ಬಿಸಿಲಿನ ತಾಪದಿಂದ ಮೀನು ಸಾವು
Team Udayavani, Feb 14, 2017, 1:07 PM IST
ಹರಪನಹಳ್ಳಿ: ಅಂತರ್ಜಲ ಕುಸಿತದಿಂದ ನೀರು ಇಂಗಿ ಹೋಗಿ ತಾಲೂಕಿನ ಅಲಮರಸೀಕೆರೆ ಗ್ರಾಮದ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದ ಹಿನ್ನೆಲೆಯಲ್ಲಿ ಸೋಮವಾರ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತ್ತಿರುವ ಮೀನುಗಳಿಂದ ಹೊರ ಸೂಸುತ್ತಿರುವ ದುರ್ವಾಸನೆಯಿಂದ ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ತಪ್ಪಿಸಲು ಕೆರೆಯ ದಡ ಮತ್ತು ಕೆರೆಯ ತುಂಬಾ ಬೆಳಗ್ಗೆ 25 ಕೆ.ಜಿ ಪ್ಯಾಕೆಟ್ 6, ಮಧ್ಯಾಹ್ನ 4 ಪ್ಯಾಕೆಟ್ ಸೇರಿ ಒಟ್ಟು 10 ಪ್ಯಾಕೆಟ್ ಬ್ಲಿಚಿಂಗ್ ಪೌಡರ್ ಹಾಕಲಾಗಿದೆ.
ನೀರು ಕಡಿಮೆಯಾಗಿ ಬಿಸಿಲಿನ ತಾಪಮಾನದಿಂದ ಮೀನುಗಳು ಸತ್ತಿವೆ. ಇದರಿಂದ ಯಾವುದೇ ತರಹದ ಸಾಂಕ್ರಾಮಿಕ ರೋಗ ಹರಡುವುದಿಲ್ಲ ಎಂದು ಮೀನುಗಾರಿಗೆ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಎಲ್.ದೊಡ್ಮನೆ ತಿಳಿಸಿದ್ದಾರೆ.
ಕೆರೆಯ ಬಳಿ ಯಾರು ತೆರಳದಂತೆ ಹಾಗೂ ಜಾನುವಾರುಗಳಿಗೆ ನೀರು ಕುಡಿಸದಂತೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಗಿದೆ. ಭಾನುವಾರ ಇದ್ದಷ್ಟು ವಾಸನೆ ಸೋಮವಾರ ಇರಲಿಲ್ಲ. ಇನ್ನೊಂದು ದಿನ ಕಳೆದರೆ ಬಿಸಿಲಿಗೆ ಮೀನುಗಳು ಒಣಗಿ ವಾಸನೆ ಕಡಿಮೆಯಾಗಲಿದೆ.
ಇನ್ನೊಮ್ಮೆ ಯಾರು ಕೆರೆಯ ತೂಬು ಎತ್ತದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ರಮೇಶ್, ಕೆರೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಈ. ಗಂಗಪ್ಪ, ಹಾರಕನಾಳು ಆಸ್ಪತ್ರೆ ವೈದ್ಯಾಧಿಕಾರಿ ವಿಜಯಕುಮಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.