇಂತಹ ಪ್ರಕರಣ ತಡೆಯಲು 20 ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗುವುದು. ಸರ್ಕಾರದ ಆದೇಶದ ಅನ್ವಯ ಒಂಟೆ ಮಾಂಸ ಸಹ ನಿಷೇಧಿಸಲಾಗಿದೆ. ಈ ಎಲ್ಲ ಕ್ರಮಗಳಿಗೆ ಸಹಕಾರ ಬೇಕು. ಸರ್ಕಾರ ಬಕ್ರೀದ್‌ಗೆ ವಿಧಿಸಿರುವ ನಿರ್ಬಂಧಗಳನ್ನು ಮೌಲ್ವಿಗಳ ಮೂಲಕ ವಿಡಿಯೋ ಮಾಡಿಸಿ ಸಮುದಾಯಕ್ಕೆ ತಲುಪಿಸಬೇಕು. ಮಸೀದಿಗಳಿಂದ ಸಾಮಾಜಿಕ ಅಂತರಕ್ಕಾಗಿ ಸ್ವಯಂಸೇವಕರನ್ನು ನೇಮಿಸುವಂತೆ ತಿಳಿಸಿದರು.

ಮುಸ್ಲಿಂ ಸಮಾಜದ ಮುಖಂಡ ಸಾದಿಕ್‌ ಪೈಲ್ವಾನ್‌ ಮಾತನಾಡಿ, ರಂಜಾನ್‌ ಸಮಯದಲ್ಲಿ ಶೇ. 85ರಷ್ಟು ಜನರು ಮನೆಯಲ್ಲೇ ನಮಾಜ್‌ ಮಾಡಿದ್ದರು. ಅದೇ ರೀತಿ ಬಕ್ರೀದ್‌ ಆಚರಣೆಗೆ ಸಹಕರಿಸುತ್ತೇವೆ ಎಂದರು. ರಜ್ವಿ ಖಾನ್‌ ಮಾತನಾಡಿ, ಸಂಪ್ರದಾಯ ಹಾಗೂ ಸಂವಿಧಾನ ಎರಡರ ಉಲ್ಲಂಘನೆಯಾಗದ ರೀತಿಯಲ್ಲಿ ಹಬ್ಬದ ಆಚರಣೆ ಮಾಡಬೇಕಿದೆ ಎಂದು ಹೇಳಿದರು.

ಜೆಡಿಎಸ್‌ ಮುಖಂಡ ಜೆ. ಅಮಾನುಲ್ಲಾ ಖಾನ್‌ ಮಾತನಾಡಿ, ಕೊರೊನಾ ಈಗ ಸಮುದಾಯ ಹಂತಕ್ಕೆ ಕಾಲಿಟ್ಟಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ. ಸರ್ಕಾರ ನಿಯಮ ರೂಪಿಸಿದೆ ಎಂಬುದಕ್ಕಿಂತ ಹೆಚ್ಚಾಗಿ ಸುರಕ್ಷತೆಗಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಸಿರಾಜ್‌ ಮಹಮ್ಮದ್‌, ಬಕ್ರೀದ್‌ ಸಂದರ್ಭದಲ್ಲಿ ಮೂರು ದಿನಗಳ ಕಾಲ ಮಸೀದಿಯ ಸುತ್ತ ಸ್ವಚ್ಛತೆಗೆ ಕ್ರಮ ತೆಗೆದುಕೊಳ್ಳಬೇಕೆಂದರು. ಪಾಲಿಕೆ ಮಾಜಿ ಸದಸ್ಯ ಎಚ್‌.ಜಿ. ಆವರಗೆರೆ ಉಮೇಶ್‌ ಎಎಸ್ಪಿ ಎಂ. ರಾಜೀವ್‌ ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.