ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಕೈ ಜೋಡಿಸಿ
Team Udayavani, Mar 11, 2017, 1:13 PM IST
ಹೊನ್ನಾಳಿ: 2017-18 ನೇ ಸಾಲಿನ ಪಪಂ ಬಜೆಟ್ನಲ್ಲಿ 25,03,943 ರೂ. ಉಳಿತಾಯ ಬಜೆಟ್ ಮಂಡನೆ ಮಾಡಲಾಗಿದ್ದು, ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ಸದಸ್ಯರು ಕೈಜೋಡಿಸಬೇಕು ಎಂದು ಪಪಂ ಅಧ್ಯಕ್ಷೆ ಶ್ರೀದೇವಿ ಧರ್ಮಪ್ಪ ಹೇಳಿದರು. ಪ್ರಥಮ ಬಾರಿಗೆ ತುಂಗಭದ್ರಾ ನದಿ ತಟದಲ್ಲಿರುವ ನೀರು ಸರಬರಾಜು ಕೇಂದ್ರದ ಅವರಣದಲ್ಲಿ 2017-18ರ ಪಪಂ ಬಜೆಟ್ ಮಂಡಿಸಿ ಅವರು ಮಾತನಾಡಿದರು.
ಆರಂಭಿಕ ಶಿಲ್ಕು 26,14,152 ರೂ., ವಿವಿಧ ಬಾಬಿ¤ನ ಜಮೆಗಳು 8,71,07,000 ರೂ. ಇದ್ದು ಅಂದಾಜು ಖರ್ಚು 8,72,17,209 ರೂ. ಇರುತ್ತದೆ ಎಂದು ತಿಳಿಸಿದರು. ಪಟ್ಟಣದ ಅಭಿವೃದ್ಧಿಗಾಗಿ ಎಲ್ಲ ಕ್ಷೇತ್ರಗಳಿಗೆ ಗಮನ ಹರಿಸಿ ಅನುದಾನದ ಹಂಚಿಕೆ ಮಾಡಲಾಗಿದೆ. ಪಟ್ಟಣದಲ್ಲಿ ನಡೆಯುವ ಕಾಮಗಾರಿಗಳು ಕಳಪೆ ಇಲ್ಲದಂತೆ ನಡೆಯಬೇಕು.
ಜನರಿಂದ ಆಯ್ಕೆಯಾದ ನಾವುಗಳು ಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.ವಿರೋಧ ಪಕ್ಷದ ಸದಸ್ಯ ಪ್ರಶಾಂತ್ ಮಾತನಾಡಿ, ಬಜೆಟ್ನಲ್ಲಿ ಅಂಗನವಾಡಿ, ಶಾಲಾ ಕಟ್ಟಡಗಳ ಬಗ್ಗೆ ಮತ್ತು ಮಾಜಿ ಸೈನಿಕರ ಹಿತ ಕಾಪಾಡುವ ಬಗ್ಗೆ ಅನುದಾನ ಮೀಸಲಿಡಲಾಗಿಲ್ಲ ಎಂದು ಟೀಕಿಸಿದರು. ಸದಸ್ಯ ಕೆ.ಪಿ. ಕುಬೇಂದ್ರಪ್ಪ ಮಾತನಾಡಿ, ಪಟ್ಟಣದಲ್ಲಿ ರಸ್ತೆಗಳೆಲ್ಲ ಹಾಳಾಗಿ ಹೋಗಿದ್ದು ತಕ್ಷಣದ ದುರಸ್ತಿಗೆ ಬಜೆಟ್ನಲ್ಲಿ ವಿಶೇಷ ಅನುದಾನ ತೆಗೆದಿಲ್ಲ.
