ಜನ ಬಿಜೆಪಿ ಸರ್ಕಾರ ಬರಲೆಂದು ಮತ ಹಾಕಿದ್ದರು


Team Udayavani, Jun 4, 2018, 2:46 PM IST

dvg-1.jpg

ದಾವಣಗೆರೆ: ಜನರ ಆಶಯದಂತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕಿತ್ತು, ಆದರೆ, ಕೇವಲ 10 ಸೀಟುಗಳಿಂದ ನಾವು ಅಧಿಕಾರದಿಂದ ದೂರ ಇರಬೇಕಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬಾಡಾ ಕ್ರಾಸ್‌ನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ಯುವ ಘಟಕದಿಂದ ಹಮ್ಮಿಕೊಂಡಿದ್ದ ಮಾಯಕೊಂಡ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರ ಸನ್ಮಾನ ಸಮಾರಂಭ ಉದ್ಘಾಟಿಸಿ, ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಬರಬೇಕೆಂಬ ಉದ್ದೇಶದಿಂದ ಜನ ಮತ ಚಲಾಯಿಸಿದ್ದರು. ಆದರೆ, ಕೇವಲ 10 ಸೀಟುಗಳು ಕಡಮೆಯಾಗಿದ್ದರಿಂದ ನಾವು ಅಧಿಕಾರದಿಂದ ದೂರ ಇರಬೇಕಾಯಿತು ಎಂದರು.
 
ಈ ಬಾರಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ಅಸಾಧ್ಯದ ಮಾತು. ಯಾವುದೇ ಶಾಸಕರು ತಮ್ಮ ಪಕ್ಷ ಬಿಟ್ಟು ನಮ್ಮ ಪಕ್ಷಕ್ಕೆ ಬರಲ್ಲ. ಪಕ್ಷಾಂತರ ಕಾಯ್ದೆಯ ಭಯದಿಂದ ಯಾರೂ ಸಹ ತಮ್ಮ ಪಕ್ಷ ಬಿಡಲು ಆಗಲ್ಲ. ಇದೇ ಕಾರಣಕ್ಕೆ ನಾವು ಮುಂದೆ ಮತ್ತೆ ಚುನಾವಣೆ ಎದುರಿಸಿಯೇ ಅಧಿಕಾರಕ್ಕೆ ಬರಬೇಕಿದೆ ಎಂದು ಅವರು ತಿಳಿಸಿದರು. 

ಚುನಾವಣೆಗೂ ಮುನ್ನ ಹಾದಿ, ಬೀದಿಯಲ್ಲಿ ಜಗಳ ಮಾಡಿಕೊಂಡಿದ್ದ ಕಾಂಗ್ರೆಸ್‌, ಜೆಡಿಎಸ್‌ ಪಕ್ಷದವರು ಚುನಾವಣೆ ನಂತರ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಪ್ಪನಾಣೆಗೂ ಮುಖ್ಯಮಂತ್ರಿ ಆಗಲ್ಲ ಅಂದರೆ, ಕುಮಾರಸ್ವಾಮಿ ಸಹ ಅಪ್ಪನಾಣೆ ಹಾಕಿದ್ದರು. ಆದರೆ, ಚುನಾವಣೆ ನಂತರ ಆಗಿದ್ದೇ ಬೇರೆ. ಕೇವಲ ಅಧಿಕಾರಕ್ಕಾಗಿ ಈ ಮೈತ್ರಿ ಮಾಡಿಕೊಂಡಿದ್ದಾರೆ. ಇದು ರಾಜ್ಯದ ಜನರಿಗೆ ಗೊತ್ತಾಗಿದೆ. ಈಗ ಚುನಾವಣೆ ನಡೆದರೆ ಬಿಜೆಪಿಯ 150 ಸೀಟು ಗೆಲ್ಲಿಸಲು
ರಾಜ್ಯದ ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ರಾಜ್ಯ ವಿಧಾನಸಭೆಗೂ ಚುನಾವಣೆ ನಡೆದರೆ ಇದು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಮುಂದೆ ಪಾಲಿಕೆ, ಲೋಕಸಭೆ ಚುನಾವಣೆ ಬರಲಿದೆ. ನರೇಂದ್ರ ಮೋದಿಯವರು ವಿದೇಶದಲ್ಲೂ ಸಹ ಉತ್ತಮ ಹೆಸರು ಮಾಡುವಂತಹ ಆಡಳಿತ ನೀಡಿದ್ದಾರೆ. ಅವರಿಲ್ಲದೇ ಹೋದರೆ ದೇಶಕ್ಕೆ ರಕ್ಷಣೆ ಇಲ್ಲ ಎಂದು ಜನ ಭಾವಿಸಿದ್ದಾರೆ. ಮುಂದಿನ ಚುನಾವಣೆ ನಂತರ ಮತ್ತೂಮ್ಮೆ ಮೋದಿಯವರನ್ನು ಅಧಿಕಾರಕ್ಕೆ ತರಬೇಕೆಂದು ಮಾತನಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯದ 28 ಸೀಟುಗಳಲ್ಲಿ ಎಲ್ಲಾ ಗೆಲ್ಲಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು. 

ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ಎಸ್‌.ಎ. ರವೀಂದ್ರನಾಥ, ಪ್ರೊ| ಎನ್‌. ಲಿಂಗಣ್ಣ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ಮಾಜಿ ಅಧ್ಯಕ್ಷ ಅಣಬೇರು ಜೀವನಮೂರ್ತಿ, ಮುಖಂಡರಾದ ಮಳ್ಳೇಕಟ್ಟೆ ನಾಗರಾಜ, ಮುಕುಂದಪ್ಪ, ಎಚ್‌.ಕೆ. ಬಸವರಾಜ, ದೇವನಗರಿ ಮನು ಇತರರು ವೇದಿಕೆಯಲ್ಲಿದ್ದರು.

ಬಿಜೆಪಿ ಅಧಿಕಾರಕ್ಕೆ ಬರಬೇಕಿತ್ತು
ರಾಜ್ಯದಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ಬಿಜೆಪಿ ಅಧಿಕಾರಕ್ಕೆ ಬರಬೇಕಿತ್ತು. ಆದರೆ, ಇದು ಸಾಧ್ಯವಾಗಿಲ್ಲ. ಚುನಾವಣೆಯಲ್ಲಿ ಕೆಲವರು ನಂಬಿಸಿ, ಮೋಸ ಮಾಡಿದ್ದರ ಫಲವಾಗಿ ಬಿಜೆಪಿ ಅಧಿಕಾರಕ್ಕೆ ಬರಲಾಗಿಲ್ಲ. ಈ ರೀತಿ ನಂಬಿಸಿ, ಮೋಸ ಮಾಡುವವರು ರಾಜಕೀಯಕ್ಕೆ ಬರಬಾರದು. ನಿಸ್ವಾರ್ಥವಾಗಿ ಜನರ ಸೇವೆ ಮಾಡುವವರು ಮಾತ್ರ ರಾಜಕೀಯಕ್ಕೆ ಬರಬೇಕು. 
 ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳ ಪುರವರ್ಗ ಮಠ

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

Basvaraj

CM Aspirant: ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.