ಮೃದು ಧೋರಣೆಯಿಂದ ಕನ್ನಡ ಭಾಷೆಗೆ ಧಕ್ಕೆ
Team Udayavani, Feb 24, 2017, 12:44 PM IST
ಹೊನ್ನಾಳಿ: ದತ್ತಿ ಉಪನ್ಯಾಸಗಳ ಮೂಲಕ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕನ್ನಡ ಸಾಹಿತ್ಯದ ಬಗ್ಗೆ ಒಲವು ಮೂಡಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಕತ್ತಿಗೆ ಗಂಗಾಧರಪ್ಪ ಹೇಳಿದರು.
ತಾಲೂಕಿನ ಕತ್ತಿಗೆ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡ ತಗ್ಗಿಹಳ್ಳಿ ನಾಗಮ್ಮ ಅಂಗಡಿ ಕೆಂಚಪ್ಪ, ಎಚ್.ಪಿ. ಪ್ರಭಾವತಿ ಹಾಗೂ ಬೋರ್ಪಾಯಿಂಟ್ ಬೀರಪ್ಪ ಸರೋಜಮ್ಮ ದತ್ತಿ ಉಪನ್ಯಾಸ ಮತ್ತು 2016-17ನೇ ಸಾಲಿನ ದತ್ತಿ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ನಾಡು-ನುಡಿಯ ಮೇಲೆ ಅನಾದಿ ಕಾಲದಿಂದಲೂ ಆಕ್ರಮಣ ನಡೆಯುತ್ತಿದೆ. ನಾಡಿನ ವಿವಿಧ ಪ್ರಾಂತ್ಯಗಳಲ್ಲಿ ಕನ್ನಡ ಭಾಷೆಗೆ ಆತಂಕ ಎದುರಾಗಿದೆ. ಕನ್ನಡಿಗರ ಮೃದು ಧೋರಣೆಯಿಂದ ಕನ್ನಡ ಭಾಷೆಗೆ ಧಕ್ಕೆ ಉಂಟಾಗಿದೆ. ಇದನ್ನು ಸಮರ್ಥವಾಗಿ ಎದುರಿಸಬೇಕು ಎಂದು ತಿಳಿಸಿದರು.
ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ. ತೀರ್ಥಲಿಂಗಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆಗೆ ಹಿಂದೆಂದಿಗಿಂತ ಇಂದು ಹೆಚ್ಚಿನ ಆತಂಕ ಎದುರಾಗಿದೆ. ಇದನ್ನು ಎದುರಿಸಲು ನಾವೆಲ್ಲರೂ ಸಿದ್ಧರಾಗಬೇಕು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕುರುಬರ ಇತಿಹಾಸ ಎಂಬ ವಿಷಯದ ಬಗ್ಗೆ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಎಸ್. ರೇವಣಪ್ಪ ಮತ್ತು ಕನಕದಾಸರು ಮತ್ತು ಅವರ ಸಾಹಿತ್ಯ-ಸಂದೇಶ ಎಂಬ ವಿಷಯದ ಬಗ್ಗೆ ಸಾಹಿತಿ ರಾಮಗಿರಿ ಎಸ್. ಕರಿಸಿದಪ್ಪ ಕುಂಬಾರ್ ಉಪನ್ಯಾಸ ನೀಡಿದರು. ಕತ್ತಿಗೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜೆ. ಹುಚ್ಚಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕತ್ತಿಗೆ ಗ್ರಾಮದ ಬಿ. ರುದ್ರಮ್ಮ ಮತ್ತು ಬಿ. ಜಯಮ್ಮ ಸೋಬಾನೆ ಪದ ಹಾಡಿದರು.
ಎಸ್ಡಿಎಂಸಿ ಅಧ್ಯಕ್ಷ ಕೆ.ಪಿ. ಗಂಗನಗೌಡ, ಕಸಾಪ ಉಪಾಧ್ಯಕ್ಷ ಜಿ. ಶಂಕರಪ್ಪ, ಕಾರ್ಯದರ್ಶಿ ಕೆ. ಶೇಖರಪ್ಪ, ಚುಟುಕು ಸಾಹಿತಿ ಮತ್ತು ಕಸಾಪ ಗೌರವ ಸದಸ್ಯ ಬಿ. ತಿಮ್ಮನಗೌಡ, ಮುಖಂಡರಾದ ಜಿ. ಮಹೇಶ್ವರಪ್ಪ, ಎಸ್. ನಾಗರಾಜ್, ಶಿಕ್ಷಕರಾದ ಕೆ.ಎಸ್. ಪರಮೇಶ್ವರಪ್ಪ, ಪ್ರೇಮಾಬಾಯಿ, ರಾಜಶೇಖರ್, ಮಲ್ಲಪ್ಪ, ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Aspirant: ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ
High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್
Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ
SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.