ಪಟ್ಟಣದಲ್ಲಿ ಯಾವ ಕೇರಿಯಲ್ಲಿಯೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿರುವುದಿಲ್ಲ. ಬಜೆಟ್ ಮಂಡನೆಗೂ ಮುನ್ನ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಪದಾಧಿಧಿಕಾರಿಗಳು ಹಾಗೂ ಮುಖಂಡರನ್ನು ಕರೆದು ಪೂರ್ವಭಾವಿ ಸಭೆ ಮಾಡಿ ಸಲಹೆ ಸೂಚನೆಗಳನ್ನು ಪಡೆಯಬೇಕಿತ್ತು ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆಡಳಿತ ಪಕ್ಷದ ಸದಸ್ಯಎಚ್.ಬಿ.ಅಣ್ಣಪ್ಪ, ಮುಂದಿನ ದಿನಗಳಲ್ಲಿ ಇತರೆ ಅನುದಾನವನ್ನು ಬಳಸಿಕೊಂಡು ರಸ್ತೆ ಅಭಿವೃದ್ಧಿ ಸೇರಿದಂತೆ, ಇತರ ಕಾಮಗಾರಿಗಳಿಗೆ ಗಮನ ನೀಡಲಾಗುವುದು ಎಂದು ಹೇಳಿದರು. ಪಪಂ ಮುಖ್ಯಾಧಿಕಾರಿ ಎಸ್.ಆರ್. ವೀರಭದ್ರಯ್ಯ ಮಾತನಾಡಿ, ಬಜೆಟ್ ಮಂಡನೆಯ ಪೂರ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ಮಾಡಲಾಗಿದೆ.
ಪಟ್ಟಣಕ್ಕೆ ಬೇಕಾಗಿರುವಮುಕ್ತಿವಾಹಿನಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈಗ ಸದಸ್ಯರು ಕೇಳಿರುವ ಎಲ್ಲ ಅಂಶಗಳ ಬಗ್ಗೆ ಗಮನನೀಡಲಾಗುವುದು ಎಂದು ಹೇಳಿದರು. ಸದಸ್ಯ ವಿಜೇಂದ್ರಪ್ಪ ಮಾತನಾಡಿ, ಶಾಸಕ ಡಿ.ಜಿ. ಶಾಂತನಗೌಡ ಈಗಾಗಲೇ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದಾರೆ.
ಮುಂದಿನ ದಿನಗಳಲ್ಲಿ ಶಾಸಕರ ಸಹಾಯ ಪಡೆದು ಶುದ್ಧ ಕುಡಿಯುವ ನೀರಿನ ಘಟಕಗಳನ್ನು 16 ವಾಡ್ ಗಳಲ್ಲಿ ಸ್ಥಾಪಿಸಲಾಗುವುದು ಎಂದರು. ಪಪಂ ಸದಸ್ಯರಾದ ಸುರೇಶ್ ಹೊಸಕೇರಿ, ಮಂಜಪ್ಪ ಸರಳಿನಮನೆ ಮಾತನಾಡಿದರು. ಪಪಂ ಉಪಾಧ್ಯಕ್ಷೆ ವೀಣಾ ಸುರೇಶ್, ಸದಸ್ಯರಾದ ಎಸ್.ಎನ್. ಪ್ರಕಾಶ್, ಚಂದ್ರಶೇಖರ ಪಾಟೀಲ್, ಗುಲ್ಶಿರಾಖಾನಂ, ಜಿ.ಆರ್. ಕವಿತಾ, ವಿಜಯಮ್ಮ, ಸುಶೀಲಮ್ಮ ದುರ್ಗಪ್ಪ, ನೂತನ ನಾಮ ನಿರ್ದೇಶನ ಸದಸ್ಯರಾದ ಮಾಲತೇಶ್ ಪಾಟೀಲ್, ಚಮನ್ಸಾಬ್, ಅಶೋಕ್, ಕಂದಾಯ ನಿರೀಕ್ಷಕ ವಸಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Davanagere City Corporation: ನೂತನ ಮೇಯರ್-ಉಪ ಮೇಯರ್ ಆಯ್ಕೆ
Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.